Fact Check : ಪ್ರಧಾನಿ ಮೋದಿ ಅವರ ಸರ್ಕಾರ ಅವಧಿಯಲ್ಲೂ ಬಾಂಬ್‌ ಸ್ಪೋಟಗಳು ಸಂಭವಿಸಿವೆ

ಪ್ರಧಾನಿ ನರೇಂದ್ರ ಮೋದಿ ಅವರ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಅವರ ಸರ್ಕಾರದ ಪರವಾಗಿ ಮತ್ತು ವಿರುದ್ಧವಾಗಿ ಹಲವಾರು ರೀತಿಯ ಸುಳ್ಳು ಸುದ್ದಿಗಳು ವ್ಯಾಪಕವಾಗಿ ಹಬ್ಬುತ್ತಿವೆ. ಇದಕ್ಕೆ ಪೂರಕ ಎಂಬಂತೆ “ಪ್ರಧಾನಿ ನರೇಂದ್ರ ಮೋದಿ ಅವರ ಸರ್ಕಾರದ ಅವಧಿಯಲ್ಲಿ ಇದುವರೆಗೂ ಭಾರತದಲ್ಲಿ ಬಾಂಬ್ ಸ್ಫೋಟವಾಗಿರುವುದಕ್ಕೆ ಯಾವುದೇ ದಾಖಲೆಗಳಿಲ್ಲ” ಕೇಂದ್ರ ಬಿಜೆಪಿ ಸರ್ಕಾರದ ಪರವಾಗಿ ಈ ರೀತಿಯ ಸುಳ್ಳು ಸುದ್ದಿಯೊಂದನ್ನ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳಲಾಗುತ್ತಿದೆ. Fact Check : ಈ ಸುದ್ದಿಯ ಕುರಿತು ಸತ್ಯ ಶೋಧನೆಯನ್ನ ನಡೆಸಿದಾಗ ಜಮ್ಮು ಮತ್ತು…

Read More
ಗಾಜಾ

ಗಾಜಾದ ಬ್ಯಾಪ್ಟಿಸ್ಟ್ ಚರ್ಚ್ ಮೇಲೆ ಹಮಾಸ್ ದಾಳಿ ನಡೆಸುತ್ತಿದ್ದಾರೆ ಎಂಬುದು ಸುಳ್ಳು

ಗಾಜಾದ ಬ್ಯಾಪ್ಟಿಸ್ಟ್ ಚರ್ಚ್ ಮೇಲೆ ಪ್ಯಾಲೆಸ್ತೈನ್ ಉಗ್ರಗಾಮಿ ಗುಂಪು ಹಮಾಸ್ ದಾಳಿ ನಡೆಸುತ್ತಿದ್ದಾರೆ ಎಂಬ ಸುದ್ದಿಯೊಂದು ಹರಿದಾಡುತ್ತಿದ್ದು. 33 ಸೆಕೆಂಡುಗಳ ಈ ವಿಡಿಯೋದಲ್ಲಿ ಶಸ್ತ್ರಸಜ್ಜಿತ ಬಂದೂಕುಧಾರಿಗಳು ಏಸು ಶಿಲುಬೆಯನ್ನು ನೆಲದ ಮೇಲೆ ಎಸೆದು ನಂತರ ಅದನ್ನು ನಾಶಪಡಿಸುವುದನ್ನು ತೋರಿಸಲಾಗಿದೆ. ಬಂದೂಕುಧಾರಿಗಳು ಇತರ ಕ್ರಿಶ್ಚಿಯನ್ ಪ್ರತಿಮೆಗಳನ್ನು ನಾಶಪಡಿಸುವುದನ್ನು ಸಹ ಕ್ಲಿಪ್ ನಲ್ಲಿ ನೋಡಬಹುದಾಗಿದೆ.  ಅಮಿತಾಭ್ ಚೌಧರಿ (@MithilaWaala) ಮತ್ತು ಅನಿಲ್ ಕೌಹ್ಲಿ ಎಂಬುವವರು ಈ ವಿಡಿಯೋವನ್ನು  ತಮ್ಮ ಎಕ್ಸ್(X) ಖಾತೆಯಲ್ಲಿ ” ಗಾಜಾ ನಗರದ ಬ್ಯಾಪ್ಟಿಸ್ಟ್ ಚರ್ಚ್ ಅನ್ನು…

