Fact Check | ಇಂಗ್ಲೀಷ್‌ ನಾಮಫಲಕ ತೆರವುಗೊಳಿಸಿದ್ದನ್ನು ಕೇಸರಿ ನಾಮಫಲಕ ಎಂದು ಸುಳ್ಳು ಹಂಚಿಕೆ

“ಕರ್ನಾಟಕದಲ್ಲಿ ನಾಮಫಲಕಗಳಲ್ಲಿ ಕೇಸರಿ ಬಣ್ಣವನ್ನು ಬಳಸುವಂತಿಲ್ಲ ಎಂಬ ಕಾರಣಕ್ಕೆ ಜನರ ಗುಂಪೊಂದು ಅಂಗಡಿಯ ನಾಮಫಲಕಗಳನ್ನು ಧ್ವಂಸಗೊಳಿಸಿದೆ. ಈ ವಿಡಿಯೋವನ್ನು ಎಲ್ಲರಿಗೂ ಶೇರ್‌ ಮಾಡಿ” ಎಂಬ ಬರಹದೊಂದಿಗೆ ವಿಡಿಯೋವೊಂದನ್ನು ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದ್ದು, ಕರ್ನಾಟಕದಲ್ಲಿ ಹಿಂದೂ ಅಂಗಡಿಯೊಂದನ್ನು ಧ್ವಂಸ ಮಾಡಲಾಗಿದೆ, ಈ ಬಗ್ಗೆ ಧ್ವನಿ ಎತ್ತಲು ಯಾರೂ ಇಲ್ಲದಂತಾಗಿದೆ ಎಂದು ಕೋಮು ಬಣ್ಣವನ್ನು ಬಳಿಯಲಾಗಿದೆ. ಇದನ್ನೇ ನಿಜವೆಂದು ನಂಬಿ ಸಾಮಾಜಿಕ ಜಾಲತಾಣದಲ್ಲಿ ಅನ್ಯ ಕೋಮಿನ ವಿರುದ್ಧ, ಆಕ್ರೋಶವನ್ನು ವ್ಯಕ್ತ ಪಡಿಸುತ್ತಿದ್ದಾರೆ. ಅದರಲ್ಲೂ ವೈರಲ್‌ ವಿಡಿಯೋವನ್ನು ಬಳಸಿಕೊಂಡು ಕರ್ನಾಟಕದ ಕಾಂಗ್ರಸ್‌ ಸರ್ಕಾರದ…

Read More
Pakistan

Fact Check: ಪಾಕಿಸ್ತಾನ ಮೂಲದ ‘ಹಬ್ ಪವರ್ ಕಂಪನಿಯಿಂದ ಕಾಂಗ್ರೆಸ್ 10 ಕೋಟಿ ಪಡೆದಿದೆ ಎಂದು ಸುಳ್ಳು ಹರಡಿದ ಟಿವಿ ವಿಕ್ರಮ

ಸುಪ್ರೀಂ ಕೋರ್ಟ್ ಚುನಾವಣಾ ಬಾಂಡ್‌ಗಳನ್ನು ಅಕ್ರಮ ಎಂದು ಕರೆದು ರದ್ದುಗೊಳಿಸಿದೆ. ಅಲ್ಲದೇ 2019ರಿಂದ 2024ರವರೆಗೆ ಖರೀದಿಯಾಗಿರುವ ಬಾಂಡ್‌ಗಳ ವಿವರ ಮತ್ತು ಅವುಗಳನ್ನು ನಗದಾಗಿ ಮಾಡಿಕೊಂಡ ರಾಜಕೀಯ ಪಕ್ಷಗಳ ವಿವರವನ್ನು ಬಹಿರಂಗ ಪಡಿಸುವಂತೆ ಎಸ್‌ಬಿಐ(SBI)ಗೆ ತಾಕೀತು ಮಾಡಿತು. ಅದರಂತೆ ಎಸ್‌ಬಿಐ ನೀಡಿದ ಮಾಹಿತಿಯನ್ನು ಚುನಾವಣಾ ಆಯೋಗವು ತನ್ನ ವೆಬ್‌ಸೈಟ್‌ನಲ್ಲಿ ಪ್ರಕಟಿಸಿದೆ. ಅದರಲ್ಲಿ ಪಾಕಿಸ್ತಾನ ಮೂಲದ ‘ಹಬ್ ಪವರ್ ಕಂಪನಿ’ ಪುಲ್ವಾಮ ದಾಳಿಯ ನಂತರ 10 ಕೋಟಿ ಮೊತ್ತದ ಬಾಂಡ್‌ಗಳನ್ನು ಕಾಂಗ್ರೆಸ್ ಪಕ್ಷಕ್ಕೆ ನೀಡಿದೆ ಎಂದು ಫೇಕ್ ನ್ಯೂಸ್‌ಗೆ ಹೆಸರಾಗಿರುವ…

