ಡ್ರೋನ್‌ ದಾಳಿ

Fact Check: ಇಸ್ರೇಲ್‌ನ ತೈಲ ಸಂಸ್ಕರಣಾಗಾರದ ಮೇಲೆ ಹಿಜ್ಬುಲ್ಲಾ ಡ್ರೋನ್‌ ದಾಳಿ ನಡೆಸಿದೆ ಎಂದು ರಷ್ಯಾ ಮತ್ತು ಉಕ್ರೇನ್ ಸಂಘರ್ಷದ ವೀಡಿಯೋ ಹಂಚಿಕೆ

ಇತ್ತೀಚೆಗೆ ಡ್ರೋನ್‌ ದಾಳಿಯಾಗುವ ವೀಡಿಯೋ ಒಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಸಂಘರ್ಷಗಳಲ್ಲಿ ಇಸ್ರೇಲಿ ತೈಲ ಸಂಸ್ಕರಣಾಗಾರದ ಮೇಲೆ ಹಿಜ್ಬುಲ್ಲಾ ದಾಳಿ ನಡೆಸಿದೆ ಎಂದು ಡ್ರೋನ್ ದಾಳಿಯ ವೀಡಿಯೊವನ್ನು ಹಂಚಿಕೊಳ್ಳಲಾಗಿದೆ. https://twitter.com/Rizwanmalik49/status/1838177525500895678 ಅನೇಕರು ಈ ವಿಡಿಯೋವನ್ನು ಹಂಚಿಕೊಂಡಿದ್ದು ಅವುಗಳನ್ನು ಇಲ್ಲಿ, ಇಲ್ಲಿ ಮತ್ತು ಇಲ್ಲಿ ನೋಡಬಹುದು. ಫ್ಯಾಕ್ಟ್‌ ಚೆಕ್: ನಾವು ವೈರಲ್ ವೀಡಿಯೋವನ್ನು ಕೀಫ್ರೆಮ್‌ಗಳಾಗಿ ವಿಂಗಡಿಸಿ ಗೂಗಲ್ ರಿವರ್ಸ್‌ ಇಮೇಜ್‌ ಸರ್ಚ್‌ನಲ್ಲಿ ಹುಡುಕಿದಾಗ ವೈರಲ್‌ ವಿಡಿಯೋವನ್ನು ಹೋಲುವ ವೀಡಿಯೋಗಳು ಮತ್ತು ವರದಿಗಳು ಲಭ್ಯವಾಗಿದ್ದು, ವರದಿಗಳ ಪ್ರಕಾರ,…

Read More

Fact Check | ತಿರುಪತಿ ಲಾಡು ತಿಂದವರಿಗೆ ಮನೆ ಕೊಡುವುದಿಲ್ಲ ಎಂಬುದು ಎಡಿಟೆಡ್‌ ಫೋಟೋ

ಸಾಮಾಜಿಕ ಜಾಲತಾಣದಲ್ಲಿ ” ಸಸ್ಯಹಾರಿಗಳಿಗೆ ಮಾತ್ರ ಮನೆ ನೀಡುಲಾಗುತ್ತದೆ. ತಿರುಪತಿ ಲಾಡು ಸೇವಿಸಿದವರಿಗೆ ಮನೆ ನೀಡಲಾಗುವುದಿಲ್ಲ” ಎಂಬ ಅರ್ಥದಲ್ಲಿ ಮನೆಯ ಮುಂದಿನ ಗೇಟ್‌ನಲ್ಲಿ ಪೋಸ್ಟರ್‌ವೊಂದನ್ನು ಹಾಕಿರುವ ಫೋಟೋವೊಂದು ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. ಈ ಫೋಟೋವನ್ನು ನೋಡಿದ ಹಲವು ಮಂದಿ ಫೇಸ್‌ಬುಕ್‌ ಸೇರಿದಂತೆ ಹಲವು ಕಡೆಗಳಲ್ಲಿ ಹಂಚಿಕೊಂಡಿದ್ದು, ಸಾಕಷ್ಟು ಮಂದಿ ತಮ್ಮದೇ ಆದ ಅಭಿಪ್ರಾಯವನ್ನು ವ್ಯಕ್ತ ಪಡಿಸುತ್ತಿದ್ದಾರೆ. திருப்பதி லட்டு சாப்பிடுபவர்களுக்கு வீடு இல்லயாம் 🤭🤭🤭🤭#beefladdu #thirumalathirupathi #nohouseforrent pic.twitter.com/eoADFs4yXv — Shyammsundarr_vck, Msc,B.Ed,PhD., (@Shyamsu24) September 23, 2024…