Read More

Fact Check: 5000 ಹಿಂದೂ ಸಾಧು-ಸಂತರನ್ನು, ಇಂದಿರಾಗಾಂಧಿ ಗುಂಡಿಕ್ಕಿ ಹತ್ಯೆಗೈಸಿದ್ದರು ಎಂಬುದು ಸುಳ್ಳು

7 ನವೆಂಬರ್ 1966ರಂದು ಗೋಹತ್ಯೆ ನಿಷೇಧದ ಕಾನೂನಿಗಾಗಿ ಸಂಸತ್ ಭವನಕ್ಕೆ ನುಗ್ಗುತ್ತಿದ್ದ 5000 ಹಿಂದೂ ಸಾಧು-ಸಂತರನ್ನು, ಇಂದಿರಾಗಾಂಧಿ ಮುಸ್ಲಿಮರನ್ನು ಮೆಚ್ಚಿಸಲಿಕ್ಕಾಗಿ ಗುಂಡಿಕ್ಕಿ ಹತ್ಯೆಗೈದಿದ್ದರು. ನಿಮಗೆ ಗೊತ್ತೆ!? ನಮಗೆ ಇತಿಹಾಸದಲ್ಲಿ ಜಲಿಯನ್ ವಾಲಾಬಾಗ್ ಕಥೆಯನ್ನು ಕಲಿಸಲಾಗುತ್ತದೆ ಹೊರತು ಇಂತಹ ಘಟನೆಯನ್ನಲ್ಲ! ಎಂಬ ಸಂದೇಶವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಇದೇ ರೀತಿಯ ಇನ್ನೊಂದು ಸುದ್ದಿಯೊಂದು ಹರಿದಾಡುತ್ತಿದ್ದು, 1996, ಗೋಪಾಷ್ಟಮಿ ( ಗೋವುಗಳನ್ನು ಪೂಜಿಸುವ ಹಬ್ಬ ) ತಿಥಿಯಂದು, 3-7 ಲಕ್ಷ ಸಾಧುಗಳು ಗೋಹತ್ಯೆ ನಿಲ್ಲಿಸುವ ಕಾಯಿದೆ ಜಾರಿ ಮಾಡಬೇಕೆಂದು ದೆಹಲಿಯಲ್ಲಿ…

Read More

ವಿದೇಶ ಪ್ರಯಾಣಕ್ಕೆ ಮೋದಿಗಿಂತಲೂ ಮನಮೋಹನ್ ಸಿಂಗ್ ಹೆಚ್ಚು ಹಣ ಖರ್ಚು ಮಾಡಿದ್ರು ಎಂಬುದು ಸುಳ್ಳು

ವಿದೇಶ ಪ್ರಯಾಣಕ್ಕೆ ಹಾಲಿ ಪ್ರಧಾನಿ ಮೋದಿಗಿಂತಲೂ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಹೆಚ್ಚು ಹಣ ಖರ್ಚು ಮಾಡಿದ್ರು ಎಂದು ವಿವಾದಾತ್ಮಕ ಬಲಪಂಥೀಯ ಭಾಷಣಕಾರ ಚಕ್ರವರ್ತಿ ಸೂಲಿಬೆಲೆ ಭಾಷಣವೊಂದರಲ್ಲಿ ಹೇಳಿದ್ದಾರೆ. ಆ ವಿಡಿಯೋವನ್ನು ಇತಿಹಾಸ ಎನ್ನುವ ಫೇಸ್‌ಬುಕ್‌ ಪೇಜ್‌ನಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗಿದೆ. ಇದು ನಿಜವೇ ಎಂಬುದನ್ನು ಪರಿಶೀಲಿಸೋಣ. ಫ್ಯಾಕ್ಟ್ ಚೆಕ್ ಚಕ್ರವರ್ತಿ ಸೂಲಿಬೆಲೆಯವರು ತಮ್ಮ ಭಾಷಣದಲ್ಲಿ More Foreign Trips Than Manmohan Singh Yet Lesser Bill For PM Modi ಎಂಬ ಪತ್ರಿಕಾ ವರದಿಯನ್ನು ಉಲ್ಲೇಖಿಸಿದ್ದಾರೆ….

