ರಾಹುಲ್ ಗಾಂಧಿ ತಮ್ಮ ಭಾಷಣದಲ್ಲಿ ತಾನೊಬ್ಬ ಟೈಲರ್ ಎಂದು ಕರೆದುಕೊಂಡಿದ್ದಾರೆ ಎಂಬುದು ಸುಳ್ಳು

ಸಧ್ಯ ಭಾರತದಲ್ಲಿ ಅತಿ ಹೆಚ್ಚು ಟೀಕೆಗೆ, ಅಪಪ್ರಚಾರಕ್ಕೆ ಒಳಗಾಗುತ್ತಿರುವ ರಾಜಕಾರಣಿಗಳಲ್ಲಿ ರಾಹುಲ್ ಗಾಂಧಿಯವರು ಪ್ರಮುಖರು. ಅವರ ಮೇಲೆ ಸಾಕಷ್ಟು ಇಲ್ಲ ಸಲ್ಲದ ಆರೋಪಗಳನ್ನು ಮತ್ತು ಸುಳ್ಳು ಸುದ್ದಿಗಳನ್ನು ನಿರಂತರವಾಗಿ ಹರಿಬಿಡಲಾಗುತ್ತಿದೆ. ಅವರ ಪ್ರತೀ ಭಾಷಣವನ್ನು ತಪ್ಪು ಅರ್ಥ ಬರುವಂತೆ  ಎಡಿಟ್ ಮಾಡಿ ಹಂಚಿಕೊಳ್ಳಲಾಗುತ್ತಿದೆ. ಈಗ ಇದೇ ರೀತಿಯ ವಿಡಿಯೋ ಒಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು ಅದರಲ್ಲಿ  “ರಾಹುಲ್ ಗಾಂಧಿಯವರು ತಮ್ಮ ಭಾಷಣದಲ್ಲಿ ತಾನೊಬ್ಬ ದರ್ಜಿ(ಟೈಲರ್) ಎಂದು ಕರೆದುಕೊಂಡಿದ್ದಾರೆ” ಎಂದು ಪ್ರತಿಪಾಧಿಸಲಾಗುತ್ತಿದೆ. ಫ್ಯಾಕ್ಟ್‌ಚೆಕ್: ಇದು 11 ನವೆಂಬರ್ 2023ರಂದು…

Read More

Fact Check | ಖಲಿಸ್ತಾನ ಪರ ಚಳುವಳಿಯನ್ನು ರಾಜಸ್ತಾನದ ಮಾಜಿ ಸಿಎಂ ಅಶೋಕ್‌ ಗೆಹ್ಲೋಟ್‌ ಬೆಂಬಲಿಸಿಲ್ಲ

“ರಾಜಸ್ಥಾನದ ಮಾಜಿ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಖಲಿಸ್ತಾನ್ ಚಳವಳಿಯನ್ನು ಬೆಂಬಲಿಸಿದ್ದರೆ ಮತ್ತು ಪ್ರತಿಭಟನೆಯೊಂದರಲ್ಲಿ ಮಾತನಾಡಿದ್ದಾರೆ.” ಎಂದು ವಿಡಿಯೋವೊಂದನ್ನು ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. ಇದರ ಜೊತೆಗೆ ಕಾಂಗ್ರೆಸ್‌ ಖಲಿಸ್ತಾನಿಗಳಿಗೆ ಬೆಂಬಲ ಕೊಡುತ್ತಿದೆ ಎಂದು ಆರೋಪಿಸಲಾಗಿದೆ. ಇದರ ಜೊತೆಗೆ ಮತ್ತೊಂದು ವಿಡಿಯೋ ಕೂಡ ವೈರಲ್‌ ಆಗಿದ್ದು ಅದರಲ್ಲಿ ರಾಜಸ್ತಾನದ ಮಾಜಿ  ಸಿಎಂ ಅಶೋಕ್‌ ಗೆಹ್ಲೋಟ್‌ ಅವರು, “ಮೋಹನ್ ಭಾಗವತ್ ಮತ್ತು ನರೇಂದ್ರ ಮೋದಿ ಅವರು ಹಿಂದೂ ರಾಷ್ಟ್ರದ ಬಗ್ಗೆ ಮಾತನಾಡಬಹುದಾದಾಗ, ನಾನು ಖಲಿಸ್ತಾನ್ ಬಗ್ಗೆ ಏಕೆ ಮಾತನಾಡಬಾರದು..” ಎಂದು…

