ಬಸ್ ಮೇಲಿನ ದಾಳಿಯ ಈ ಹಳೆಯ ವಿಡಿಯೋ ಗುಜರಾತ್‌ನದು, ಕರ್ನಾಟಕಕ್ಕೆ ಸಂಬಂಧಿಸಿದ್ದಲ್ಲ

ಕರ್ನಾಟಕ ಸರ್ಕಾರ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಒದಗಿಸಿದೆ. ಬಸ್ ಡ್ರೈವರ್ ಮುಸ್ಲಿಂ ಮಹಿಳೆಗೆ ಬಸ್ ನಿಲ್ಲಿಸದ ಕಾರಣ ಸರ್ಕಾರಿ ಬಸ್ಸಿನ ಮೇಲೆ ದಾಳಿ ನಡೆಸಿದ್ದಾರೆ ಎಂದು ಪ್ರತಿಪಾದಿಸಿ ವಿಡಿಯೋ ಒಂದನ್ನು ಹಂಚಿಕೊಳ್ಳಲಾಗುತ್ತಿದೆ. ಫ್ಯಾಕ್ಟ್ ಚೆಕ್ ಈ ಕುರಿತು ಹುಡುಕಿದಾಗ ಅದೇ ವಿಡಿಯೋ 2019ರಲ್ಲಿಯೇ ಇಂಟರ್‌ನೆಟ್‌ಗೆ ಅಪ್ಲೋಡ್ ಆಗಿರುವುದು ಕಂಡುಬಂದಿದೆ. ಜುಲೈ 2019ರ ವಿಡಿಯೋ ಗುಜರಾತ್‌ನ ಸೂರತ್‌ಗೆ ಸಂಬಂಧಿಸಿದ್ದಾಗಿದೆ. ದಿವ್ಯ ನ್ಯೂಸ್ ಚಾನೆಲ್ ಎಂಬ ಯೂಟ್ಯೂಬ್ ಚಾನೆಲ್‌ನ ವಿಡಿಯೋ ವರದಿಯ ಪ್ರಕಾರ ಗುಜರಾತ್‌ ರಾಜ್ಯದ ಸೂರತ್ ನ…

Read More
ಚಿನ್ನ

ಆಲೂಗೆಡ್ಡೆಯಿಂದ ಚಿನ್ನ ತೆಗೆಯಬಹುದೆಂಬ ಹೇಳಿಕೆ ರಾಹುಲ್ ಗಾಂಧಿಯವರದ್ದಲ್ಲ

ನಾನೊಂದು ಮೆಷಿನ್‌ ಸ್ಥಾಪಿಸುತ್ತೇನೆ. ಈ ಕಡೆ ಆಲೂಗೆಡ್ಡೆ ಹಾಕಿದರೆ ಆ ಕಡೆ ಚಿನ್ನ ಬರುತ್ತದೆ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ ಎಂಬ 20 ಸೆಕೆಂಡ್‌ಗಳ ವಿಡಿಯೋವೊಂದು ಹಲವು ವರ್ಷಗಳಿಂದ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಫ್ಯಾಕ್ಟ್ ಚೆಕ್: ವಾಸ್ತವ ಏನೆಂದರೆ 2017ರ ಗುಜರಾತ್ ಚುನಾವಣೆಗೆ ಮುಂಚೆ ಪಠಾಣ್ ಎಂಬಲ್ಲಿ ರಾಹುಲ್ ಗಾಂಧಿ ಮಾಡಿದ ಭಾಷಣದಿಂದ ಈ 20 ಸೆಕೆಂಡ್‌ಗಳ ಕ್ಲಿಪ್ ಅನ್ನು ಕಟ್ ಮಾಡಿ ತೆಗೆದುಕೊಳ್ಳಲಾಗಿದೆ. ಪೂರ್ಣ ಭಾಷಣದಲ್ಲಿ “ಮೋದಿಯವರು ಗುಜರಾತಿನ ರೈತರಿಗೆ ಹಲವು ಭರವಸೆಗಳನ್ನು ಕೊಟ್ಟಿದ್ದರು, ಆದರೆ…

Read More