Read More

ಹೈದರಾಬಾದ್‌ನಲ್ಲಿ ಹಿಂದೂ ಹಬ್ಬ ಆಚರಿಸಿದ ಮಹಿಳೆಯರ ಬಂಧನವೆಂದು ಹಳೆಯ ವಿಡಿಯೋ ಹಂಚಿಕೆ

ಸಾಮಾಜಿಕ ಜಾಲತಾಣದಲ್ಲಿ ಕೋಮು ಸೌಹಾರ್ದತೆಯನ್ನು ಕದಡುವಂತಹ ಸುಳ್ಳು ಸುದ್ದಿಗಳನ್ನ ಇತ್ತೀಚೆಗಿನ ದಿನಗಳಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. ಸಳ್ಳು ಸುದ್ದಿಗಳನ್ನೇ ನಿಜವೆಂದು ನಂಬಿ ಸಾಕಷ್ಟು ಶೇರ್‌ ಕೂಡ ಮಾಡುತ್ತಾರೆ. ಇದೀಗ ಇಂತಹದ್ದೆ ಒಂದು ಸುಳ್ಳು ಸುದ್ದಿಯನ್ನು ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. ಅದಲ್ಲಿ “ಇತ್ತೀಚೆಗೆ ಶಾಂತಿಯುತವಾಗಿ ಹೈದರಾಬಾದ್‌ನಲ್ಲಿ ಹಿಂದೂಗಳ ಹಬ್ಬವಾದ ‘ಬತುಕಮ್ಮ’ ಆಡುತ್ತಿದ್ದ ಮಹಿಳೆಯರನ್ನು ಪೊಲೀಸರು ಬಂಧಿಸಿದ್ದಾರೆ. ಹಿಂದುಗಳು ಜಾಗೃತರಾಗಬೇಕು ಇದನ್ನು ಹಂಚಿಕೊಳ್ಳಿ” ಎಂದು ವಿಡಿಯೋವೊಂನ್ನು ಹಾಕಿ ಶೇರ್‌ ಮಾಡಲಾಗುತ್ತಿದೆ. Fact Check : ಈ ಕುರಿತು ಸತ್ಯಾಸತ್ಯತೆಯನ್ನು ಪರಿಶೀಲಿಸಿದಾಗ  ಇದು 2018ರ…

Read More
ಬ್ರಾಹ್ಮಣರು

ಅಂಬೇಡ್ಕರ್‌ರವರಿಗೆ ಪ್ರತಿ ಹಂತದಲ್ಲಿ ಬ್ರಾಹ್ಮಣರು ಸಹಾಯ ಮಾಡಿದ್ದಾರೆ ಎಂಬುದು ಸುಳ್ಳು

ಜಗತ್ತು ಕಂಡ ಶೋಷಿತರ ಪರವಾಗಿನ ಅಪ್ರತಿಮ ಹೋರಾಟಗಾರ, ಮಹಾನ್ ಜ್ಞಾನಿ, ವಿದ್ವಾಂಸ, ಭಾರತದ ಸಂವಿಧಾನದ ಕತೃ ಬಾಬಾ ಸಾಹೇಬ್ ಡಾ. ಬಿ.ಆರ್ ಅಂಬೇಡ್ಕರ್‌ರವರ ಕುರಿತು ಹಲವು ಸುಳ್ಳು ಸುದ್ದಿಗಳ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. ದಲಿತ ಸಮುದಾಯದಲ್ಲಿ ಹುಟ್ಟಿ, ತನ್ನ ಸ್ವಂತ ಪರಿಶ್ರಮದಿಂದ ಓದಿ, ವಿದ್ವತ್ ಗಳಿಸಿ, ಸತತ ಕೆಲಸಗಳ ಮೂಲಕ ಶೋಷಿತರ ವಿಮೋಚಕರಾದ ಅಂಬೇಡ್ಕರ್‌ರವರನ್ನು ವಿರೋಧಿಸುವ ಒಂದು ವರ್ಗ ಇರುವುದು ನಿಮಗೆಲ್ಲ ಗೊತ್ತಿದೆ. ಅಂತವರು ಸೃಷ್ಟಿಸಿದ ಸುಳ್ಳು ಸುದ್ದಿಗಳು ಮತ್ತು ಅದರ ಹಿಂದಿನ ವಾಸ್ತವವನ್ನು ತಿಳಿಯೋಣ. ಅಂಬೇಡ್ಕರ್‌ರವರ…

Read More

Fact Check: ನ್ಯೂಯಾರ್ಕ್‌ನಲ್ಲಿ ಇಸ್ರೇಲ್‌ ವಿರುದ್ಧ ಯಹೂದಿಗಳ ಪ್ರತಿಭಟನೆ ಎಂದು ಹಳೆಯ ವಿಡಿಯೋ ಹಂಚಿಕೆ

