ಕಾವೇರಿ ವಿವಾದದ ಕುರಿತು ಕ್ರಿಕೆಟಿಗ ಕೆ.ಎಲ್ ರಾಹುಲ್ ಟ್ವೀಟ್ ಮಾಡಿಲ್ಲ

“ಕಾವೇರಿ ಎಂದೂ ನಮ್ಮದು ಕಾವೇರಿ ಹುಟ್ಟುವುದು, ಅತಿ ಹೆಚ್ಚು ನೀರು ಸಂಗ್ರಹವಾಗುವುದು ಕರ್ನಾಟಕದಲ್ಲಿ. ಆದರೆ, ಆ ನೀರನ್ನು ಬಳಸಿಕೊಳ್ಳಲು ಪ್ರತಿ ವರ್ಷ ಕಾನೂನು ಹೋರಾಟದ ಜತೆಗೆ ಬೀದಿಗಿಳಿದು ಹೋರಾಟ ಮಾಡಬೇಕಾದ ಅನಿವಾರ್ಯ ಕನ್ನಡಿಗರದು ಇದು ನಮ್ಮ ದುರಂತ. ಕಾವೇರಿ ಇಡೀ ಕರ್ನಾಟಕದ ಆಸ್ತಿ. #ಕಾವೇರೀನಮ್ಮದು” ಎಂದು ಕ್ರಿಕೆಟಿಗ ಕೆ.ಎಲ್ ರಾಹುಲ್ ಟ್ವೀಟ್ ಮಾಡಿದ್ದಾರೆ ಎಂಬ ಸಂದೇಶವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಫ್ಯಾಕ್ಟ್‌ಚೆಕ್: ಈ ಟ್ವೀಟ್ ಫ್ಯಾನ್ ಅಕೌಂಟ್ ನಿಂದ ಮಾಡಲಾಗಿದ್ದು. ರಾಹುಲ್ ಅಭಿಮಾನಿಯೊಬ್ಬರು ಕೆ.ಎಲ್ ರಾಹುಲ್ ಹೆಸರು…

Read More

ಶೃಂಗೇರಿ ಶ್ರೀಗಳು ರಾಹುಲ್ ಮತ್ತು ಸಿದ್ದರಾಮಯ್ಯನವರಿಗೆ ಆಶೀರ್ವಾದಿಸಲು ನಿರಾಕರಿಸಿದ್ದಾರೆ ಎಂಬುದು ಸುಳ್ಳು.

ಶೃಂಗೇರಿ ಶಾರದ ಪೀಠದ ಜಗದ್ಗುರು ಶ್ರೀ ಶ್ರೀ ಶ್ರೀ ಭಾರತಿ ತೀರ್ಥರು ಹಿಂದು ವಿರೋಧಿಗಳಾದ ರಾಹುಲ್ ಮತ್ತು ಸಿದ್ದರಾಮಯ್ಯನವರಿಗೆ ಆಶೀರ್ವಾದ ಮಾಡಲು ನಿರಾಕರಿಸಿದ್ದಾರೆ ಎಂಬ ಸುದ್ಧಿಯೊಂದು ಹರಿದಾಡುತ್ತಿದೆ. ಫ್ಯಾಕ್ಟ್‌ಚೆಕ್: ರಾಹುಲ್ ಗಾಂಧಿ, ಸಿದ್ದರಾಮಯ್ಯನವರು ಮತ್ತು ಸಂಸದ ವೇಣುಗೋಪಾಲ್ ಸೇರಿದಂತೆ ಇತರ ಕಾಂಗ್ರೆಸ್ ಮುಖಂಡರು ಮಾರ್ಚ್, 2018ರಲ್ಲಿ ಶೃಂಗೇರಿ ಶಾರದ ಪೀಠಕ್ಕೆ ಭೇಟಿಕೊಟ್ಟು ಜಗದ್ಗುರು ಭಾರತಿ ತೀರ್ಥರನ್ನು ಭೇಟಿಯಾಗಿದ್ದರು. ಚರ್ಚೆಯ ನಂತರ ಶ್ರೀಗಳು ರಾಹುಲ್ ಮತ್ತು ಸಿದ್ದರಾಮಯ್ಯನವರಿಗೆ ಆಶೀರ್ವಾದಿಸಿದರು.ನಂತರ ರಾಹುಲ್ ಗಾಂಧಿಯವರಿಗೆ ಅವರ ತಂದೆ ರಾಜೀವ್ ಗಾಂಧಿಯವರ ಚಿತ್ರವನ್ನು…