Read More

ಮುಖ್ಯಮಂತ್ರಿ ಸಿದ್ದರಾಮಯ್ಯನವರ ಎಡಿಟ್ ವಿಡಿಯೋ ಹಂಚಿ ಸುಳ್ಳು ಸಾರಿದ BJP ನಾಯಕರು

ಬೆಳಗಾವಿಯಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ಎರಡು ದಿನಗಳ ಹಿಂದೆಯಷ್ಟೇ ರೈತರ ಸಾಲ ಮನ್ನದ ಕುರಿತು ತೀವ್ರವಾದ ಚರ್ಚೆಗಳು ಜರುಗಿವೆ. “ಸಾಲ ಪಡೆದಿರುವ ರೈತರು ಅಸಲನ್ನು ಕಟ್ಟಿದರೆ ಬಡ್ಡಿಯನ್ನು ಸಂಪೂರ್ಣವಾಗಿ ಮನ್ನ ಮಾಡಲಾಗುವುದು, ಅದು ಮಧ್ಯಮಾವದಿ ಸಾಲ ಇರಬಹುದು ಅಥವಾ ಧೀರ್ಘವಧಿಯ ಸಾಲ ಇರಬಹುದು, ಎಲ್ಲದರ ಮೇಲಿರುವ ಬಡ್ಡಿಯನ್ನು ಮನ್ನ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಘೋಷಿಸಿದ್ದಾರೆ. ಆದರೆ ಗ್ಯಾರಂಟಿ ಯೋಜನೆಗಳಿಗೆ ಸಂಬಂಧಿಸಿದಂತೆ “ಎಲ್ಲಿಂದ ತರ್ಲಿ ದುಡ್ಡು? ಚುನಾವಣೆ ಸಂದರ್ಭದಲ್ಲಿ ಭರವಸೆ ನೀಡುತ್ತೇವೆ ಹಾಗಂತ ಹೇಳಿದ್ದೆಲ್ಲವನ್ನು ಮಾಡೋಕೆ ಆಗತ್ತಾ,…

Read More
Sabarimala

ಕೇರಳ ಪೋಲಿಸರು ಶಬರಿಮಲೆಗೆ ತೆರಳುತ್ತಿದ್ದ ಬಾಲಕನನ್ನು ವಶಕ್ಕೆ ಪಡೆದಿದ್ದಾರೆ ಎಂಬುದು ಸುಳ್ಳು

ಶಬರಿಮಲೆಗೆ ಸಂಬಂಧಿಸಿದಂತೆ ಇತ್ತೀಚೆಗೆ ಸಾಕಷ್ಟು ಸುಳ್ಳು ಸುದ್ದಿಗಳು, ಸುಳ್ಳು ಪ್ರತಿಪಾದನೆಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. ಇತ್ತೀಚೆಗೆ ಶಬರಿಮಲೆಯಲ್ಲಿರುವ ವಾವರ್ ಸ್ವಾಮಿ ಮಸೀದಿಯ ಕುರಿತು ಅಪಪ್ರಚಾರ ಮಾಡಿ ಅನೇಕ ಸುಳ್ಳು ಸುದ್ದಿಗಳನ್ನು ಹರಿಬಿಡಲಾಗಿತ್ತು. ಈಗ ಕೇರಳದ ಕಮುನಿಸ್ಟ್‌ ಸರ್ಕಾರ ಮತ್ತು ಇಂಡಿಯಾ ಒಕ್ಕೂಟವನ್ನು ಅಲ್ಲಗೆಳೆಯುವ ಸಲುವಾಗಿ  “ಕೇರಳದಲ್ಲಿ ಹಿಂದುಗಳ ಪರಿಸ್ಥಿತಿ ಹೇಗಿದೆ ನೋಡಿ. ಮಕ್ಕಳು ಎಂಬುದನ್ನು ಲೆಕ್ಕಿಸದೆ ಶಬರಿಮಲೆಗೆ ತೆರಳುತ್ತಿದ್ದ ಬಾಲಕನನ್ನು ಕೇರಳ ಪೋಲಿಸರು ತಮ್ಮ ವಶಕ್ಕೆ ಪಡೆದಿದ್ದಾರೆ.” ಎಂಬ ಸಂದೇಶದ ವಿಡಿಯೋ ಒಂದು ವೈರಲ್ ಆಗುತ್ತಿದೆ. ಇದನ್ನು…

