ಕೇರಳದಲ್ಲಿ ನಡೆದ ಬಾಂಬ್ ಸ್ಪೋಟದ ಹಿಂದೆ ಮುಸ್ಲಿಮರ ಕೈವಾಡವಿದೆ ಎಂಬುದು ಸುಳ್ಳು

ಭಾರತವೂ ಸೇರಿದಂತೆ ಜಗತ್ತಿನ ಹಲವೆಡೆ ಭಯೋತ್ಪಾಧನೆಯಂತಹ ದುರ್ಘಟನೆ ಸಂಭವಿಸಿದಾಗಲೆಲ್ಲಾ ಮೊದಲು ಶಂಕೆ ಪಡುವುದು ಮುಸ್ಲಿಂ ಸಮುದಾಯದ ಮೇಲೆಯೆ. ಹಲವು ಮುಸ್ಲಿಂ ರಾಷ್ಟ್ರಗಳಲ್ಲಿ ಉಗ್ರರು ಭಯೋತ್ಪಾಧನೆಯಲ್ಲಿ ತೊಡಗಿಕೊಂಡಿರುವುದರಿಂದ ಈ ಪೂರ್ವಾಗ್ರಹಗಳು ಹುಟ್ಟಿಕೊಂಡಿವೆ. ಆದರೆ ಭಾರತದಲ್ಲಿಯೂ ಸಹ ಮುಸ್ಲಿಂ ಸಮುದಾಯದವರನ್ನು ಉಗ್ರರು, ಭಯೋತ್ಪಾದಕರೆಂದು ಕರೆಯುವ ಕೆಟ್ಟ ಪದ್ದತಿಯೊಂದು ರೂಢಿಯಲ್ಲಿದೆ. ಹೀಗೆ ಸುಳ್ಳು ಅಪವಾದಕ್ಕೆ ಗುರಿಯಾದ ಅನೇಕ ಮುಸ್ಲಿಂ ಯುವಕರ ಬದುಕು ನರಕವಾಗಿ ಬದಲಾಗಿದೆ, ಇಂತಹ ಆರೋಪಗಳಿಂದ ಖಿನ್ನತೆ, ಆತ್ಮಹತ್ಯೆಯಂತವುಗಳಿಗೆ ಸಹ ಕಾರಣವಾಗುತ್ತಿವೆ. ಇಂತಹದ್ದೇ ಇನ್ನೋಂದು ಆರೋಪವೊಂದು ಈಗ ಕೇಳಿ ಬರುತ್ತಿದೆ….

Read More

ಶಾರುಕ್‌ ಖಾನ್‌ ಪ್ಯಾಲೆಸ್ಟೈನ್‌ ಧ್ವಜದ ಜಾಕೆಟ್‌ ಹಾಕಿದ್ದರು ಎಂಬುದು ಸುಳ್ಳು

ಕಳೆದ ಕೆಲವು ದಿನಗಳಿಂದ ಇಸ್ರೇಲ್‌ ಮತ್ತು ಹಮಾಸ್‌ ಬಂಡುಕೋರರ ನಡುವಿನ ಯುದ್ಧ ತೀವ್ರವಾಗುತ್ತಿದ್ದು ಈ ಯುದ್ಧಕ್ಕೆ ಸಂಬಂಧಿಸಿದಂತೆ ಪ್ಯಾಲೆಸ್ಟೈನ್‌ ಹಾಗು ಇಸ್ರೇಲ್‌ಗೆ ಹಲವಾರು ಮಂದಿ ಬೆಂಬಲವನ್ನು ಸೂಚಿಸುತ್ತಿದ್ದಾರೆ. ಅದೇ ರೀತಿ ಬಾಲಿವುಡ್‌ನ ಖ್ಯಾತ ನಟ ಶಾರುಕ್‌ ಖಾನ್‌ ಪ್ಯಾಲೆಸ್ಟೈನ್‌ಗೆ ಬೆಂಬಲಿಸುವ ಉದ್ದೇಶದಿಂದ ಪ್ಯಾಲೆಸ್ಟೈನ್‌ ಧ್ವಜಕ್ಕೆ ಹೋಲಿಕೆಯಾಗುವ ಜಾಕೆಟ್‌ ಧರಿಸಿ ಫೋಟೋ ತೆಗೆಸಿಕೊಂಡಿದ್ದಾರೆ ಎಂಬ ಸುದ್ದಿ ವೈರಲ್‌ ಆಗಿತ್ತು. Fact Check : ಈ ಸುದ್ದಿಯ ಕುರಿತು ಸತ್ಯಾಸತ್ಯತೆಯಯನ್ನು ಪರಿಶೀಲಿಸಿದಾಗ ಶಾರುಕ್‌ ಖಾನ್‌ ಅವರ ಈ ಚಿತ್ರವನ್ನು Dubaibliss.com…

