Fact Check | ವಂದೇ ಭಾರತ್ ರೈಲಿನ ಗಾಜು ಒಡೆದವರು ಮುಸ್ಲಿಂ ಎಂಬುದು ಸುಳ್ಳು

ಸಾಮಾಜಿಕ ಜಾಲತಾಣದಲ್ಲಿ ವಂದೇ ಭಾರತ್ ರೈಲಿನ ಗಾಜನ್ನು ಒಡೆಯುತ್ತಿರುವ ವ್ಯಕ್ತಿಯೊಬ್ಬನ ವಿಡಿಯೋವನ್ನು ಹಂಚಿಕೊಂಡು ” ಈ ಜಿಹಾದಿಗಳಿಗೆ ಬುದ್ದಿ ಕಲಿಸದಿದ್ದರೇ ಭಾರತಕ್ಕೆ ಅಪಾಯ ತಪ್ಪಿದ್ದಲ್ಲ. ಇವರು ಈಗ ಗಾಜನ್ನು ಒಡೆದಿದ್ದಾರೆ. ಮುಂದೇ ಇಡೀ ರೈಲನ್ನು ಒಡೆದು ಹಾಕಬಹುದು. ಇಂತಹ ಮುಸಲ್ಮಾನನನ್ನು ನೀವು ಉಗ್ರಗಾಮಿ, ಜಿಹಾದಿ ಎನ್ನದೆ, ಇನ್ನೇನು ಹೇಳುತ್ತೀರಿ.” ಎಂಬ ರೀತಿಯ ವಿವಿಧ ಟಿಪ್ಪಣಿಗಳೊಂದಿಗೆ ವಿಡಿಯೋವೊಂದನ್ನು ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. https://twitter.com/AmitSanatani8/status/1833412490903818612 ಈ ವಿಡಿಯೋ ನೋಡಿದ ಹಲವು ಮಂದಿ ಈತ ನಿಜಕ್ಕೂ ಮುಸ್ಲಿಂ ಎಂದು ಭಾವಿಸಿ,…

Read More

Fact Check | ಕಮಲಾ ಹ್ಯಾರಿಸ್‌ ಎಕ್ಸ್‌ ( ಈ ಹಿಂದಿನ ಟ್ವಿಟರ್‌) ಅನ್ನು ಸ್ಥಗಿತಗೊಳಿಸುವುದಾಗಿ ಬೆದರಿಕೆ ಹಾಕಿಲ್ಲ

“ಈ ವಿಡಿಯೋ ನೋಡಿ ಮುಂಬರುವ ಅಮೆರಿಕದ ಅಧ್ಯಕ್ಷೀಯ ಚುನಾವಣೆಯ ಹಿನ್ನೆಲೆಯಲ್ಲಿ ಅಮೆರಿಕದ ಉಪಾಧ್ಯಕ್ಷೆ ಮತ್ತು ಡೆಮೊಕ್ರೆಟಿಕ್ ಪಕ್ಷದ ಅಭ್ಯರ್ಥಿ ಕಮಲಾ ಹ್ಯಾರಿಸ್ ಅವರು ಅಧ್ಯಕ್ಷರಾಗಿ ಆಯ್ಕೆಯಾದರೆ, ಎಕ್ಸ್ ಅಂದರೆ ಈ ಹಿಂದಿನ ಟ್ವಿಟರ್ ಅನ್ನು ಮುಚ್ಚುವುದಾಗಿ ಬೆದರಿಕೆ ಹಾಕಿದ್ದಾರೆ. ಇದು ಮುಂದಿನ ದಿನಗಳಲ್ಲಿ ಡೆಮೊಕ್ರೆಟಿಕ್ ಪಕ್ಷ ಅಧಿಕಾರಕ್ಕೆ ಬಂದರೆ ಹೇಗೆ ಸರ್ವಾಧಿಕಾರ ನಡೆಯುತ್ತದೆ ಎಂಬುದಕ್ಕೆ ಕಮಲಾ ಅವರ ಹೇಳಿಕೆಯೇ ಉತ್ತಮ ಉದಾಹರಣೆ ಆಗಿದೆ.” ಎಂದು ವಿಡಿಯೋವನ್ನು ಹಂಚಿಕೊಳ್ಳಲಾಗುತ್ತಿದೆ. Kamala said she wants to shut down…