Read More

ನಿತ್ಯಾ ಮೆನನ್ ತಮಿಳು ನಟನಿಂದ ಕಿರುಕುಳಕ್ಕೆ ಒಳಗಾಗಿದ್ದರು ಎಂಬುದು ಸುಳ್ಳು

ಬಹುಭಾಷಾ  ನಟಿ ನಿತ್ಯಾ ಮೆನನ್‌ರವರಿಗೆ “ಚಿತ್ರಿಕರಣದ ಸಂದರ್ಭದಲ್ಲಿ ತಮಿಳು ನಟನೊಬ್ಬ ಕಿರುಕುಳ ನೀಡಿದ್ದಾನೆ ಮತ್ತು ತಮಿಳು ಸಿನಿಮಾ ಇಂಡಸ್ಟ್ರಿ ಯಿಂದ ನಾನು ಅನೇಕ ತೊಂದರೆಗಳನ್ನು ಎದುರಿಸಿದ್ದೇನೆ ಎಂದು ಇತ್ತೀಚೆಗೆ ನಡೆದ ಸಂದರ್ಶನವೊಂದರಲ್ಲಿ ಹೇಳಿದ್ದಾರೆ ಎಂದು ಅನೇಕ ತಮಿಳು ಚಾನೆಲ್‌ಗಳು ವರದಿ ಮಾಡಿವೆ. ಫ್ಯಾಕ್ಟ್‌ಚೆಕ್: “ನಾನು ಇತ್ತೀಚೆಗೆ ಯಾವ ಸಂದರ್ಶನ ನೀಡಿಲ್ಲ ಮತ್ತು ಇಂತಹ ಯಾವುದೇ ಹೇಳಿಕೆ ನೀಡಿಲ್ಲ. ಈ ಸುಳ್ಳು ಸುದ್ಧಿಯನ್ನು ಯಾರು ಮೊದಲು ಹಬ್ಬಿಸಿದರು ಎಂದು ತಿಳಿದು ಬಂದರೆ ನನ್ನ ಗಮನಕ್ಕೆ ತನ್ನಿ. ಕೆಲವು ಪತ್ರಕರ್ತರು…

Read More

ಫ್ಯಾಕ್ಟ್‌ಚೆಕ್: ದಿಢೀರ್‌ ಖ್ಯಾತಿ ಗಳಿಸಲು ಬೆನ್ನಿನ ಮೇಲೆ PFI ಎಂದು ಬರೆಸಿಕೊಂಡು ಹಲ್ಲೆ ನಾಟಕವಾಡಿದ ಸೈನಿಕ

ಕೇರಳದ ಕೊಲ್ಲಂನಲ್ಲಿ 6 ಜನ ಅಪರಿಚಿತರು ಸೈನಿಕ ಶೈನ್ ಕುಮಾರ್ ಮೇಲೆ ಹಲ್ಲೆ ನಡೆಸಿ, ಅವರ ಕೈಕಾಲು ಕಟ್ಟಿ, ಬೆನ್ನಿನ ಮೇಲೆ PFI ಎಂದು ಬರೆದು ಕ್ರೌರ್ಯ ಎಸಗಿದ್ದಾರೆ ಎಂಬ ಫೋಟೊ ಎಲ್ಲೆಡೆ ವೈರಲ್ ಆಗುತ್ತಿದೆ. ಬಿಜೆಪಿ ಮುಖಂಡರು ಈ ಫೋಟೊ ಹಂಚಿಕೊಂಡು ಸೈನಿಕರಿಗೇ ಈ ರಾಜ್ಯದಲ್ಲಿ ರಕ್ಷಣೆಯಿಲ್ಲ ಎಂದು ಆಡಳಿತರೂಢ ಸಿಪಿಎಂ ಸರ್ಕಾರದ ಮೇಲೆ ಕಿಡಿಕಾರಿದ್ದಾರೆ.‌ ANI ಸೇರಿದಂತೆ ಹಲವಾರು ಮಾಧ್ಯಮಗಳು ಅದನ್ನೇ ವರದಿ ಮಾಡಿವೆ. ಕನ್ನಡದ ಫೇಕ್‌ನ್ಯೂಸ್‌ ಪೇಜ್‌ ಪೋಸ್ಟ್‌ ಕಾರ್ಡ್‌ ಕನ್ನಡ ದೇವರ…