Read More
ಬಲ್ಗೇರಿಯಾ

ಈ ರಸ್ತೆಯ ಫೋಟೋ ಕರ್ನಾಟಕದ್ದಲ್ಲ, ಬದಲಿಗೆ ಬಲ್ಗೇರಿಯಾ ದೇಶದ್ದು

ಭಾಗ್ಯಗಳಿಂದ ಖಜಾನೆ ಖಾಲಿ ಆಗುತ್ತಿದೆ, ಆದರೂ ನಾವು ಅಭಿವೃದ್ದಿ ಕಾರ್ಯ ನಿಲ್ಲಿಸಲ್ಲ… ದುಂದುವೆಚ್ಚ ಕಮ್ಮಿ ಮಾಡಿ ವಾಹನದ ಚಕ್ರಗಳಿಗೆ ಹಾನಿ ಆಗದಂತೆ ಡಾಂಬರ್ ಹಾಕಿಸಿದ್ದೀವಿ… ನಾವು ಜನರ ಪರ… – ಇಂತಿ ನಿಮ್ಮ ನಿದ್ದೆರಾಮಯ್ಯ ಎಂದು ರಸ್ತೆಯ ಎರಡು ಬದಿಗೆ ಮಾತ್ರ ಡಾಂಬರ್ ಹಾಕಿರುವ ಫೋಟೊವೊಂದನ್ನು ಫೇಸ್‌ಬುಕ್‌ ನಲ್ಲಿ ಹಂಚಿಕೊಳ್ಳಲಾಗುತ್ತಿದೆ. ಬಹುತೇಕ ಬಿಜೆಪಿ ಬೆಂಬಲಿಗರು ಈ ಪೋಸ್ಟ್ ಹಂಚಿಕೊಂಡಿದ್ದು, ಆ ಮೂಲಕ ಕರ್ನಾಟಕದ ಬಳಿ  ಹಣ ಇಲ್ಲದೆ ಕಳಪೆ ರಸ್ತೆ ಮಾಡಿದ್ದಾರೆ ಎಂದು ಪ್ರತಿಪಾದಿಸಲಾಗಿದೆ. ಫ್ಯಾಕ್ಟ್ ಚೆಕ್…