ಇಸ್ರೇಲ್‌ ಮತ್ತು ಹಮಾಸ್‌ ನಡುವೆ ಯುದ್ಧ ಪ್ರಾರಂಭವಾದ ನಂತರ ಸಾಕಷ್ಟು ಸುಳ್ಳು ಸುದ್ದಿಗಳು ಸಾಮಾಜಿಕ ಜಾಲತಾಣದಲ್ಲಿ ವಿಪರೀತವಾಗಿ ಹಬ್ಬುವುದಕ್ಕೆ ಪ್ರಾರಂಭವಾಗಿದೆ., ಹೀಗಾಗಿ ಈ ಯುದ್ಧದ ಕುರಿತು ಯಾವ ಸುದ್ದಿಯನ್ನು ನಂಬಬೇಕು ಮತ್ತು ನಂಬಬಾರದು ಎಂಬ ಗೊಂದಲ ಜನ ಸಾಮಾನ್ಯರಲ್ಲಿ ಮನೆ ಮಾಡಿದೆ. ಇದೇ ರೀತಿಯಾಗಿ, “ಇತ್ತೀಚಿಗೆ ಅಮೆರಿಕದ ನ್ಯೂಯಾರ್ಕ್‌ನಲ್ಲಿ ಇಸ್ರೇಲ್ ವಿರುದ್ಧ ಸಾವಿರಾರು ಯಹೂದಿಗಳು ಪ್ರತಿಭಟನೆ ನಡೆಸಿದ್ದಾರೆ. ಈ ಪ್ರತಿಭಟನೆಯಲ್ಲಿ ಕದನ ವಿರಾಮ ಘೋಷಿಸಬೇಕು ಎಂದು ಯಹೂದಿಗಳೇ ಒತ್ತಾಯಿಸಿದ್ದಾರೆ., ಈ ಪ್ರತಿಭಟನೆಯಲ್ಲಿ ಕೆಲವರನ್ನು ಬಂಧಿಸಲಾಗಿದೆ.” ಎಂಬ ಸುದ್ದಿ…

Read More

ಬಿಜೆಪಿಯು 3 ತಿಂಗಳ ಉಚಿತ ರೀಚಾರ್ಜ್‌ ನೀಡುತ್ತಿದೆ ಎಂಬುದು ಸುಳ್ಳು, ವಂಚನೆ

ಲೋಕಸಭೆ ಚುನಾವಣೆ ಹತ್ತಿರ ಬರುತ್ತಿದ್ದಂತೆ ನರೆಂದ್ರ ಮೋದಿಯವರನ್ನು ಮತ್ತೆ ಪ್ರಧಾನಮಂತ್ರಿಯನ್ನಾಗಿ ಮಾಡಲು ಬಿಜೆಪಿ 3 ತಿಂಗಳ ಫ್ರೀ ರೀಚಾರ್ಜ್ ಮಾಡಿಸುತ್ತಿದೆ. ಅಕ್ಟೋಬರ್ 15, 2024 ಕೊನೆಯ ದಿನಾಂಕವಾಗಿದೆ ಎಂಬ ಸಂದೇಶವೊಂದು ವಾಟ್ಸಾಪ್‌ಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿದೆ. ಇದು ನಿಜವೇ ಎಂದು ಪರಿಶೀಲಿಸೋಣ. ಫ್ಯಾಕ್ಟ್ ಚೆಕ್: ವಾಟ್ಸಾಪ್ ನಲ್ಲಿ ಬಂದ ಸಂದೇಶದ ಕೊನೆಯಲ್ಲಿರುವ ವೆಬ್‌ ಲಿಂಕ್ ಮೇಲೆ ಕ್ಲಿಕ್ ಮಾಡಿದಾಗ Website Status Suspicious ಎಂಬ ಎಚ್ಚರಿಕೆ ಕಾಣುತ್ತದೆ. ಆದರೂ ಪರವಾಗಿಲ್ಲ ಮುಂದುವರೆಯಿರಿ ಎಂಬುದರ ಮೇಲೆ ಒತ್ತಿದ್ದಾಗ 404 error…

Read More

Fact Check : ಕೇರಳದಲ್ಲಿ ನಡೆದ ಪ್ಯಾಲೆಸ್ಟೈನ್ ಪರವಾದ ಪ್ರತಿಭಟನೆಯಲ್ಲಿ ಇಟಲಿ ಧ್ವಜ ಪ್ರದರ್ಶನವಾಗಿಲ್ಲ