Read More

ಮಲ್ಲಿಕಾರ್ಜುನ್ ಖರ್ಗೆ 50 ಸಾವಿರ ಕೋಟಿ ಆಕ್ರಮ ಆಸ್ತಿ ಹೊಂದಿದ್ದಾರೆ ಎಂಬುದು ಸುಳ್ಳು

ಸಂಸತ್ತಿನಲ್ಲಿ ಮೋದಿಜಿಯವರು ಖರ್ಗೆಯವರ ಆಸ್ತಿ ವಿವರಗಳನ್ನು ಬಯಲು ಮಾಡಿದ್ದಾರೆ ಎಂಬ ವಾಟ್ಸಾಪ್ ಸಂದೇಶವೊಂದು ಹರಿದಾಡುತ್ತಿದೆ. ಖರ್ಗೆಯವರು ಸಂಸತ್ತಿನಲ್ಲಿ ದಲಿತರಿಗೆ ಕನಿಷ್ಠ ಒಂದು ಪ್ರತಿಶತ ಭೂಮಿಯನ್ನು ಮಂಜೂರು ಮಾಡಬೇಕೆಂದು ಒತ್ತಾಯಿಸಿದ್ದರು. ಆಗ ಪ್ರತಿಯಾಗಿ ಮೋದಿಯವರು ನೀವೇ ದಲಿತರಲ್ಲವೇ? ನಿಮ್ಮ ಆಸ್ತಿ ವಿವರಗಳನ್ನು ನಾನು ಹೇಳಲೆ ಎಂದು “ಬೆಂಗಳೂರಿನ ಬನ್ನೇರುಘಟ್ಟ ಪ್ರದೇಶದಲ್ಲಿ 500 ಕೋಟಿ ರೂಪಾಯಿ ವೆಚ್ಚದ ವಾಣಿಜ್ಯ ಸಂಕೀರ್ಣ, ಚಿಕ್ಕಮಗಳೂರಿನಲ್ಲಿ 300 ಎಕರೆ ಕಾಫಿ ಎಸ್ಟೇಟ್, ಕೆಂಗೇರಿಯಲ್ಲಿ 40 ಕೋಟಿಯ ಫಾರ್ಮ್ ಹೌಸ್! ರಾಮಯ್ಯ ಕಾಲೇಜಿನಲ್ಲಿ 25 ಕೋಟಿ…

Read More

ಯುವತಿಯ ಕೊಲೆ ಮಾಡಿದ UP ಮುಸ್ಲಿಂ ಯುವಕರಿಗೆ ಯೋಗಿಯ ಶಿಕ್ಷೆ ಎಂಬುದು ಸುಳ್ಳು

ಉತ್ತರ ಪ್ರದೇಶದಲ್ಲಿ ಹುಡುಗಿಯ ದುಪ್ಪಟ ಹಿಡಿದು ಬೈಕಿನಲ್ಲಿ ಎಳೆದುಕೊಂಡು ಹೋಗಿ ಹುಡುಗಿಯ ಸಾವಿಗೆ ಕಾರಣರಾದ ಮೂವರು ಇಸ್ಲಾಂ ಜಿಹಾದಿಗಳಿಗೆ ಯೋಗಿ ಸರ್ಕಾರ ನೀಡಿರುವ ಬಹುಮಾನ! ಎಂದು ಹಲ್ಲೆಗೊಳಗಾದ ಆರೋಪಿಗಳು ತೆವಳುತ್ತಿರುವ ವಿಡಿಯೋ ಒಂದು ವೈರಲ್ ಆಗಿದೆ. ಫ್ಯಾಕ್ಟ್‌ಚೆಕ್: ಸತ್ಯವೇನೆಂದರೆ ಇದು ರಾಜಸ್ಥಾನದಲ್ಲಿ ನಡೆದ ಘಟನೆಯಾಗಿದ್ದು ಉತ್ತರ ಪ್ರದೇಶದ್ದಲ್ಲ. ಶಿಕ್ಷೆಗೊಳಗಾಗಿ ತೆವಳುತ್ತಿರುವವರು ಕೊಲೆ ಪ್ರಕರಣದ ಆರೋಪಿಗಳಾದ ತೇಜ್ವೀರ್, ಯುವರಾಜ್ ಮತ್ತು ಬಂಟಿ ಕುಶಾಲ್. ಇವರ ಹೆಸರುಗಳನ್ನು ಅರ್ಬಾಜ್, ಫೈಸಲ್ ಮತ್ತು ಶಹಬಾಜ್ ಎಂದು ತಪ್ಪಾಗಿ ತಿರುಚಲಾಗಿದೆ. ಇದನ್ನು ಬೂಮ್…