Read More
ಹಿಂದುತ್ವ Hindutva

ಹಿಂದುತ್ವ ‘ಚುನಾವಣಾ ಆಟ ಆಡುವ ಕಾರ್ಡ್’ ಎಂದು ನರೇಂದ್ರ ಮೋದಿಯವರು ಹೇಳಿಲ್ಲ

‘ಹಿಂದುತ್ವ ಚುನಾವಣಾ ಆಟ ಆಡುವ ಕಾರ್ಡ್’ ಎಂದು ಪ್ರಧಾನಿ ನರೇಂದ್ರ ಮೋದಿ ತಮ್ಮ ಹಿಂದಿನ ಸಂದರ್ಶನವೊಂದರಲ್ಲಿ ಹೇಳಿದ್ದಾರೆ ಎನ್ನಲಾದ ವಿಡಿಯೋ ಒಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಫ್ಯಾಕ್ಟ್‌ಚೆಕ್: ಇದು 24 ವರ್ಷಗಳ ಹಿಂದೆ ಜೀ ನ್ಯೂಸ್‌ನವರು ನಡೆಸಿದ ನರೇಂದ್ರ ಮೋದಿಯವರ ಸಂದರ್ಶನದ ಹಳೆಯ ವಿಡಿಯೋ ಆಗಿದೆ. ಮೂಲ ಸಂದರ್ಶನದಲ್ಲಿ ವೈರಲ್ ಆಗುತ್ತಿರುವ ಹೇಳಿಕೆಗೆ ವ್ಯತಿರಿಕ್ತವಾಗಿ “ಹಿಂದುತ್ವ ಕೇವಲ ಚುನಾವಣಾ ಆಟ ಆಡುವ ಕಾರ್ಡ್ ಅಲ್ಲ” ಎಂದು ಮೋದಿಯವರು ಹೇಳಿದ್ದಾರೆ. ಅವರ ಕೊನೆಯ ಪದ “ಅಲ್ಲ” ಎಂಬುದನ್ನು ತೆಗೆದುಹಾಕಿ, ಎಡಿಟ್…

Read More

Fact Check : ತೆಲಂಗಾಣ ಚುನಾವಣ ಪ್ರಚಾರದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್‌ ಮದ್ಯ ಸೇವಿಸಿದ್ದರು ಎಂಬುದು ಸುಳ್ಳು

ಕರ್ನಾಟಕದ ಉಪ ಮುಖ್ಯಮಂತ್ರಿಗಳಾದ ಡಿ.ಕೆ ಶಿವಕುಮಾರ್‌ ತೆಲಂಗಾಣದ ಚುನಾವಣ ಪ್ರಚಾರದಲ್ಲಿ ತಮ್ಮನ್ನ ತಾವು ತೊಡಗಿಸಿಕೊಂಡಿದ್ದಾರೆ. ಈ ಪ್ರಚಾರ ಕಾರ್ಯದಲ್ಲಿ ಭಾಷಣ ಮಾಡಿದ್ದ ಡಿಸಿಎಂ ಡಿ.ಕೆ.ಶಿವಕುಮಾರ್‌ ತೆಲಂಗಾಣದ ಗ್ಯಾರಂಟಿಗಳು ಕರ್ನಾಟಕದ ಗ್ಯಾರಂಟಿಗಳಿಗಿಂತ ಅತ್ಯುತ್ತಮವಾಗಿದೆ ಎಂದು ಹೇಳುವ ಮೂಲಕ ಕರ್ನಾಟಕ ಕಾಂಗ್ರೆಸ್‌ ನಾಯಕರಿಗೆ ಇರಿಸು ಮುರಿಸು ಉಂಟಾಗುವಂತೆ ನಡೆದುಕೊಂಡಿದ್ದರು. ಇನ್ನು ತೆಲಂಗಾಣದ ತಂದೂರ್‌ನಲ್ಲಿ ನಡೆದ ಈ ಪ್ರಚಾರ ಕಾರ್ಯದಲ್ಲಿ ಡಿ.ಕೆ ಶಿವಕುಮಾರ್‌ ಅವರ ವಿರುದ್ಧ ಸಾಕಷ್ಟು ಮಂದಿ ಎಕ್ಸ್‌ ಬಳಕೆದಾರರು  ಡಿಕೆಶಿ ಕುಡಿದು ಪ್ರಚಾರ ಮಾಡಿದ್ದಾರೆ ಎಂದು ಟೀಕೆ ಮಾಡುತ್ತಿದ್ದಾರೆ….