Read More
ಶ್ರೀಕೃಷ್ಣ ಕುಲಕರ್ಣಿ

Fact Check: ಗಾಂಧೀಜಿಯವರ ಮೊಮ್ಮಗರಾದ ಶ್ರೀಕೃಷ್ಣ ಕುಲಕರ್ಣಿಯವರು ರಾಹುಲ್ ಗಾಂಧಿಗೆ ಬರೆದ ಹಳೆಯ ಪತ್ರವನ್ನು ತಿರುಚಿ ಹಂಚಿಕೊಳ್ಳಲಾಗುತ್ತಿದೆ

ಮಹಾತ್ಮ ಗಾಂಧೀಜಿಯವರ ಮರಿ ಮೊಮ್ಮಗರಾದ ಶ್ರೀಕೃಷ್ಣ ಕುಲಕರ್ಣಿಯವರು ಕಾಂಗ್ರೆಸ್‌ ನಾಯಕ ರಾಹುಲ್ ಗಾಂಧಿಯವರಿಗೆ ಬರೆದ ಬಹಿರಂಗ ಪತ್ರ ಎಂಬ ಸಂದೇಶವೊಂದು ಹಲವಾರು ವರ್ಷಗಳಿಂದ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದೆ. ಈ ಪತ್ರದಲ್ಲಿ ಶ್ರೀಕೃಷ್ಣ ಕುಲಕರ್ಣಿಯವರು “ಮೋಹನ್ ದಾಸ್ ಕರಮಚಂದ್ ಗಾಂಧಿ ನನ್ನ ಮುತ್ತಜ್ಜ. ಅವರನ್ನು ಶ್ರೀ ನಾಥೂರಾಂ ಗೋಡ್ಸೆ ಕೊಂದರು. ಅನೇಕ ತನಿಖೆಗಳು ಮತ್ತು ಆಯೋಗಗಳು ಈ ಪ್ರಕರಣವನ್ನು ಸಂಶೋಧಿಸಿವೆ. ಗಾಂಧಿ ಹತ್ಯೆ ಪ್ರಕರಣದಲ್ಲಿ ಆರ್‌ಎಸ್‌ಎಸ್‌ನ ಯಾರೂ ಸಿಲುಕಿಸಿಲ್ಲ. ಆರ್‌ಎಸ್‌ಎಸ್‌ ಮೇಲೆ ಹೊಣೆಯನ್ನೂ ಹೊರಿಸಿಲ್ಲ. ಶ್ರೀ ನಾಥೂರಾಂ ಗೋಡ್ಸೆಯನ್ನು…

Read More

Fact Check | ಕಾನ್ಪುರದಲ್ಲಿ ನಡೆದ ಸಾಹಿಲ್ ಹತ್ಯೆ ಪ್ರಕರಣದಲ್ಲಿ ಯಾವುದೇ ಕೋಮು ಆಯಾಮವಿಲ್ಲ

ಉತ್ತರ ಪ್ರದೇಶದ ಕಾನ್ಪುರದಲ್ಲಿ ನಡೆದ ಘಟನೆ ಎಂದು ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಇದರಲ್ಲಿ ಇಬ್ಬರು ಯುವಕನೊಬ್ಬನಿಗೆ ಥಳಿಸುತ್ತಿರುವುದನ್ನು ಕಾಣಬಹುದು. ಕೆಲವು ಬಳಕೆದಾರರು ಈ ವೀಡಿಯೊವನ್ನು ಯುಪಿಯ ಕಾನ್ಪುರದಲ್ಲಿ ಮುಸ್ಲಿಂ ಯುವಕ ಸಾಹಿಲ್ ಅನ್ನು ಹಿಂದೂ ಯುವಕರು ಹೊಡೆದು ಕೊಂದಿದ್ದಾರೆ ಎಂದು ಹಂಚಿಕೊಳ್ಳುತ್ತಿದ್ದಾರೆ. ಹಲವರು ಯುಪಿಯಲ್ಲಿ ಇತ್ತೀಚೆಗೆ ಕೋಮು ಸಂಬಂಧಿತ ಗಲಭೆಗಳು ಹಾಗೂ ಹತ್ಯೆಗಳು ಜಾಸ್ತಿಯಾಗುತ್ತಿದೆ ಎಂದು ಬರೆದುಕೊಂಡು ಆಕ್ರೋಶವನ್ನು ವ್ಯಕ್ತ ಪಡಿಸುತ್ತಿದ್ದಾರೆ. उत्तर प्रदेश: कानपुर में साहिल नामक मुस्लिम युवक की…