Read More

Fact Check | ಇದು ಮತೀಯ ಗೂಂಡಾಗಿರಿ ಘಟನೆ ಹೊರತು ಲವ್ ಜಿಹಾದ್ ಅಲ್ಲ

“ಈ ವಿಡಿಯೋ ನೋಡಿ ಬುರ್ಖಾ ಧರಿಸಿರುವ ಯುವತಿಯು ಹಿಂದೂ ಯುವತಿಗೆ ಬುರ್ಖಾ ಧರಿಸಲು ಹೇಳಿದ್ದಾಳೆ, ಬಳಿಕ ಮುಸ್ಲಿಂ ಯುವಕನೊಂದಿಗೆ ಲವ್‌ ಜಿಹಾದ್‌ಗೆ ತಳ್ಳಲು ಪ್ರಯತ್ನಿಸಿದ್ದಾಳೆ.. ಇದೀಗ ಈಕೆಗೆ ಹಿಂದೂ ಕಾರ್ಯಕರ್ತರು ಬುದ್ದಿ ಕಲಿಸಿದ್ದಾರೆ.” ಎಂಬ ಸುದ್ದಿಯೊಂದು ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. जागो हिंदुओं इस बुर्के वाली लड़की ने उस हिंदू लड़की का ब्रेन वॉश किया जो वीडियो फ्रेम में भी हैवह हिंदू लड़की को बुर्का पहनने…

Read More
Hindu

Fact Check: ಗುಜರಾತ್‌ನಲ್ಲಿ ಹಿಂದೂ ದೇವಾಲಯವನ್ನು ಜಿಹಾದಿಗಳಿಂದ ತೆರವುಗೊಳಿಸಲಾಗಿದೆ ಎಂಬುದು ಸುಳ್ಳು

ಗುಜರಾತ್‌ನ ಅಹಮದಾಬಾದ್‌ನಲ್ಲಿ ರಾಣಿ ಕಾ ಹಜಿರಾ ಎಂಬ ಹೆಸರಿನ 1600 ವರ್ಷಗಳಷ್ಟು ಹಳೆಯದಾದ ಭವ್ಯವಾದ ಹಿಂದೂ ಪ್ರದೇಶವನ್ನು ಮುಸ್ಲೀಮರು ವಶಪಡಿಸಿಕೊಂಡಿದ್ದರು. ನಿನ್ನೆ ಬಿಜೆಪಿ ಸರ್ಕಾರದ ಬುಲ್ಡೋಜರ್ ಅಲ್ಲಿ ತಿರುಗಾಡಿತು ಮತ್ತು ಜಿಹಾದಿಗಳನ್ನು ತೆರವುಗೊಳಿಸಿತು. ಈಗ ಮುಸಲ್ಮಾನರ ಕಪಿಮುಷ್ಠಿಯಿಂದ ಮುಕ್ತಿ ಪಡೆದಿದೆ. ಇದು ನಿಮ್ಮ ಒಂದು ಮತದ ಬೆಲೆ! ಎಂಬ ಸಂದೇಶದ ವಿಡಿಯೋ ಒಂದು ಸಾಮಾಜಿಕ ಜಾಲತಾಣಗಳಲ್ಲಿ ಅನೇಕ ದಿನಗಳಿಂದ ಹರಿದಾಡುತ್ತಿದೆ. ಈ ವೈರಲ್ ವಿಡಿಯೋದಲ್ಲಿ ಭವ್ಯವಾದ ಐತಿಹಾಸಿಕ ಕಟ್ಟವೊಂದರಿಂದ ಪೋಲೀಸರು ಅಂಗಡಿಗಳನ್ನು ತೆರವುಗೊಳಿಸುತ್ತಿರುವುದನ್ನು ಕಾಣಬಹುದು. ಆಗಾಗಿ ನಿಜವಾಗಿಯೂ…