Read More

ಛತ್ತಿಸ್ಗಡದ ಮುಖ್ಯಮಂತ್ರಿ ಅದಾನಿಗಾಗಿ ಕೆಲಸ ಮಾಡುತ್ತಾರೆ ಎಂದು ರಾಹುಲ್ ಗಾಂಧಿ ಹೇಳಿಲ್ಲ

ರಾಹುಲ್ ಗಾಂಧಿ ಅವರು ಟಿ.ಎಸ್.ಸಿಂಗ್ ದೇವ್ ಅವರನ್ನು ಛತ್ತೀಸ್ ಗಢದ ಮುಖ್ಯಮಂತ್ರಿ ಎಂದು ಉಲ್ಲೇಖಿಸಿದ್ದಾರೆ. ಮತ್ತು ಚತ್ತಿಸ್ಗಡದ ಮುಖ್ಯಮಂತ್ರಿಗಳು(ಕಾಂಗ್ರೆಸ್‌) ಸಹ ಅದಾನಿಯಂತವರಿಗೆ ಕೆಲಸ ಮಾಡುತ್ತಾರೆ.  ಎಂದು ಪ್ರತಿಪಾದಿಸಿ ಬಿಜೆಪಿ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವಿಯ, ಬಲಪಂಥೀಯ ಮಾಧ್ಯಮಗಳಾದ ಪೋಲಿಟಿಕಲ್ ಕಿಡ, ಮೇಘ ಅಪ್ಡೆಟ್ಸ್ ಬಲಪಂಥೀಯ ಪತ್ರಕರ್ತ ಮಿ. ಸಿನ್ಹ  ಸೇರಿದಂತೆ ಅನೇಕರು ಈ ವಿಡಿಯೋವನ್ನು ಹಂಚಿಕೊಳ್ಳುತ್ತಿದ್ದಾರೆ. ಫ್ಯಾಕ್ಟ್‌ಚೆಕ್: ಈ ವಿಡಿಯೋ 2023ರ ಅಕ್ಟೋಬರ್ 29ರಂದು ಛತ್ತಿಸ್ಗಡದ ರಾಜನಂದಗಾಂವ್‌ನಲ್ಲಿ ನಡೆದ ಸಾರ್ವಜನಿಕ ಭಾಷಣದ್ದಾಗಿದೆ. ತಮ್ಮ ಭಾಷಣದಲ್ಲಿ ರಾಹುಲ್…

Read More
ರಶೀದ್ ಖಾನ್

ಕ್ರಿಕೆಟಿಗ ರಶೀದ್ ಖಾನ್‌ಗೆ ಉದ್ಯಮಿ ರತನ್ ಟಾಟಾ 10 ಕೋಟಿ ರೂ ಬಹುಮಾನ ಘೋಷಿಸಿದ್ದಾರೆ ಎಂಬುದು ಸುಳ್ಳು

ಪಾಕ್ ವಿರುದ್ಧ ಗೆಲುವಿನ ಸಂಭ್ರಮಾಚರಣೆಯಲ್ಲಿ ಭಾರತದ ಧ್ವಜ ಪ್ರದರ್ಶಿಸಿದ್ದಕ್ಕಾಗಿ ಆಪ್ಘಾನಿಸ್ತಾನದ ಕ್ರಿಕೆಟಿಗ ರಶೀದ್ ಖಾನ್‌ಗೆ ICC 50 ಲಕ್ಷ ರೂ ದಂಡ ವಿಧಿಸಿದೆ. ನಂತರ ಅವರಿಗೆ ಉದ್ಯಮಿ ರತನ್ ಟಾಟಾ 10 ಕೋಟಿ ರೂ ಬಹುಮಾನ ಘೋಷಿಸಿದ್ದಾರೆ ಎಂಬ ಸುದ್ದಿಯೊಂದು ವೈರಲ್ ಆಗುತ್ತಿದೆ. ಫ್ಯಾಕ್ಟ್‌ಚೆಕ್: ಈ ಕುರಿತು ತಮ್ಮ ಟ್ವಿಟರ್ (X) ಖಾತೆಯಲ್ಲಿ ಪ್ರತಿಕ್ರಿಯಿಸಿರುವ ರತನ್ ಟಾಟಾ, “ನಾನು ಯಾವುದೇ ಆಟಗಾರನಿಗೆ ಬಹುಮಾನ ಘೋಷಿಸಿಲ್ಲ. ನನಗೂ ಕ್ರಿಕೆಟ್‌ಗೂ ಯಾವುದೇ ಸಂಬಂಧವಿಲ್ಲ. ನನ್ನ ಅಧಿಕೃತ ಸಾಮಾಜಿಕ ಜಾಲತಾಣಗಳ ವೇದಿಕೆಗಳಲ್ಲಿ…