Read More

Fact Check | ಲೆಬನಾನ್‌ನಲ್ಲಿನ ಅಗ್ನಿ ದುರಂತದ ವಿಡಿಯೋವನ್ನು ಇಸ್ರೇಲ್‌ ದಾಳಿಯ ವಿಡಿಯೋ ಎಂದು ಹಂಚಿಕೆ

ಈ ವಿಡಿಯೋ ನೋಡಿ “ಇಸ್ರೇಲಿ ವಾಯುಪಡೆಯು ನೂರು ಲಾಂಚರ್‌ಗಳನ್ನು ಹೊಡೆದು ಲೆಬನಾನ್‌ನಲ್ಲಿ ಸುಮಾರು 1,00,000 ಶೆಲ್‌ಗಳನ್ನು ನಾಶಪಡಿಸಿದೆ. ಇಸ್ರೇಲ್‌ನ ಮೆಟುಲಾ ನಗರದ ಮೇಲೆ ದಾಳಿ ಮಾಡಲು ಹಿಜ್ಬುಲ್ಲಾ ಸಿದ್ಧವಾಗುತ್ತಿರುವಾಗ ಇಸ್ರೇಲ್‌ ದಾಳಿ ನಡೆಸಿ ಹಿಜ್ಬುಲ್ಲಾಗಳ ಯೋಜನೆಯನ್ನು ವಿಫಲಗೊಳಿಸುವಲ್ಲಿ ಯಶಸ್ವಿಯಾಗಿದೆ. ಇಸ್ರೇಲ್‌ನ ಈ ದಾಳಿಯಿಂದಾಗಿ, ಕನಿಷ್ಟ ಸಾವಿರಕ್ಕೂ ಅಧಿಕ ಹಿಜ್ಬುಲ್ಲಾಗಳು ಸಾವನ್ನಪ್ಪಿರುವ ಸಾದ್ಯತೆ ಇದೆ” ಎಂದು ವಿಡಿಯೋವೊಂದನ್ನು ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕಾವಗಿ ಹಂಚಿಕೊಳ್ಳಲಾಗುತ್ತಿದೆ.  Incredible footage…Israeli Air Force attacked 100 #Hezbollah launchers & 1,000 launch…

Read More

Fact Check : ಇತ್ತೀಚೆಗೆ ನವದೆಹಲಿಯಲ್ಲಿ ರೈಲು ಅಪಘಾತ ಸಂಭವಿಸಿದೆ ಎಂಬುದು ಸುಳ್ಳು

2024 ರ ಸೆಪ್ಟೆಂಬರ್ 15 ರಂದು ಹೊಸದಿಲ್ಲಿಯಲ್ಲಿ ರೈಲು ಅಪಘಾತ ಸಂಭವಿಸಿದೆ ಎಂಬ ಪೋಸ್ಟರ್‌ನ್ನು ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. ಪೋಸ್ಟರ್‌ನಲ್ಲಿ  ಹಿಂದಿ ಭಾಷೆಯಲ್ಲಿ ಹೀಗೆ ಬರೆಯಲಾಗಿದೆ “नई दिल्ली: दो ट्रेनों के बीच भीषण टक्कर, 3 की मौत, 49 गंभीर घायल, चारों तरफ मची चीख-पुकार,” ಇದನ್ನು ಕನ್ನಡಕ್ಕೆ ಅನುವಾದಿಸಿದಾಗ “ನವದೆಹಲಿಯಲ್ಲಿ ಎರಡು ರೈಲುಗಳು  ಭೀಕರವಾಗಿ ಡಿಕ್ಕಿ ಹೊಡೆದಿವೆ. ಅಪಘಾತದಲ್ಲಿ ಮೂರು ಜನರು ಸತ್ತಿದ್ದಾರೆ, 49 ಜನರಿಗೆ ತೀವ್ರವಾಗಿ ಗಾಯಗಳಾಗಿ…

Read More

Fact Check : ಹಿಂದೂಗಳನ್ನು ಅಪಹಾಸ್ಯ ಮಾಡಿದ ತಮಿಳುನಾಡಿನ ವ್ಯಕ್ತಿಗೆ ತಿರುಪತಿಯಲ್ಲಿ ಥಳಿಸಲಾಗಿದೆ ಎಂಬುದು ಸುಳ್ಳು