Read More

Fact Check : ಸಿಜೆಐ ಡಿ.ವೈ ಚಂದ್ರಚೂಡ್‌ರವರ ಕುಟುಂಬಕ್ಕೂ ಬಂಗಾಳ ಸಿಎಂರವರ ವೈದ್ಯರಾದ ಡಾ.ಎಸ್‌.ಪಿ ದಾಸ್‌ರವರಿಗೂ ಯಾವುದೇ ಸಂಬಂಧವಿಲ್ಲ

ಭಾರತದ ಮುಖ್ಯ ನ್ಯಾಯಮೂರ್ತಿಗಳಾದ (ಸಿಜೆಐ) ಡಿ.ವೈ.ಚಂದ್ರಚೂಡ್‌ರವರ ಪತ್ನಿ ಕಲ್ಪನಾ ದಾಸ್‌ರವರು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರ ಆಪ್ತ ವೈದ್ಯರಾದ ಎಸ್‌.ಪಿ ದಾಸ್‌ರವರ ಸೋದರ ಸೊಸೆ ಎಂಬ ಪೋಸ್ಟರ್‌ನ್ನು ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅಭಿಷೇಕ್ ಬ್ಯಾನರ್ಜಿಯವರೊಂದಿಗೆ ಚಂದ್ರಚೂಡ್‌ರವರು ವಿದೇಶಿ ಪ್ರವಾಸಕ್ಕೆ ಹೋಗಿದ್ದಾರೆ ಎಂಬುದರ ಕುರಿತು ಯಾವುದೇ ಆಧಾರಗಳಿಲ್ಲ. ಮತ್ತು ಕೋಲ್ಕತ್ತಾದ ಆರ್‌ಜಿ ಕರ್ ವೈದ್ಯಕೀಯ ಕಾಲೇಜಿನ ಆಸ್ಪತ್ರೆಯಲ್ಲಿ 31 ವರ್ಷದ ಕಿರಿಯ ವೈದ್ಯೆಯ ಮೇಲಾದ ಅತ್ಯಾಚಾರ, ಕೊಲೆ…

Read More

Fact Check | ಸರ್ದಾರ್ ವಲ್ಲಭಭಾಯಿ ಪಟೇಲ್ ಏಕತಾ ಪ್ರತಿಮೆ ಬಿರುಕು ಬಿಟ್ಟಿದೆ ಎಂಬುದು ಸುಳ್ಳು

” ನೋಡಿ ಇದು ಮೋದಿ ಸರ್ಕಾರದ ಬೃಹತ್‌ ಸಾಧನೆ ಎಂದು ಹೇಳಿಕೊಳ್ಳುವ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಏಕತಾ ಪ್ರತಿಮೆ. ಈಗ ಈ ಪ್ರತಿಮೆಯ ಪಾದಗಳಲ್ಲಿ ಬಿರುಕು ಬಿಟ್ಟಿದೆ. ಯಾವಾಗ ಬೇಕಾದರೂ ಈ ಪ್ರತಿಮೆ ಧರೆಗೆ ಉರುಳಬಹುದು. ಮೋದಿ ಸರ್ಕಾರದ ಕಳಪೆ ಕಾಮಗಾರಿಗೆ ಇದಕ್ಕಿಂತ ಮತ್ತೊಂದು ಉತ್ತಮ ಉದಾಹರಣೆ ಸಿಗಲಾರದು. ಇವರ ರಾಜಕೀಯ ಲಾಭಕ್ಕಾಗಿ ಈಗ ದೇಶದ ಮಹಾನ್‌ ನಾಯಕನ ಪ್ರತಿಮೆ ನೆಲಕಚ್ಚುವ ಹಂತಕ್ಕೆ ಬಂದಿದೆ.” ಎಂದು ಫೋಟೊವೊಂದನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳಲಾಗುತ್ತಿದೆ. Cracks appearing on…

Read More

Fact Check | ಮಣಿಪುರದಲ್ಲಿ ಭಾರತೀಯ ಸೇನಾ ಹೆಲಿಕಾಪ್ಟರ್ ಅನ್ನು ಹೊಡೆದುರುಳಿಸಲಾಗಿದೆ ಎಂಬುದು ಸುಳ್ಳು