Read More
ತೆಲಂಗಾಣ

ತೆಲಂಗಾಣ ಸರ್ಕಾರ ಮುಸ್ಲಿಮರಿಗೆ ಮಾತ್ರ ಕಾರುಗಳನ್ನು ನೀಡುತ್ತಿಲ್ಲ, ಹಲವು ಸಮುದಾಯಗಳಿಗೆ ಈ ಸೌಲಭ್ಯವಿದೆ

ತೆಲಂಗಾಣ ಸರ್ಕಾರ ಮುಸ್ಲಿಮರಿಗೆ ಮಾತ್ರ ಕಾರುಗಳನ್ನು ನೀಡುವ ಯೋಜನೆ ಜಾರಿಗೆ ತಂದಿದೆ. ನಮ್ಮ ತೆರಿಗೆ ಹಣವನ್ನು ಮುಸ್ಲಿಮರ ತುಷ್ಟೀಕರಣ ಮಾಡಲು ಬಳಸುತ್ತಿದೆ ಎಂದು ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಬಿಜೆಪಿ ಶಿವಮೊಗ್ಗ ಪೇಜ್‌ನಲ್ಲಿ ಅದನ್ನು ಹಂಚಿಕೊಂಡು ಮುಸ್ಲಿಮರ ವಿರುದ್ಧ ಕಿಡಿಕಾರಲಾಗಿದೆ. ಇದು ನಿಜವೇ ಎಂದು ಪರಿಶೀಲಿಸೋಣ.   ತೆಲಂಗಾಣ ರಾಜ್ಯ ಸರ್ಕಾರವು ಚಾಲಕರ ಸಬಲೀಕರಣ ಕಾರ್ಯಕ್ರಮದ ಭಾಗವಾಗಿ ಅಲ್ಪಸಂಖ್ಯಾತರ ಹಣಕಾಸು ಕಾರ್ಪೊರೇಶನ್‌ನಿಂದ ಅರ್ಹ ಅಲ್ಪಸಂಖ್ಯಾತ ಚಾಲಕರಿಗೆ  ಡ್ರೈವರ್ ಕಮ್ ಓನರ್ ಯೋಜನೆಯಡಿ ಕಾರು ತೆಗೆದುಕೊಳ್ಳಲು ಸಹಾಯಧನ ಒದಗಿಸುತ್ತಿದೆ….

Read More

Fact Check : ಹಮಾಸ್‌ ಶಾಲಾ ಮಕ್ಕಳಿಗೆ ಮಿಲಿಟರಿ ತರಬೇತಿ ನೀಡುತ್ತಿದೆ ಎಂದು ಹಳೆಯ ವಿಡಿಯೋ ಹಂಚಿಕೆ