Read More

ಬಸ್ ಮೇಲಿನ ದಾಳಿಯ ಈ ಹಳೆಯ ವಿಡಿಯೋ ಗುಜರಾತ್‌ನದು, ಕರ್ನಾಟಕಕ್ಕೆ ಸಂಬಂಧಿಸಿದ್ದಲ್ಲ

ಕರ್ನಾಟಕ ಸರ್ಕಾರ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಒದಗಿಸಿದೆ. ಬಸ್ ಡ್ರೈವರ್ ಮುಸ್ಲಿಂ ಮಹಿಳೆಗೆ ಬಸ್ ನಿಲ್ಲಿಸದ ಕಾರಣ ಸರ್ಕಾರಿ ಬಸ್ಸಿನ ಮೇಲೆ ದಾಳಿ ನಡೆಸಿದ್ದಾರೆ ಎಂದು ಪ್ರತಿಪಾದಿಸಿ ವಿಡಿಯೋ ಒಂದನ್ನು ಹಂಚಿಕೊಳ್ಳಲಾಗುತ್ತಿದೆ. ಫ್ಯಾಕ್ಟ್ ಚೆಕ್ ಈ ಕುರಿತು ಹುಡುಕಿದಾಗ ಅದೇ ವಿಡಿಯೋ 2019ರಲ್ಲಿಯೇ ಇಂಟರ್‌ನೆಟ್‌ಗೆ ಅಪ್ಲೋಡ್ ಆಗಿರುವುದು ಕಂಡುಬಂದಿದೆ. ಜುಲೈ 2019ರ ವಿಡಿಯೋ ಗುಜರಾತ್‌ನ ಸೂರತ್‌ಗೆ ಸಂಬಂಧಿಸಿದ್ದಾಗಿದೆ. ದಿವ್ಯ ನ್ಯೂಸ್ ಚಾನೆಲ್ ಎಂಬ ಯೂಟ್ಯೂಬ್ ಚಾನೆಲ್‌ನ ವಿಡಿಯೋ ವರದಿಯ ಪ್ರಕಾರ ಗುಜರಾತ್‌ ರಾಜ್ಯದ ಸೂರತ್ ನ…

Read More
ಚಿನ್ನ

ಆಲೂಗೆಡ್ಡೆಯಿಂದ ಚಿನ್ನ ತೆಗೆಯಬಹುದೆಂಬ ಹೇಳಿಕೆ ರಾಹುಲ್ ಗಾಂಧಿಯವರದ್ದಲ್ಲ

ನಾನೊಂದು ಮೆಷಿನ್‌ ಸ್ಥಾಪಿಸುತ್ತೇನೆ. ಈ ಕಡೆ ಆಲೂಗೆಡ್ಡೆ ಹಾಕಿದರೆ ಆ ಕಡೆ ಚಿನ್ನ ಬರುತ್ತದೆ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ ಎಂಬ 20 ಸೆಕೆಂಡ್‌ಗಳ ವಿಡಿಯೋವೊಂದು ಹಲವು ವರ್ಷಗಳಿಂದ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಫ್ಯಾಕ್ಟ್ ಚೆಕ್: ವಾಸ್ತವ ಏನೆಂದರೆ 2017ರ ಗುಜರಾತ್ ಚುನಾವಣೆಗೆ ಮುಂಚೆ ಪಠಾಣ್ ಎಂಬಲ್ಲಿ ರಾಹುಲ್ ಗಾಂಧಿ ಮಾಡಿದ ಭಾಷಣದಿಂದ ಈ 20 ಸೆಕೆಂಡ್‌ಗಳ ಕ್ಲಿಪ್ ಅನ್ನು ಕಟ್ ಮಾಡಿ ತೆಗೆದುಕೊಳ್ಳಲಾಗಿದೆ. ಪೂರ್ಣ ಭಾಷಣದಲ್ಲಿ “ಮೋದಿಯವರು ಗುಜರಾತಿನ ರೈತರಿಗೆ ಹಲವು ಭರವಸೆಗಳನ್ನು ಕೊಟ್ಟಿದ್ದರು, ಆದರೆ…