Read More

Fact Check | ವೈರಲ್ ಅಶ್ಲೀಲ ಫೋಟೊಗಳು ಅಯೋಧ್ಯೆಯ ರಾಮಮಂದಿರದ ಅರ್ಚಕ ಮೋಹಿತ್‌ ಪಾಂಡೆಯವರದ್ದಲ್ಲ

ಸಾಮಾಜಿಕ ಜಾಲತಾಣದಲ್ಲಿ ಅಯೋಧ್ಯೆ ರಾಮಮಂದಿರ ಅರ್ಚಕರಾಗಿ ನೇಮಕಗೊಂಡಿರುವ ಮೋಹಿತ್ ಪಾಂಡೆ ಕುರಿತು ವಿಡಿಯೋ, ಫೋಟೋ ಹರಿಬಿಡಲಾಗಿದೆ. ಅರ್ಚಕ ಮೋಹಿತ್ ಪಾಂಡೆ ಮಹಿಳೆಯೊಬ್ಬರ ಜೊತೆ ಅಶ್ಲೀಲ ಭಂಗಿಯಲ್ಲಿದ್ದು, ಚುಂಬಿಸುತ್ತಿರುವ ವಿಡಿಯೋ ಮತ್ತು ಫೋಟೋ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದ್ದು ಸಾಕಷ್ಟು ಮಂದಿ ಇದನ್ನೇ ನಿಜವೆಂದು ನಂಬಿದ್ದಾರೆ.  ಈ ಫೋಟೋದಲ್ಲಿನ ಅಸಲಿ ವಿಚಾರ ಕುರಿತು ಪರಿಶೀಲನೆ ನಡೆಸದೆ ಹಲವಾರು ಮಂದಿ ಈ ಫೋಟೋವನ್ನು ಶೇರ್‌ ಮಾಡುವುದರ ಜೊತೆಗೆ ವಿವಿಧ ಆಡಳಿತರೂಢ ಬಿಜೆಪಿಯನ್ನೂ ಇಲ್ಲಿ ಟೀಕಿಸಲಾಗುತ್ತಿದೆ. ಹಾಗಾಗಿ ಈ ವಿಚಾರ ರಾಜಕೀಯವಾಗಿಯೂ ಕೂಡ ಸದ್ದು…

Read More

Fact Check | ಜಪಾನ್‌ನಲ್ಲಿ ಮಹಿಳೆಯರಿಗೆ ಕಿರುಕುಳ ನೀಡಿದ ಸೋಮಾಲಿಯದ ಪ್ರಜೆ ಗಡಿಪಾರು ಎಂಬುದು ಸುಳ್ಳು

“ಈ ವಿಡಿಯೋ ನೋಡಿ.. ಸೋಮಾಲಿಯಾದ ಒಬ್ಬ ಪ್ರಜೆ ಜಪಾನ್‌ನಲ್ಲಿ ಮಹಿಳೆಯರಿಗೆ ಹೆಚ್ಚು ಹೆಚ್ಚು ಕಿರುಕುಳ ನೀಡುತ್ತಿದ್ದ. ಈತನನ್ನು ಬಂಧಿಸಲು ತೆರಳಿದ ಪೊಲೀಸರೊಂದಿಗೆ ಈತ ವಾಗ್ವಾದ ನಡೆಸಿದ್ದಾನೆ. ಬಳಿಕ ಈತನನ್ನು ಜಪಾನ್‌ ಸರ್ಕಾರ ಗಡಿಪಾರು ಮಾಡಿದೆ.” ಎಂಬ ಹೇಳಿಕೆಯೊಂದಿಗೆ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋವೊಂದು ವೈರಲ್‌ ಆಗುತ್ತಿದ್ದು, ಸಾಕಷ್ಟು ಮಂದಿ ಈ ವಿಡಿಯೋವನ್ನು ಹಂಚಿಕೊಳ್ಳುತ್ತಿದ್ದಾರೆ. ಈ ವಿಡಿಯೋ ಕುರಿತು ಫ್ಯಾಕ್ಟ್‌ಚೆಕ್‌ ನಡೆಸಲು ಮುಂದದಾಗ ಇದೇ ರೀತಿಯ ಹಲವು ವಿಡಿಯೋಗಳು ಮುಸ್ಲಿಂ ಸಮುದಾಯದ ವಿರುದ್ಧ ದ್ವೇಷಕಾರುವ ರೀತಿಯ ಹಲವು ಸುಳ್ಳು ಅಪಾದನೆಗಳೊಂದಿಗೆ…