ತಿರುಪತಿಯ ಶ್ರೀ ವೆಂಕಟೇಶ್ವರ ದೇವಸ್ಥಾನದಲ್ಲಿ ಲಡ್ಡುಗಳನ್ನು ತಯಾರಿಸಲು ಬಳಸುವ ತುಪ್ಪದಲ್ಲಿ ಗೋಮಾಂಸ, ಮೀನಿನ ಎಣ್ಣೆ ಮತ್ತು ಹಂದಿ ಕೊಬ್ಬನ್ನು ಹಾಕಿದ್ದಾರೆ ಎಂದು ಆರೋಪಿಸಲಾದ ವಿವಾದದದ ಕುರಿತು, ಸೆಪ್ಟೆಂಬರ್ 20 ರಂದು ಸುಪ್ರೀಂ ಕೋರ್ಟ್‌ನ ವಕೀಲರು ಈ ಕಾಯ್ದೆಯು ಮೂಲಭೂತವಾಗಿ ಉಲ್ಲಂಘನೆಯಾಗಿದೆ ಎಂದು ಆರೋಪಿಸಿದ್ದಾರೆ. ಈ ಹಿನ್ನೆಲೆಯಲ್ಲಿ ತಿರುಪತಿಯ ಸಾಲಿನಲ್ಲಿ ಹಿಂದೂಗಳಿಗೆ ಅಪಹಾಸ್ಯ ಮಾಡಿ, ಜನರು ವ್ಯಕ್ತಿಯೊಬ್ಬನನ್ನು ಥಳಿಸಿದ್ದಾರೆಂಬ ವೀಡಿಯೊವನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾಗುತ್ತಿದೆ. ಈ ವೀಡಿಯೊದಲ್ಲಿ ಪಿಯೂಷ್ ಮಾನುಷ್‌ ಎಂಬುವವರನ್ನು ಥಳಿಸಲಾಗಿದೆ ಎಂದು ಗುರುತಿಸಿ ಬಳಕೆದಾರರು ತಮ್ಮ…

Read More

Fact Check | A.R.ಡೈರಿ ಫುಡ್ ಪ್ರೈವೇಟ್ ಲಿಮಿಟೆಡ್‌ನ ಎಲ್ಲಾ ನೌಕರರು ಮುಸಲ್ಮಾನರು ಎಂಬುದಕ್ಕೆ ಯಾವುದೇ ಪುರಾವೆಗಳಿಲ್ಲ

“ತಿರುಪತಿ ದೇಗುಲಕ್ಕೆ ಪ್ರಸಾದ ತಯಾರಿಸುವ ಗುತ್ತಿಗೆ ಪಡೆದಿರುವ ಎ.ಆರ್‌. ಡೈರಿ ಫುಡ್‌ ಪ್ರೈವೆಟ್‌ ಲಿಮಿಟೆಡ್‌ನ ಉದ್ಯೋಗಿಗಳ ಹೆಸರುಗಳನ್ನು ಗಮನಿಸಿ ಇವರೆಲ್ಲ ಮುಸಲ್ಮಾನರು. ಇದು ನಾಚಿಕೆಗೇಡಿನ ಸಂಗತಿ. ಈ ಹೆಸರುಗಳನ್ನು ನೋಡಿದರೆ ಪ್ರಸಾದದಲ್ಲಿ ದನದ ಕೊಬ್ಬು ಹಾಗೂ ಮಾಂಸಾಹಾರಿ ಪದಾರ್ಥಗಳನ್ನು ಬೆರೆಸಿ ತಿರುಪತಿ ದೇವಸ್ಥಾನಕ್ಕೆ ಬರುವ ಭಕ್ತರಿಗೆ ಈ ಪ್ರಸಾದವನ್ನು ತಿನ್ನಿಸಿದರಲ್ಲಿ ಆಶ್ಚರ್ಯವಿಲ್ಲ. ಭಾರತದಲ್ಲಿ ಒಬ್ಬ ಹಿಂದೂ ವಕ್ಫ್ ಬೋರ್ಡ್ ಅಥವಾ ಯಾವುದೇ ಮುಸ್ಲಿಂ ಸಂಘಟನೆಯನ್ನು ನಡೆಸಬಹುದೇ? ಅದು ಸಾಧ್ಯವಿಲ್ಲ ಹಾಗಿದ್ದ ಮೇಲೆ ಹಿಂದೂಗಳ ದೇವಸ್ಥಾನಕ್ಕೆ ಮುಸಲ್ಮಾನರು ಏಕೆ?”…

