Fact Check: ಪ್ರಧಾನಿ ಮೋದಿಯವರು ಗಾರ್ಬಾ ನೃತ್ಯದಲ್ಲಿ ಭಾಗವಸಿದ್ದಾರೆ ಎಂಬುದು ಸುಳ್ಳು

ಕೆಲವುದಿನಗಳ ಹಿಂದೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಹಂಪಿ ಉತ್ಸವದಲ್ಲಿ ವೀರ ಮಕ್ಕಳ ಕುಣಿತದಲ್ಲಿ ಹೆಜ್ಜೆ ಹಾಕಿ ಸುದ್ದಿಯಾಗಿದ್ದರು. ಹಲವರು ಇದನ್ನು ಶ್ಞಾಘಿಸಿದರೆ ಅನೇಕರು ಸಿದ್ದರಾಮಯ್ಯನವರನ್ನು ಟೀಕಿಸಿದ್ದಾರೆ. ಈಗ ನರೇಂದ್ರ ಮೋದಿಯವರು ನವರಾತ್ರಿಯ ಗುಜರಾತಿನ ಪಾರಂಪರಿಕ ಗಾರ್ಬಾ ನೃತ್ಯದಲ್ಲಿ ಭಾಗವಹಿಸಿದ್ದಾರೆ ಎಂದು ಪ್ರತಿಪಾದಿಸಿದ ವಿಡಿಯೋ ಒಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. “ಸಿದ್ದರಾಮಯ್ಯ ಕುಣಿದರೆ ತಪ್ಪು ಮೋದಿಯವರು ಕುಣಿದರೆ ಸರಿ, ಇದು ಭಕ್ತರ ಲಾಜಿಕ್” ಎಂದು ಹಲವರು ಇದನ್ನು ಟೀಕಿಸಿ ಹಂಚಿಕೊಂಡರೆ, ಇನ್ನೂ ಮೋದಿಯವರ ಅಭಿಮಾನಿಗಳು “ದೇಶಕ್ಕಾಗಿ ಬಿಡುವಿಲ್ಲದೆ ಕೆಲಸ ಮಾಡುತ್ತಿದ್ದ…

Read More

Fact Check : ಕಾಂಗ್ರೆಸ್‌ ಸರ್ಕಾರವಿರುವ ರಾಜಸ್ಥಾನದಲ್ಲಿ ಪೊಲೀಸರ ಮೇಲೆ ಹಲ್ಲೆ ನಡೆದಿದೆ ಎಂಬುದು ಸುಳ್ಳು

ರಾಜಸ್ಥಾನದಲ್ಲಿ ಅಧಿಕಾರದಲ್ಲಿರುವ ಕಾಂಗ್ರೆಸ್‌ ಸರ್ಕಾರದಿಂದ ಪೊಲೀಸರಿಗೆ ರಕ್ಷಣೆಯೇ ಇಲ್ಲ ಎಂಬ ಪೋಸ್ಟ್‌ ಒಂದನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳಲಾಗುತ್ತಿದೆ. ಸಾಮಾಜಿಕ ಜಾಲತಾಣ ಎಕ್ಸ್‌ ಬಳಕೆದಾರ ಗಜೇಂದ್ರ ಸಿಂಗ್‌ ಎಂಬಾತ ಹಂಚಿಕೊಂಡಿರುವ ಪೋಸ್ಟ್‌ನಲ್ಲಿ “ಇದು ರಾಜಸ್ಥಾನದ ಕೋಟಾ ಜಿಲ್ಲೆಯ ಹಳ್ಳಿಯೊಂದರಲ್ಲಿ ಜಿಹಾದಿಗಳಿಂದ ನಡೆದ ಘಟನೆ. ರಾಜಸ್ಥಾನದಲ್ಲಿ ಕಾಂಗ್ರೆಸ್ ಸರ್ಕಾರವಿದೆ. ನೋಡಿ ಪೊಲೀಸರೇ ಜಿಹಾದಿಗಳಿಂದ ಪ್ರಾಣಭಿಕ್ಷೆ ಬೇಡುತ್ತಿದ್ದಾರೆ. ಇನ್ನು ಸಾಮಾನ್ಯ ಹಿಂದುಗಳ ಪರಿಸ್ಥಿತಿ ಏನಾಗಬಹುದು. ಈ ದೃಶ್ಯಗಳು ಮುಂದಿನ ದಿನಗಳಲ್ಲಿ ಕರ್ನಾಟಕದಲ್ಲಿ ಕಂಡು ಬಂದರೆ ಆಶ್ಚರ್ಯವಿಲ್ಲ” ಎಂದು ಉಲ್ಲೇಖಿಸಿ ವಿಡಿಯೋವೊಂದನ್ನು ಹಂಚಿಕೊಂಡಿದ್ದಾನೆ….

Read More
ರಾಮ ನವಮಿ

ಕರ್ನಾಟಕದ ರಾಮನವಮಿಯ ತಿರುಚಿದ ವಿಡಿಯೋವನ್ನು ಉಜ್ಜೈನಿಯದು ಎಂದು ತಪ್ಪಾಗಿ ಹಂಚಿಕೊಳ್ಳಲಾಗುತ್ತಿದೆ