ಕೇರಳದಲ್ಲಿ ಪ್ಯಾಲೆಸ್ಟೈನ್ ಪರವಾದ ಪ್ರತಿಭಟನೆ ಹೆಚ್ಚಾಗುತ್ತಿದ್ದಂತೆ ಕೇರಳ ಕುರಿತು ಮತ್ತು ಅಲ್ಲಿನ ರಾಜಕೀಯ ಪಕ್ಷಗಳ ಕುರಿತು ಹೆಚ್ಚು ಸುಳ್ಳು ಸುದ್ದಿಗಳು ಹರಡುವುದಕ್ಕೆ ಪ್ರಾರಂಭವಾಗೊದೆ ಇದೇ ರೀತಿಯಾಗಿ “ಕೇರಳದಲ್ಲಿ ಪ್ಯಾಲೆಸ್ಟೈನ್ ಪರವಾಗಿ ಪ್ರತಿಭಟನಾ ಮೆರವಣಿಗೆ ನಡೆಸಲಾಗಿದೆ. ಈ ಪ್ರತಿಭಟನೆಯಲ್ಲಿ ಪ್ಯಾಲೆಸ್ಟೈನ್ ಧ್ವಜದ ಬದಲು ಇಟಲಿ ಧ್ವಜವನ್ನು ಪ್ರದರ್ಶಿಸಲಾಗಿದೆ. ಪ್ರತಿಭಟನಾಕಾರರಿಗೆ ಪ್ಯಾಲೆಸ್ಟೈನ್ ಧ್ವಜ ಮತ್ತು ಇಟಲಿ ಧ್ವಜದ ನಡುವೆ ಇರುವ ವ್ಯತ್ಯಾಸ ಗೊತ್ತಿಲ್ಲದಂತಾಗಿದೆ.” ಎಂಬ ಸುಳ್ಳು ಸುದ್ದಿಯನ್ನು ಸಾಮಾಜಿಕ ಜಾಲತಾಣದಲ್ಲಿ ಹರಿ ಬಿಡಲಾಗಿದೆ ಈ ಕುರಿತು ಸತ್ಯಾಸತ್ಯತೆಯನ್ನ ಪರಿಶೀಲಿಸಿದಾಗ ಕೇರಳದಲ್ಲಿ…

Read More
ಪಿಂಚಣಿ

ಗಾಂಧೀಜಿಯವರು ಬ್ರಿಟೀಷರಿಂದ ತಿಂಗಳಿಗೆ 100 ರೂ. ಪಿಂಚಣಿ ಪಡೆಯುತ್ತಿದ್ದರು ಎಂಬುದು ಸುಳ್ಳು

ರಾಷ್ಟ್ರಪಿತ ಮಹಾತ್ಮ ಗಾಂಧಿಯವರ ಕುರಿತು ಸದಾ ಒಂದಿಲ್ಲೊಂದು ಸುಳ್ಳು ಸುದ್ದಿಗಳು ಭಾರತದಾದ್ಯಂತ ಇಂದಿಗೂ ಈ ಕ್ಷಣಕ್ಕೂ ಹರಿದಾಡುತ್ತಲೇ ಇರುತ್ತವೆ.  ಬಹುಶಃ ಸ್ವತಂತ್ರ್ಯ ಚಳುವಳಿಯ ಪ್ರಮುಖ ನಾಯಕರಲ್ಲಿ ಗಾಂಧೀಜಿಯವರ ಕುರಿತು ಹರಿದಾಡಿದಷ್ಟು ಸುಳ್ಳುಗಳು ಮತ್ತೊಬ್ಬರದಿಲ್ಲ. ಇತ್ತೀಚೆಗೆ ಗಾಂಧಿಜಿಯವರ ಕುರಿತು ಇನ್ನೊಂದು ಸುದ್ದಿ ಹರಿದಾಡುತ್ತಿದ್ದು, ಅದು 1930 ರಲ್ಲಿ ಅಸಹಕಾರ ಚಳುವಳಿ ಉತ್ತುಂಗದಲ್ಲಿದ್ದಾಗ ಮಹಾತ್ಮಾ ಗಾಂಧಿಯವರು ತಮ್ಮ ವೈಯಕ್ತಿಕ ನಿರ್ವಹಣೆಗಾಗಿ 100 ರೂಪಾಯಿ ಪಿಂಚಣಿ ಅಥವಾ ಭತ್ಯೆಯನ್ನು ಪಡೆಯುತ್ತಿದ್ದರು ಎಂಬ ಸುಳ್ಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಡಾ. ವಿಕ್ರಮ್ ಸಂಪತ್…

Read More