Read More

Fact Check | ಶಿವಕಾಶಿಯಲ್ಲಿ ಲಕ್ಷ ಶಿವಲಿಂಗಗಳು ಪತ್ತೆಯಾಗಿವೆ ಎಂದು ಸಿರ್ಸಿಯಲ್ಲಿನ ಸಹಸ್ರಲಿಂಗ ವಿಡಿಯೋ ಹಂಚಿಕೆ

“ಶಿವಕಾಶಿ ನದಿಯಲ್ಲಿ ನೀರಿನ ಮಟ್ಟ ಕುಸಿತದ ನಂತರ ಮೊದಲ ಬಾರಿಗೆ ಲಕ್ಷ ಶಿವಲಿಂಗಳು ಇತ್ತೀಚೆಗೆ ಕಾಣಿಸಿಕೊಂಡಿವೆ ಈ ವಿಡಿಯೋ ನೋಡಿ” ಎಂದು ಸಾಮಾಜಿಕ ಜಾಲತಾಣದಲ್ಲಿ ವಿಡಿಯೋವೊಂದನ್ನು ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. ಈ ವಿಡಿಯೋ ನೋಡಿದ ಸಾಕಷ್ಟು ಮಂದಿ ತಮ್ಮ ವಿವಿಧ ಸಾಮಾಜಿಕ ಜಾಲತಾಣದ ಖಾತೆಗಳಲ್ಲಿ ಹಂಚಿಕೊಳ್ಳುತ್ತಿದ್ದಾರೆ. ಈ ವಿಡಿಯೋದಲ್ಲಿ ನದಿಯ ದಡದಲ್ಲಿರುವ ಬಂಡೆಗಳಲ್ಲಿ ಮತ್ತು ನದಿಯ ತಟದಲ್ಲಿ ಶಿವಲಿಂಗಗಳು ಕಾಣಿಸುತ್ತವೆ. ವೈರಲ್‌ ಆಗಿರುವ 33 ಸೆಕೆಂಡ್‌ಗಳ ಈ ವಿಡಿಯೋದಲ್ಲಿ,  ಬಂಡೆಗಳಿಂದಲೇ ಶಿವಲಿಂಗವನ್ನು ಕೆತ್ತಿರುವುದು ಮತ್ತು ಅಲ್ಲಿ ನದಿ ನೀರು…

Read More

Fact check | ಮಧ್ಯಪ್ರದೇಶ ಸಿಎಂ ಡಾ.ಮೋಹನ್ ಯಾದವ್ ಮುಸಲ್ಮಾನರಿಗೆ ಎಚ್ಚರಿಕೆ ನೀಡಿದ್ದಾರೆ ಎಂಬುದು ಸುಳ್ಳು

“ಮಧ್ಯಪ್ರದೇಶದ ನೂತನ ಮುಖ್ಯಮಂತ್ರಿ ಡಾ.ಮೋಹನ್ ಯಾದವ್ ಮುಸ್ಲಿಮರಿಗೆ “ಅವರ ಧರ್ಮದ ಆಚರಣೆಗೆ ನಾವು ಅಡ್ಡಿ ಪಡಿಸುವುದಿಲ್ಲ. ದೇಶ ವಿರೋಧಿ ಘೋಷಣೆಗಳನ್ನ ಕೂಗಿದರೆ ಪರಿಣಾಮ ಎದುರಿಸಬೇಕಾಗುತ್ತದೆ” ಎಂದು ಎಚ್ಚರಿಕೆ ನೀಡಿದ್ದಾರೆ ಈ ವಿಡಿಯೋ ನೋಡಿ” ಎಂದು ವಿಡಿಯೋವೊಂದನ್ನು ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. Mohan Yadav, the New CM designate of Madya Pradesh makes the ground rule very clear. pic.twitter.com/57Jq0qXEl6 — Harbhajan ਹਰਭਜਨ🇮🇱 (@harbhajn121) December 13, 2023 ಈ ವಿಡಿಯೋದಲ್ಲಿ…