ಶಾಲಾ-ವಯಸ್ಸಿನ ಮಕ್ಕಳಿಗೆ ಶಸ್ತ್ರಾಸ್ತ್ರ ಮತ್ತು ಮಿಲಿಟರಿ ವ್ಯಾಯಾಮಗಳಲ್ಲಿ ತರಬೇತಿ ಪಡೆಯುತ್ತಿರುವುದನ್ನು ತೋರಿಸುವ ವೀಡಿಯೊವು ಪ್ರಸ್ತುತ ಸಾಮಾಜಿಕ ಮಾಧ್ಯಮದಲ್ಲಿ ಪ್ರಸಾರವಾಗುತ್ತಿದ್ದು, ಈಗ ನಡೆಯುತ್ತಿರುವ ಇಸ್ರೇಲ್-ಹಮಾಸ್ ನಡುವಿನ ಸಂಘರ್ಷಕ್ಕೆ ಸಂಬಂಧಿಸಿದ್ದಾಗಿದೆ ಎಂದು ಹಂಚಿಕೊಳ್ಳಲಾಗುತ್ತಿದೆ.. ಆದರೆ ಈ ವಿಡಿಯೋ ಸತ್ಯಾಸತ್ಯತೆಯನ್ನು ಪರಶೀಲಿಸಿದಾಗ ಸಿಕ್ಕ ಉತ್ತರವೇ ಬೇರೆಯದ್ದಾಗಿತ್ತು. ಕಳೆದ ಒಂದು ಎರಡು ವಾರಗಳಿಂದ “ಹಮಾಸ್‌ ಬಂಡುಕೋರಾರು ಇಸ್ರೇಲ್‌ ವಿರುದ್ಧ ಹೋರಾಟವನ್ನು ಮುಂದುವರೆಸಲು ಶಾಲಾ ಮಕ್ಕಳಿಗೆ ಸೈನಿಕ ತರಬೇತಿಯನ್ನು ನೀಡುತ್ತಿದೆ. ಯುದ್ಧದಲ್ಲಿ ಹೋರಾಡಲು ಮಕ್ಕಳನ್ನ ಮುಂದಕ್ಕೆ ಬಿಟ್ಟು ಹಮಾಸ್‌ ಬಂಡುಕೋರರು ತಪ್ಪಿಸಿಕೊಳ್ಳಲು ರಣತಂತ್ರವನ್ನು ಹೂಡುತ್ತಿದ್ದಾರೆ…

Read More
ಮುಸ್ಲಿಂ

Fact Check: ಮುಸ್ಲಿಂ ವ್ಯಕ್ತಿಯೊಬ್ಬ ತನ್ನ ಮಗಳನ್ನೇ ಮದುವೆಯಾಗಿದ್ದಾನೆ ಎಂಬುದು ಸುಳ್ಳು

ಇದು ಇಸ್ಲಾಂನ ಸೌಂದರ್ಯ. ಇಲ್ಲಿ ಹೆಂಡತಿಯಾಗಲು ವಯಸ್ಸು ಮುಖ್ಯವಲ್ಲ. ಮುಸ್ಲಿಂ ವ್ಯಕ್ತಿಯೊಬ್ಬ ತನ್ನ ಮಗಳಾದ ಪುಟ್ಟ ಬಾಲಕಿಯನ್ನೇ ಮದುವೆಯಾಗಿದ್ದಾನೆ. ಎಂಬ ವಿಡಿಯೋ ಒಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಫ್ಯಾಕ್ಟ್‌ಚೆಕ್: ಇಟಲಿಯ ಕ್ಯಾಥೋಲಿಕ್ ಕುಟುಂಬವೊಂದು ಕ್ರಿಶ್ಚಿಯನ್ ಸಂಪ್ರದಾಯದಂತೆ ತಮ್ಮ ಮಗಳ ಮೊದಲ ಕಮುನಿಯನ್(communion ceremony) ಆಚರಣೆಯನ್ನು ನಡೆಸುತ್ತಿರುವ ವಿಡಿಯೋ ಇದಾಗಿದೆ. ಹುಡುಗಿಯ ತಂದೆ ಜಿನೊ ಕೊಪ್ಪೊಲಾ ಅಕ್ಟೋಬರ್ 23ರಂದು ತಮ್ಮ ಇಂಸ್ಟಾಗ್ರಾಮ್ ಖಾತೆಯಲ್ಲಿ ಈ ವಿಡಿಯೋವನ್ನು ಮೊದಲು ಹಂಚಿಕೊಂಡಿದ್ದಾರೆ. ಮಾರನೆ ದಿನವೂ ಸಹ ತನ್ನ ಹೆಂಡತಿ ಜೊತೆಗೆ ಮಗಳಿಗೆ…

Read More