Read More

ಕಾಂಗ್ರೆಸ್ ರಾಮಮಂದಿರದ ವಿರುದ್ದ 24 ವಕೀಲರನ್ನು ನೇಮಿಸಿದೆ ಎಂಬುದು ಸುಳ್ಳು

“ಕಾಂಗ್ರೆಸ್ ಕಾರ್ಯಕರ್ತರು ಓಟು ಕೇಳಲು ಬಂದಾಗ ರಾಮಮಂದಿರದ ವಿರುದ್ಧ 24 ವಕೀಲರನ್ನು ನೇಮಿಸಿದ್ದು ಏಕೆ ಎಂದು ಪ್ರಶ್ನಿಸಿ” ಎಂದು ಬಾಲಿಹುಡ್‌ನ ಖ್ಯಾತ ನಟ ನಾನಾ ಪಾಟೇಕರ್ ಹೇಳಿದ್ದಾರೆ ಎನ್ನಲಾದ ಪೋಸ್ಟರ್ ಒಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಫ್ಯಾಕ್ಟ್ ಚೆಕ್: ಅಸಲಿ ವಿಷಯ ಏನೆಂದರೆ  ಅಯೋಧ್ಯೆಯ ಬಾಬರಿ ಮಸೀದಿ ಕೆಡವಿದ ಜಾಗ ನಮಗೆ ಸೇರಬೇಕೆಂದು ನಿರ್ಮೋಹಿ ಅಖಾಡ, ಸುನ್ನಿ ವಕ್ಫ್ ಮಂಡಳಿ ಮತ್ತು ರಾಮ್ ಲಲ್ಲಾ ವಾರಸುದಾರರು ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿತ್ತೇ ವಿನಃ ಕಾಂಗ್ರೆಸ್ ಅಲ್ಲ. ವಾಸ್ತವದಲ್ಲಿ…

Read More

ಮಹಿಳಾ ಮೀಸಲಾತಿ ಮತದಾನದ ವೇಳೆ ಸೋನಿಯಾ – ರಾಹುಲ್ ಗೈರು ಎಂಬುದು ಸುಳ್ಳು

ಲೋಕಸಭಾ ಅಧಿವೇಶನದಲ್ಲಿ ಮಹಿಳಾ ಮೀಸಲಾತಿ ಮತದಾನದ ಸಂದರ್ಭದಲ್ಲಿ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಮತ ಹಾಕದೇ ಗೈರು ಹಾಜರಾಗಿದ್ದರು ಎಂದು ಪ್ರತಿಪಾದಿಸಿ ಹಲವು ಮಾಧ್ಯಮಗಳು ವರದಿ ಮಾಡಿವೆ. ಫ್ಯಾಕ್ಟ್ ಚೆಕ್ ಸತ್ಯ ಏನೆಂದರೆ ಮಹಿಳಾ ಮೀಸಲಾತಿ ಅಂಗೀಕಾರದ ವೇಳೆ ಮತದಾನದಲ್ಲಿ ಸೋನಿಯಾ-ರಾಹುಲ್ ಇಬ್ಬರು ಭಾಗವಹಿಸಿ ತಮ್ಮ ಬೆಂಬಲ ಸೂಚಿಸಿದ್ದಾರೆ. ಆನಂತರದ ಚರ್ಚೆಗಳಲ್ಲಿಯೂ ಭಾಗವಹಿಸಿರುವುದನ್ನು ಹಲವು ಮಾಧ್ಯಮಗಳು ವರದಿ ಮಾಡಿವೆ. ಅವುಗಳನ್ನು ಈ ಇಲ್ಲಿ ಮತ್ತು ಇಲ್ಲಿ ನೋಡಬಹುದು. ಆದರೆ ಸದನದಲ್ಲಿ ಮಹಿಳಾ ಮೀಸಲಾತಿಯ ಪ್ರಸ್ತಾವನೆ ಸಲ್ಲಿಸುವ…

Read More