Read More
KRS

Fact Check: ಬರದಲ್ಲೂ KRS ನಿಂದ ತಮಿಳುನಾಡಿಗೆ ನೀರು ಹರಿಸಲಾಗುತ್ತಿದೆ ಎಂಬುದು ಸುಳ್ಳು

ಈ ಬಾರಿ ಕರ್ನಾಟಕದಲ್ಲಿ ಬರದ ಪರಿಸ್ಥಿತಿ ಇರುವುದರಿಂದ ಬೇಸಿಗೆ ಸಮೀಪಿಸುತ್ತಿದ್ದಂತೆ ನೀರಿಗಾಗಿ ಸಮಸ್ಯೆ ಶುರುವಾಗಿದೆ. ಬೆಂಗಳೂರಿನಾದ್ಯಂತ ಕುಡಿಯುವ ನೀರಿಗೆ ಸಮಸ್ಯೆಯಾಗಿ ಟ್ಯಾಂಕರ್‌ಗಳಲ್ಲಿ ನೀರು ತರಿಸಿಕೊಳ್ಳಬೇಕಾದ ಸ್ಥಿತಿ ಬಂದೊದಗಿದೆ. ಸಧ್ಯ ರಾಜ್ಯದ 195 ತಾಲ್ಲೂಕುಗಳನ್ನು ಪರಪೀಡಿತ ಪ್ರದೇಶಗಳೆಂದು ಪಟ್ಟಿ ಮಾಡಿ ಆಯಾ ತಾಲೂಕುಗಳಿಗೆ ಬರ ಪರಿಹಾರದ ಹಣವನ್ನು ನೀಡುವ ಸಲುವಾಗಿ ಕೆಲಸಗಳು ನಡೆಯುತ್ತಿವೆ. ಆದರೆ “ಬೆಂಗಳೂರಿನಲ್ಲಿ ಕುಡಿಯಲು ಹನಿ ನೀರು ಕೂಡ ಸಿಗುತ್ತಿಲ್ಲ. ಆದರೆ, ನಾಡ ದ್ರೋಹಿ  ಕಾಂಗ್ರೆಸ್ ತಮಿಳುನಾಡಿಗೆ ಮಾತ್ರ ಕಳ್ಳತನದಿಂದ ಕಾವೇರಿ ನೀರು ಹರಿಸುತ್ತಲೇ ಇದೆ….

Read More

Fact Check | ಮುಂದಿನ ಜನ್ಮದಲ್ಲಿ ಮುಸ್ಲಿಂ ಆಗಿ ಹುಟ್ಟುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿಲ್ಲ

“ನಾನು ಮುಂದಿನ ಜನ್ಮ ಅಂತ ಇದ್ರೆ ಮುಸ್ಲಿಂ ಆಗಿ ಹುಟ್ಟುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಈ ವಿಡಿಯೋ ನೋಡಿ” ಎಂದು ಸಾಕಷ್ಟು ಮಂದಿ ವಿಡಿಯೋವೊಂದನ್ನ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಹಂಚಿಕೊಳ್ಳುತ್ತಿದ್ದಾರೆ. ಅದರಲ್ಲೂ ಬಿಜೆಪಿ ಐಟಿಸೆಲ್‌ ಸದಸ್ಯ ರಿಶಿ ಬಿಗ್ರೀ ಮತ್ತು ಹಲವು ಬಿಜೆಪಿಯ ಕಾರ್ಯಕರ್ತರು ಇದೇ ವಿಡಿಯೋವನ್ನು ಹೆಚ್ಚು ಪ್ರಚಾರ ಮಾಡಿದ್ದಾರೆ. ಮುಂದಿನ ಜನ್ಮ ಯಾಕೆ ಇವಾಗ್ಲೇ ಕನ್ವರ್ಟ್ ಆಗಿ,🙏 pic.twitter.com/LhruF22ikk — Murali Purshotham (@MurariMurali3) March 11, 2024 ಇನ್ನು ಸುಳ್ಳು ಸುದ್ದಿಗೆ…