Read More

Fact Check | ವಿರಾಟ್‌ ಕೊಹ್ಲಿ ಗೋಮಾಂಸ ಸೇವಿಸಿದ್ದಾರೆ ಎಂಬ ರೆಸ್ಟೋರೆಂಟ್ ಬಿಲ್ ನಕಲಿ

“ಅಮೆರಿಕದ ಫ್ಲೋರಿಡಾದಲ್ಲಿರುವ ಗಾರ್ಡನ್ ರಾಮ್‌ಸೇ ರೆಸ್ಟೊರೆಂಟ್‌ನಲ್ಲಿ ವಿರಾಟ್ ಕೊಹ್ಲಿ ಗೋಮಾಂಸ ಸೇವಿಸಿದ್ದಾರೆ. ಇದಕ್ಕೆ ಸಂಬಂಧ ಪಟ್ಟ ಬಿಲ್ ಈಗ ವೈರಲ್ ಅಗಿದೆ.” ಎಂಬ ಸುದ್ದಿಯೊಂದು ಸಾಮಾಜಿಕ ಜಾಲತಾಣದಲ್ಲಿ ಫೋಟೋದೊಂದಿಗೆ ವೈರಲ್‌ ಆಗುತ್ತಿದೆ. ಈ ಫೋಟೋವನ್ನು ಸಾಕಷ್ಟು ಮಂದಿ ಹಂಚಿಕೊಂಡಿದ್ದಾರೆ. ಇನ್ನು ಕೆಲವರು ಇದೊಂದು ಸುಳ್ಳು ಸುದ್ದಿ ಎಂದು ಪ್ರತಿಪಾದಿಸಿದ್ದಾರೆ ವಿರಾಟ್‌ ಕೊಹ್ಲಿ ಗೋಮಾಂಸ ಸೇವನೆ ಮಾಡಿದ್ದಾರೆ ಎಂದು ಎಕ್ಸ್‌ ಖಾತೆಯಲ್ಲಿ ಸುಳ್ಳಿನೊಂದಿಗೆ ಹಂಚಿಕೊಳ್ಳಲಾಗಿರುವ  ಪೋಸ್ಟ್‌ Virat Kohli Was known That He is Out of…

Read More

Fact Check | ಅರವಿಂದ್‌ ಕೇಜ್ರಿವಾಲ್‌ ಅವರು ಧೀರಜ್‌ ಸಾಹು ಅವರನ್ನು ಬೆಂಬಲಿಸಿದ್ದಾರೆ ಎಂಬುದು ಸುಳ್ಳು

ಸಾಮಾಜಿಕ ಜಾಲತಾಣದಲ್ಲಿ “ಆದಾಯ ತೆರಿಗೆ ಇಲಾಖೆಯ ದಾಳಿಯಲ್ಲಿ ಕಾಂಗ್ರೆಸ್‌ ಸಂಸದ ಧೀರಾಜ್‌ ಸಾಹು ಅವರಿಂದ ಅಧಿಕಾರಿಗಳು 351 ಕೋಟಿ ರೂಪಾಯಿ ನಗದು ಪತ್ತೆ ಮಾಡಿದ ಬಳಿಕ, ಸಾಹು ಅವರ ವಿರುದ್ಧ ವ್ಯಾಪಕ ಟೀಕೆಗಳು ಕೇಳಿ ಬಂದಿದ್ದವು. ಆದರೆ ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ಅವರು ಈ ಸಂಸದನ ಪರವಾಗಿ ಮಾತನಾಡಿದ್ದಾರೆ. ಆ ಮೂಲಕ ಭ್ರಷ್ಟಾಚಾರಕ್ಕೆ ಪರೋಕ್ಷ ಬೆಂಬಲ ನೀಡಿದ್ದಾರೆ” ಎಂಬ ಪೋಸ್ಟ್‌ ವೈರಲ್‌ ಆಗುತ್ತಿದೆ. ಇದನ್ನೇ ಸಾಕಷ್ಟು ಮಂದಿ ಹಂಚಿಕೊಳ್ಳುತ್ತಿದ್ದು, ಆಮ್‌ ಆದ್ಮಿ ಪಕ್ಷ ಮೇಲ್ನೋಟದಲ್ಲಿ ಮಾತ್ರ…

Read More