ಭಾರತೀಯ ಸೇನಾ ಹೆಲಿಕಾಪ್ಟರ್ ಅನ್ನು ಅಲ್ಲಿನ ಸ್ವಾತಂತ್ರ್ಯ ಹೋರಾಟಗಾರರು ಎಂದು ಬಿಂಬಿಸಿಕೊಳ್ಳುತ್ತಿರುವ ಬಂಡುಕೋರರು ಹೊಡೆದುರುಳಿಸಿದ್ದಾರೆ. ಇದು ಭಾರತದ ಸೇನೆಗೆ ಬಹುದೊಡ್ಡ ಆಘಾತವನ್ನು ಉಂಟು ಮಾಡಿದೆ. ಭಾರತದಲ್ಲೇ ಇದ್ದು ಭಾರತಕ್ಕೆ ದ್ರೋಹ ಬಗೆಯುವ ಈ ಜನರಿಗೆ ಏನು ಹೇಳಬೇಕು ತೋಚುತ್ತಿಲ್ಲ.” ಎಂದು ವಿಡಿಯೋವೊಂದನ್ನು ಹಲವರು ಹಂಚಿಕೊಂಡರೆ, ಇನ್ನೂ ಕೆಲವರು ಮಣಿಪುರದ ಮುಕ್ತಿಜೋಧಾ ಸಂಘಟನೆ ಭಾರತದ ಸೇನಾ ಹೆಲಿಕಾಪ್ಟರ್‌ ಅನ್ನು ಹೊಡೆದುರುಳಿಸಿದೆ ಎಂದು ಹಂಚಿಕೊಳ್ಳುತ್ತಿದ್ದಾರೆ. 🚨🚨🚨#Indian fighter helicopter shot down by guided missile in #Manipur pic.twitter.com/JDo33x01FK…

Read More

Fact Check : ಬ್ರಿಟನ್ನಿನ ಮುಸ್ಲಿಂ ವೈದ್ಯರ ಸಂಘದ ಕಾರ್ಯಕ್ರಮದ ಹಳೆಯ ಚಿತ್ರವನ್ನು ಭಾರತದ್ದು ಎಂದು ಹಂಚಿಕೆ

ಭಾರತದಲ್ಲಿ  “ಮುಸ್ಲಿಂ ವೈದ್ಯರ ಸಂಘ” (MDA)  ಕಾರ್ಯನಿರ್ವಹಿಸುತ್ತಿದೆ .ಮತ್ತು  ಹಿಂದೂ ವೈದ್ಯರ ಸಂಘವಿದ್ದರೆ ಜಾತ್ಯತೀತರು ಹೇಗೆ ವರ್ತಿಸುತ್ತಿದ್ದರು? ಎಂಬ ಪೋಸ್ಟ್‌ನ್ನು ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ.   ಫ್ಯಾಕ್ಟ್‌ ಚೆಕ್‌ : ಈ ವೈರಲ್‌ ಪೋಸ್ಟ್‌ರ್‌ನ ಹೆಸರನ್ನು ಕೀವರ್ಡ್ ಆಗಿ ಬಳಸಿಕೊಂಡು Google ರಿವರ್ಸ್‌ ಇಮೇಜ್‌ನಲ್ಲಿ ಹುಡುಕಿದಾಗ “ಮುಸ್ಲಿಂ ವೈದ್ಯರ ಸಂಘ”ದ (MDA) ಅಧಿಕೃತ ಮುಸ್ಲಿಂ ಡಾಕ್ಟರ್ಸ್‌ ವೆಬ್‌ಸೈಟ್‌ ಲಭಿಸಿದೆ. ಅದರಲ್ಲಿ  “ಮುಸ್ಲಿಂ ವೈದ್ಯರ ಸಂಘ ಮತ್ತು ಅಲೈಡ್ ಹೆಲ್ತ್ ಪ್ರೊಫೆಷನಲ್ಸ್ (CIC)” ಎಂಬ ಸಂಸ್ಥೆಗಳು ಯುಕೆಯಲ್ಲಿ…