Read More

Fact Check: ತುಮಕೂರಿನಲ್ಲಿ ರಥ ಸುಟ್ಟ ಆರೋಪಿ ಹಿಂದುವೇ ಹೊರತು ಮುಸ್ಲಿಂ ಅಲ್ಲ

ಇತ್ತೀಚೆಗೆ ಭಾರತದಲ್ಲಿ ಯಾವ ದುರ್ಘಟನೆ ಸಂಭವಿಸಿದರೂ ಪೂರ್ವಾಗ್ರಹಪೀಡಿತರಾಗಿ ಅದನ್ನು ಮುಸ್ಲಿಂ ಸಮುದಾಯವನ್ನು ಹೊಣೆ ಮಾಡುವ ಚಾಳಿ ಆರಂಭವಾಗಿದೆ. ರಾಜಕೀಯ ಪಕ್ಷಗಳು ಸಹ ಇದಕ್ಕೆ ಬೆಂಬಲವಿತ್ತು ಧರ್ಮ ಧರ್ಮಗಳ ನಡುವೆ ದ್ವೇಷ ಬೆಳೆಸಲು ಪ್ರಯತ್ನಿಸುತ್ತಿದ್ದಾರೆ. ಇದಕ್ಕೆ ಉದಾಹರಣೆ ಎಂಬಂತೆ ಇತ್ತೀಚೆಗೆ, “ತುಮಕೂರು ಜಿಲ್ಲೆಯ ನಿಟ್ಟೂರಿನ 800 ವರ್ಷಗಳ ಇತಿಹಾಸ ಇರುವ ಶ್ರೀ ಕಲ್ಲೇಶ್ವರ ಸ್ವಾಮಿ ದೇವಸ್ಥಾನದ ರಥಕ್ಕೆ ಕಿಡಿಗೇಡಿಗಳು ಬೆಂಕಿ ಹಚ್ಚಿ ಸುಟ್ಟು ಹಾಕಿದ್ದಾರೆ. ಹಿಂದುಗಳು ಮೌನವಾದಷ್ಟು ಅವರ ಅಟ್ಟಹಾಸ ಜಾಸ್ತಿಯಾಗುತ್ತದೆ.” ಎಂದು ಪ್ರತಿಪಾದಿಸಿ ಪೋಸ್ಟರ್ ಒಂದನ್ನು ಹರಿಬಿಡಲಾಗಿದೆ….

Read More
Modi

ಮೋದಿ ನಾಯಕತ್ವವನ್ನು ಮೆಚ್ಚಿ ಪಾಕ್ ಆಕ್ರಮಿತ ಕಾಶ್ಮೀರದ ಜನ ಭಾರತಕ್ಕೆ ಸೇರಲು ಬಯಸಿದ್ದಾರೆ ಎಂಬುದು ಸುಳ್ಳು

ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ವಾಸಿಸುವ ಜನರು ಭಾರತವನ್ನು ಸೇರುವ ಇಚ್ಚೆಯನ್ನು ವ್ಯಕ್ತಪಡಿಸಿದ್ದಾರೆ, ಭಾರತದೊಂದಿಗೆ ಒಂದಾಗುವ ಪ್ರತಿಜ್ಞೆ ಮಾಡಿದ್ದಾರೆ ಮತ್ತು ಹಿಂದೂಸ್ತಾನ್ ಜಿಂದಾಬಾದ್ ಎಂದು ಘೋಷಣೆ ಕೂಗುತ್ತಿದ್ದಾರೆ ಎಂದು ಪ್ರತಿಪಾದಿಸಿದ ವೀಡಿಯೊವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ಅನೇಕ ದಿನಗಳಿಂದ ಹರಿದಾಡುತ್ತಿದೆ. ಭೋಪಾಲ್‌ನ ಬಿಜೆಪಿ ಸಂಸದೆ ಸಾಧ್ವಿ ಪ್ರಜ್ಞಾ ಠಾಕೂರ್ ಈ ವಿಡಿಯೋವನ್ನು ಎಕ್ಸ್‌ ಖಾತೆಯಲ್ಲಿ ಹಂಚಿಕೊಂಡಿದ್ದು, “ಒಂದು ಕಾಲದಲ್ಲಿ ಮೂಲಭೂತವಾದಿಗಳು, ಕಲ್ಲುಗಳು ಮತ್ತು ಬಂದೂಕುಗಳ ಬಗ್ಗೆ ಮಾತನಾಡುತ್ತಿದ್ದವರು ಇಂದು 370 ನೇ ವಿಧಿಯನ್ನು ತೆಗೆದುಹಾಕಿದ ನಂತರ, ಭಾರತವನ್ನು ಗೌರವಿಸಲು ಮತ್ತು…