Read More

Fact Check: ನಾಗಮಂಗಲ ಗಲಭೆ ಕೇಸ್​: ಪೋಲಿಸರ ಭೀತಿಯಿಂದ ಯುವಕ ಸಾವು ಎಂದು ಸುಳ್ಳು ಹರಡಿದ ಕನ್ನಡದ ಮಾಧ್ಯಮಗಳು

ಇತ್ತೀಚೆಗೆ (ಸೆ.11ರಂದು) ಮಂಡ್ಯ ಜಿಲ್ಲೆಯ ನಾಗಮಂಗಲದ ಬದರಿಕೊಪ್ಪಲಿನಲ್ಲಿ ಪ್ರತಿಷ್ಠಾಪಿಸಲಾಗಿದ್ದ ಗಣೇಶ ಮೂರ್ತಿ ವಿಸರ್ಜನೆ ವೇಳೆ ಗಲಭೆ ನಡೆದು ರಾಜ್ಯದಾದ್ಯಂತ ಆತಂಕಕ್ಕೆ ಕಾರಣವಾಗಿತ್ತು. ಅಂದು ಬುದವಾರ ಅದ್ದೂರಿ ಮೆರವಣಿಗೆ ಮೂಲಕ ಗಣೇಶ ಮೂರ್ತಿಯನ್ನು ವಿಸರ್ಜನೆ ಮಾಡಲಾಗುತ್ತಿತ್ತು. ಈ ವೇಳೆ ಕಿಡಿಗೇಡಿಗಳು ಏಕಾಏಕಿ ಕಲ್ಲು ತೂರಾಟ ನಡೆಸಿದ್ದರು. ಎರಡು ಗುಂಪುಗಳ ನಡುವಿನ ಘರ್ಷಣೆಯಿಂದ ಪರಿಸ್ಥಿತಿ ಉದ್ವಿಗ್ನಗೊಂಡಿತ್ತು. ತಡರಾತ್ರಿ ಪೊಲೀಸರು ಕಾರ್ಯಾಚರಣೆ ನಡೆಸಿ ಪರಿಸ್ಥಿತಿ ಹತೋಟಿಗೆ ತಂದರು. ಪ್ರಕರಣ ಸಂಬಂಧ ಇದುವರೆಗೆ 53 ಜನರನ್ನು ಬಂಧಿಸಲಾಗಿತ್ತು. ಬಳಿಕ ನ್ಯಾಯಾಧೀಶರ ಮುಂದೆ ಬಂಧಿತರನ್ನು…

Read More

Fact Check | ಚೀನಾದ ಹಳೆಯ ವೀಡಿಯೊವನ್ನು ಮಹಾರಾಷ್ಟ್ರದಲ್ಲಿ ಗುಂಡಿ ಬಿದ್ದ ರಸ್ತೆಗಳೆಂದು ಹಂಚಿಕೆ

“ಈ ವಿಡಿಯೋವನ್ನು ನೋಡಿ ಇದು ಇಂದಿನ ಮಹಾರಾಷ್ಟ್ರದ ಪರಿಸ್ಥಿತಿ. ಇಂದು ದೇಶದಲ್ಲಿ ಎಲ್ಲಯೂ ಕಂಡು ಬಾರದ ರಸ್ತೆ ಗುಂಡಿಗಳು‌ ಮಹಾರಾಷ್ಟ್ರದಲ್ಲಿ ಕಂಡು ಬರುತ್ತಿವೆ. ಗುಣಮಟ್ಟದ ರಸ್ತೆಗಳು ಮಹಾರಾಷ್ಟ್ರದಲ್ಲಿ ಮಾಯವಾಗುತ್ತಿದೆ, ಫಡ್ನವಿಸ್ ಅವರ ಅವರ ಮಾತುಗಳು ಕೇವಲ ಸುಳ್ಳುಗಳಿಂದ ಕೂಡಿದೆ. ಇನ್ನು ಮುಂದಿನ ದಿನಗಳಲ್ಲಾದರೂ ಮಹಾರಾಷ್ಟ್ರದ ಜನ ಎಚ್ಚೆತ್ತುಕೊಳ್ಳಲಿಲ್ಲವೆಂದರೆ ಅಪಾಯ ತಪ್ಪಿದ್ದಲ್ಲ” ಎಂದು ವಿಡಿಯೋವೊಂದನ್ನು ಸಾಮಾಜಿಕ ಜಾಲಾತಾಣದಲ್ಲಿ‌ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ‌. *दर्जेदार रस्ते आणि फडणवीस यांचा शब्द, परिवर्तन तर होणारच..*@Dev_Fadnavis @ShivSenaUBT_ @ShivsenaUBTComm pic.twitter.com/O3uSjplG20 —…

Read More