Read More

Fact Check | ಮೀಸಲಾತಿ ಕುರಿತ ರಾಹುಲ್‌ ಗಾಂಧಿ ಹೇಳಿಕೆಯನ್ನು ತಿರುಚಿದ ಬಿಜೆಪಿ

“ಬಾಬಾ ಸಾಹೇಬ್‌ ಅಂಬೇಡ್ಕರ್‌ ಅವರ ಸಂವಿಧಾನಕ್ಕೇ ಬೆಂಕಿ ಇಡಲು @INCIndia ಚಿಂತನೆ ನಡೆಸಿದೆ. ಮಂದ ಬುದ್ಧಿಯ ಬಾಲಕ @RahulGandhi ಅವರು ಅಧಿಕಾರಕ್ಕೆ ಬಂದರೆ ಮೀಸಲಾತಿಯನ್ನೇ ಕಿತ್ತು ಹಾಕುವುದಾಗಿ ದೂರದ ಅಮೆರಿಕದಲ್ಲಿ ಘೋಷಣೆ ಮಾಡಿದ್ದಾರೆ. ಕಾಂಗ್ರೆಸ್‌ ಬಡವರು, ದೀನ ದಲಿತರು, ಶೋಷಿತರು, ಪರಿಶಿಷ್ಟರು, ಬುಡಕಟ್ಟು ಸಮುದಾಯದವರ ವಿರೋಧಿ ಎನ್ನುವುದಕ್ಕೆ ಇದಕ್ಕಿಂತಲೂ ಸಾಕ್ಷಿ ಇನ್ನೇನು ಬೇಕು?” ಎಂದು ಬಿಜೆಪಿ ಕರ್ನಾಟಕ ತನ್ನ ಎಕ್ಸ್‌ ( ಈ ಹಿಂದಿನ ಟ್ವಿಟರ್‌)ನಲ್ಲಿ ಎಡಿಟೆಡ್‌ ವಿಡಿಯೋದೊಂದಿಗೆ ಹಂಚಿಕೊಂಡಿದೆ. ಬಾಬಾ ಸಾಹೇಬ್‌ ಅಂಬೇಡ್ಕರ್‌ ಅವರ ಸಂವಿಧಾನಕ್ಕೇ…

Read More

Fact Check | ಪ್ರಧಾನಿ ನರೇಂದ್ರ ಮೋದಿ ಅವರು 90 ದಿನಗಳ ಕಾಲ ಚೀನಾ ಉತ್ಪನ್ನಗಳನ್ನು ಬಳಸಬೇಡಿ ಎಂದು ಹೇಳಿಲ್ಲ

ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ವೊಂದು ಹರಿದಾಡುತ್ತಿದ್ದು, ಅದರ ಪ್ರಕಾರ ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು 90 ದಿನಗಳ ಕಾಲ ವಿದೇಶಿ ವಸ್ತುಗಳನ್ನು, ವಿಶೇಷವಾಗಿ ಚೀನಾದಿಂದ ಆಮದು ಮಾಡಿಕೊಳ್ಳುವ ವಸ್ತುಗಳನ್ನು ಖರೀದಿಸದಂತೆ ಭಾರತದ ಜನರನ್ನು ಒತ್ತಾಯಿಸಿದ್ದಾರೆ. ಈ ಪೋಸ್ಟ್‌ನ ಪ್ರಕಾರ, ಎಲ್ಲಾ ಭಾರತೀಯರು ಹೀಗೆ ಚೀನಾ ಉತ್ಪನ್ನಗಳನ್ನು ಖರೀದಿ ಮಾಡದಿದ್ದರೆ, ಭಾರತವು ವಿಶ್ವದ ಎರಡನೇ ಶ್ರೀಮಂತ ರಾಷ್ಟ್ರವಾಗಬಹುದು ಮತ್ತು ಅದೇ ಸಮಯದೊಳಗೆ ಭಾರತೀಯ ರೂಪಾಯಿ ಮೌಲ್ಯವು 2 ರೂಪಾಯಿಗೆ ಒಂದು ಯುಎಸ್ ಡಾಲರ್‌ಗೆ ತಲುಪಬಹುದು. ಕಳೆದ ವರ್ಷ ದೀಪಾವಳಿ…