ಭಾರತದಲ್ಲಿ ಕಳೆದೆರಡು ದಶಕಗಳಿಂದ ಹಿಂದು ಮುಸ್ಲಿಂ ಕಲಹ ತಾರಕಕ್ಕೇರುತ್ತಿದೆ. ಹಿಂದು ಮುಸ್ಲಿಂ ಸಾಮರಸ್ಯ ಬೆಸೆಯಬೇಕಾದ ಅಧಿಕಾರರೂಢ ಸರ್ಕಾರಗಳೇ ಕೋಮುವಾದಕ್ಕೆ ಬೆಂಬಲ ನೀಡುತ್ತಿವೆ. ಪ್ರತಿನಿತ್ಯ ಮುಸ್ಲಿಂ ಸಮುದಾಯವನ್ನು ಕೇಂದ್ರವಾಗಿರಿಸಿಕೊಂಡು, ಆ ಸಮುದಾಯದ ಮೇಲೆ ಜನರಿಗೆ ದ್ವೇಷ ಮೂಡಿಸುವ ಸಲುವಾಗಿ ಅನೇಕ ಸುಳ್ಳುಗಳನ್ನು ಹರಿಬಿಡಲಾಗುತ್ತಿದೆ. ಅಂತಹದ್ದೆ ಒಂದು ಸುಳ್ಳು ಹಲವು ದಿನಗಳಿಂದ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. “ಮಧ್ಯಪ್ರದೇಶದ ಉಜ್ಜೈನಿಯಲ್ಲಿ ಮುಸ್ಲಿಮರು ಮೊಹರಂ ಮೆರವಣಿಗೆಯ ಸಂದರ್ಭದಲ್ಲಿ “ಪಾಕಿಸ್ತಾನ ಜಿಂದಾಬಾದ್” ಎಂದು ಫೋಷಣೆ ಕೂಗಿದ್ದಾರೆ. ಮಾರನೇ ದಿನವೇ ಆ ನಗರದ ಎಲ್ಲಾ ಹಿಂದುಗಳು…

Read More
5 ಲಕ್ಷ

ಹಮಾಸ್‌ 5 ಲಕ್ಷ, ನಾವು 25 ಕೋಟಿ ಶೀರ್ಷಿಕೆಯಲ್ಲಿ ಫೇಕ್ ನ್ಯೂಸ್: 2019ರ ವಿಡಿಯೋ ಪ್ರಕಟಿಸಿದ ಸುವರ್ಣ ನ್ಯೂಸ್

ಅವರು 5 ಲಕ್ಷ ಮಾತ್ರ. ಆದರೆ ನಾವು 25 ಕೋಟಿ ಮಂದಿ ಇದ್ದೇವೆ. ಮೋದಿ ಹಾಗೂ ಅಮಿತ್ ಶಾ ಸರಿಯಾಗಿ ಕೇಳಿಸಿಕೊಳ್ಳಿ. 25 ಕೋಟಿ ಜನಸಂಖ್ಯೆಯಲ್ಲಿ 5 ಕೋಟಿ ಮಂದಿ ಹೋರಾಟದಲ್ಲಿ ಪ್ರಾಣ ನೀಡಿದರೂ ನಾವು 20 ಕೋಟಿ ಇರುತ್ತೇವೆ. ಬಾಬಾ ಸಾಹೇಬ್ ಅಂಬೇಡ್ಕರ್ ಬರೆದಿರುವ ಸಂವಿಧಾನ ಬದಲಿಸಿ, ಶರಿಯಾ ಕಾನೂನು ಜಾರಿಗೆ ತರುತ್ತೇವೆ ಎಂಬುದಾಗಿ ವ್ಯಕ್ತಿಯೊಬ್ಬ ಹೇಳುವ ವಿಡಿಯೋವೊಂದು ಕಳೆದ ಒಂದು ತಿಂಗಳಿನಿಂದ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. Here a MusIim leader of India…

Read More

Fact Check : ದಸರಾ ಕಲಾವಿದರಿಗೆ ಸಹಿ ವ್ಯತ್ಯಾಸದಿಂದ ಚೆಕ್‌ಬೌನ್ಸ್‌ ಆಗಿದೆಯೇ ಹೊರತು ನಾಡಹಬ್ಬದಲ್ಲಿ ಹಗರಣವಾಗಿಲ್ಲ

ರಾಜ್ಯ ಸರ್ಕಾರವನ್ನು ಟೀಕಿಸುವ ಬರದಲ್ಲಿ ಸುಳ್ಳು ಸುಳ್ಳು ಪ್ರತಿಪಾದನೆಯೊಂದಿಗೆ ವಿಡಿಯೋವೊಂದು ವೈರಲ್‌ ಆಗಿದೆ. ಅದರಲ್ಲಿ “ಥೂ ನಿಮ್ಮ ಸರ್ಕಾರಕ್ಕೆ !! ದಸರಾ ಕಲಾವಿದರಿಗೆ ಕೊಟ್ಟ ಚೆಕ್‌ ಬೌನ್ಸ್‌ ಆಗಿದ್ದಲ್ಲದೆ ಅವರಿಗೆ ದಂಡ ಹಾಕಲಾಗಿದೆ!! ನಾಡಹಬ್ಬದಲ್ಲೂ ಹಗರಣ ಮಾಡಿದ ಕಾಂಗ್ರೆಸ್ಸನ್ನು ಖಂಡಿಸಲು ಶೇರ್‌ ಮಾಡಿ” ಎಂದು ಬರೆದುಕೊಳ್ಳಲಾಗಿದೆ. ಇದರ ಕುರಿತು ಪರಿಶೀಲನೆ ನಡೆಸಿದಾಗ ದಸರಾ ಅಂಗವಾಗಿ ಖರ್ಚು ವೆಚ್ಚದ ಲೆಕ್ಕಕ್ಕಾಗಿ ಆಯಾ ಉಪಸಮಿತಿಗಳ ಹೆಸರಿನಲ್ಲಿಯೇ ಬ್ಯಾಂಕ್‌ ಖಾತೆ ತೆರೆದು ಆ ಮೂಲಕವೇ ಕಲಾವಿದರಿಗೆ ಗೌರವ ಸಂಭಾವನೆಯ ಚೆಕ್‌ ನೀಡಲಾಗುತ್ತಿದೆ….

Read More