Read More
ರಾಹುಲ್

Fact Check: ಸಿಂಗಾಪುರದಲ್ಲಿ ಕೆಲವು ಪ್ರಶ್ನೆಗಳಿಗೆ ಉತ್ತರಿಸಲು ರಾಹುಲ್ ಚಡಪಡಿಸಿದ್ದಾರೆ ಎಂಬುದು ಸುಳ್ಳು

ರಾಹುಲ್ ಸಿಂಗಾಪುರದಲ್ಲಿ ಉತ್ತರ ನೀಡಲು ಚಡಪಡಿಸಿದ ಪ್ರಶ್ನೆಗಳಿವು: 1. ಭಾರತ ಬಡದೇಶ ಅನ್ನೋದಾದ್ರೆ ನಿಮ್ಮ ಕುಟುಂಬ ಹೇಗೆ ಶ್ರೀಮಂತವಾಗಿದೆ ? 2. ಗಾಂಧಿ ಕುಟುಂಬವೇ 62ವರ್ಷ ಆಡಳಿತ ನಡೆಸಿತು ಆದರೂ ಬಡತನ ನಿರ್ಮೂಲನೆ ಯಾಕಾಗಿಲ್ಲ..? 3. ಭಾರತದಲ್ಲಿ ಎದುರಾಗುವ ಎಲ್ಲಾ ಸಮಸ್ಯೆಗಳಿಗೆ ನಾಲ್ಕು ವರ್ಷ ದೇಶ ಆಳಿದ ಮೋದಿ ಕಾರಣರೇ ಅಥವಾ 62 ವರ್ಷ ದೇಶ ಆಳಿದ ಕಾಂಗ್ರೇಸ್ ಕಾರಣವೇ..? 4. ಈ ನಿಮ್ಮ ಹೋರಾಟ ದೇಶದ ಬಡವರ ಪರವೋ ಅಥವಾ ಆರೆಸ್ಸೆಸ್ ವಿರುದ್ಧವೋ..? ಎಂಬ ಹೇಳಿಕೆಯ…

Read More

Fact Check: ರಿಲಯನ್ಸ್ ಜಿಯೋ ಒಂದು ತಿಂಗಳು ಉಚಿತ ರಿಚಾರ್ಚ್‌ ನೀಡಲಿದೆ ಎಂಬ ಸಂದೇಶ ಸುಳ್ಳು

ಇತ್ತೀಚೆಗಷ್ಟೇ ಏಷ್ಯಾದ ಅತಿದೊಡ್ಡ ಶ್ರೀಮಂತರಾದ ಮುಕೇಶ್ ಅಂಬಾನಿಯವರ ಹಿರಿಯ ಪುತ್ರ ಅನಂತ್ ಅಂಬಾನಿ ಮತ್ತು ರಾಧಿಕ ಮರ್ಜೆಂಟ್ ಅವರ ವಿವಾಹ ಪೂರ್ವ ಸಮಾರಂಭಕ್ಕೆ ದೇಶ-ವಿದೇಶಗಳಿಂದ ಸಿನಿಮಾ, ಕ್ರಿಕೆಟ್ ಮತ್ತು ಶ್ರೀಮಂತ ವ್ಯಾಪಾರಿಗಳು ಸೇರಿದಂತೆ ವಿವಿಧ ಕ್ಷೇತ್ರದ ತಾರೆಯರು ಆಗಮಿಸಿದ್ದು ದೇಶದಾದ್ಯಂತ ಸುದ್ದಿಯಾಗುತ್ತಿದೆ. ಇದೇ ಹಿನ್ನಲೆಯಲ್ಲಿ, “ಮುಕೇಶ್ ಅಂಬಾನಿಯವರ ಹುಟ್ಟುಹಬ್ಬ ಮತ್ತು ಅನಂತ್ ಅಂಬಾನಿಯವರ ಮದುವೆಯ ಪ್ರಯುಕ್ತ ಎಲ್ಲಾ ಜಿಯೋ ಬಳಕೆದಾರರಿಗೆ ಒಂದು ತಿಂಗಳ ಉಚಿತ ರೀಚಾರ್ಜ್ ಅನ್ನು ನೀಡುತ್ತಿದೆ” ಎಂಬ ಸಂದೇಶವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಇದು…

Read More