Read More

Fact Check | ಮಹಿಳಾ ಐಪಿಎಸ್‌ ಅಧಿಕಾರಿಯ ವಿಡಿಯೋ ಬಳಸಿ ಸುಳ್ಳು ಉದ್ಯೋಗ ಮಾಹಿತಿ ಹಂಚಿಕೆ

“ಈ ವಿಡಿಯೋ ನೋಡಿ ಇವರು ಮಹಿಳಾ ಐಪಿಎಸ್ ಅಧಿಕಾರಿ ಅಂಕಿತ ಶರ್ಮ.. ಇವರು ಮನೆಯಲ್ಲಿ ಕುಳಿತುಕೊಂಡು ತಿಂಗಳಿಗೆ ಮೂವತ್ತು ಸಾವಿರ ರೂಪಾಯಿ ದುಡಿಯುವಂತಹ ಉದ್ಯೋಗ ಒಂದರ ಬಗ್ಗೆ ಮಾಹಿತಿ ನೀಡಿದ್ದಾರೆ. ಈ ಮಾಹಿತಿಯ ಪ್ರಕಾರ ಮನೆಯಲ್ಲಿಯೇ ಪೆನ್ಸಿಲ್ ಅನ್ನು ಪ್ಯಾಕ್ ಮಾಡುವ ಮೂಲಕ ತಿಂಗಳಿಗೆ ಉತ್ತಮ ಗಳಿಕೆಯನ್ನು ಕಾಣಬಹುದಾಗಿದೆ. ಇದರಿಂದ ಸಾಕಷ್ಟು ಮಂದಿ ಹಲವಾರು ಪ್ರಯೋಜನಗಳನ್ನು ಪಡೆದುಕೊಂಡಿದ್ದಾರೆ.” ಎಂದು ವಿಡಿಯೋವೊಂದನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳಲಾಗುತ್ತಿದೆ. ಈ ವಿಡಿಯೋದಲ್ಲಿ ಕೂಡ ಮಹಿಳಾ ಐಪಿಎಸ್ ಅಧಿಕಾರಿಯೊಬ್ಬರು ಪೆನ್ಸಿಲ್ ಪ್ಯಾಕಿಂಗ್‌ ಉದ್ಯೋಗದ…

Read More
ಮಧ್ಯಪ್ರದೇಶ

Fact Check : ಮಧ್ಯಪ್ರದೇಶದಲ್ಲಿ ಪ್ರತಿಮೆಯನ್ನು ದ್ವಂಸಗೊಳಿಸಿರುವ ವೀಡಿಯೊವನ್ನು ಕರ್ನಾಟಕದ್ದು ಎಂದು ಹಂಚಿಕೆ

ಟ್ರ್ಯಾಕ್ಟರ್‌ನಿಂದ ಪ್ರತಿಮೆಯನ್ನು ಕೆಡವುತ್ತಿರುವ ವೀಡಿಯೊವನ್ನು, ಕರ್ನಾಟಕದಲ್ಲಿ ನಡೆದ ಘಟನೆ ಎಂದು ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗಿದೆ. ಈ ವೀಡಿಯೊದಲ್ಲಿ ಟ್ರ್ಯಾಕ್ಟರ್ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸಲಾಗಿದೆ. ಮತ್ತು ಅಲ್ಲಿ ನೆರೆದಿದ್ದ ಜನರು ದೊಣ್ಣೆ ಮತ್ತು ಕಲ್ಲುಗಳನ್ನು ಬಳಸಿ ಪ್ರತಿಮೆಯನ್ನು ದ್ವಂಸ ಮಾಡುತ್ತಿರುವ ದೃಶ್ಯವು ಕಂಡುಬಂದಿದೆ. ಕೊನೆಯಲ್ಲಿ, ಒಬ್ಬ ವ್ಯಕ್ತಿ ಪ್ರಚೋದನಕಾರಿ ಕೋಮುವಾದಿ ಹೇಳಿಕೆಯನ್ನು ಕೊಡುತ್ತಾನೆ. ಫ್ಯಾಕ್ಟ್‌ ಚೆಕ್‌ : ಈ ವೈರಲ್‌ ಘಟನೆಯ ಸ್ಕ್ರೀನ್‌ಶಾಟ್‌ ಪೋಟೊಗಳನ್ನು Google ರಿವರ್ಸ್ ಇಮೇಜ್ ಬಳಸಿಕೊಂಡು ಹುಡುಕಿದಾಗ ಈ ಘಟನೆ ಕರ್ನಾಟಕದ್ದಲ್ಲ…

Read More