Fact Check: ಜನ ವಿಶ್ವಾಸ ಮಹಾರ್ಯಾಲಿಯಲ್ಲಿ ಸೇರಿದ ಜನಸಾಗರ ಎಂದು ಎಡಿಟೆಟ್ ಪೋಟೋಗಳ ಹಂಚಿಕೆ

ಲೋಕಸಭಾ ಚುನಾವಣೆ ಸಮೀಪಿಸುತ್ತಿರುವ ಹಿನ್ನಲೆಯಲ್ಲಿ ರಾಜಕೀಯ ಪಕ್ಷಗಳು ತಮ್ಮ ಶಕ್ತಿ ಪ್ರದರ್ಶನಕ್ಕೆ ಮುಂದಾಗಿವೆ. ಇದೇ ಸಂದರ್ಭದಲ್ಲಿ ಮತದಾರರನ್ನು ಸೆಳೆಯುವ ಸಲುವಾಗಿ ಅನೇಕ ಸುಳ್ಳು ಪೋಟೋಗಳನ್ನು ವಿಡಿಯೋಗಳನ್ನು ಹರಿಬಿಡಲಾಗುತ್ತಿದೆ. ಇದರಂತೆ, “ರಾಷ್ಟ್ರೀಯ ಜನತಾ ದಳ(RJD) ಪಕ್ಷವು ಪಾಟ್ನಾದ ಗಾಂಧಿ ಮೈದಾನದಲ್ಲಿ ಆಯೋಜಿಸಿದ್ದ ಜನ ವಿಶ್ವಾಸ ಮಹಾರ್ಯಾಲಿಯಲ್ಲಿ ಸೇರಿದ ಜನಸಾಗರ. ಇಂಡಿಯಾ ಒಕ್ಕುಟದ ಎಲ್ಲಾ ನಾಯಕರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಾರೆ.” ಎಂದು ಪ್ರತಿಪಾಧಿಸಿ RJD ಪಕ್ಷದ ಹಲವು ರಾಜಕೀಯ ಮುಖಂಡರು ತಮ್ಮ X ಖಾತೆಯಲ್ಲಿ ಮೈದಾನವೊಂದರಲ್ಲಿ ಜನಗಳು ತುಂಬಿದ ಪೋಟೋವೊಂದನ್ನು ಹಂಚಿಕೊಳ್ಳುತ್ತಿದ್ದಾರೆ….

Read More

Fact Check | ಬಿಜೆಪಿ ಬಿಡುಗಡೆ ಮಾಡಿರುವ FSL ವರದಿ ನಕಲಿ

“ಸತ್ಯವನ್ನೇ ತಿರುಚಿ ಸುಳ್ಳು ಮಾಡಿ ಪ್ರಚಾರ ಮಾಡಿದ ಕಾಂಗ್ರೆಸ್ಸಿಗರೇ ಸುಳ್ಳು ಸುದ್ದಿಗಳ ಸೃಷ್ಟಿಕರ್ತರು ಎಂಬುದನ್ನು ವೈಜ್ಞಾನಿಕ ವರದಿ ಬಹಿರಂಗಪಡಿಸಿದೆ. ವಿಧಾನಸೌಧದಲ್ಲಿ ಪಾಕಿಸ್ತಾನ ಜಿಂದಾಬಾದ್ ಎಂದು ಕೂಗಿದ್ದನ್ನು “ನಾಸೀರ್ ಸಾಬ್ ಜಿಂದಾಬಾದ್” ಎಂದು ತಿರುಚಿ ಕನ್ನಡಿಗರಿಗೆ ಟೋಪಿ ಹಾಕಲು ಹೊರಟ ಹುನ್ನಾರ ಈಗ FSL ವರದಿಯಲ್ಲಿ ಬಟಾ ಬಯಲಾಗಿದೆ.” ಸತ್ಯವನ್ನೇ ತಿರುಚಿ ಸುಳ್ಳು ಮಾಡಿ ಪ್ರಚಾರ ಮಾಡಿದ ಕಾಂಗ್ರೆಸ್ಸಿಗರೇ ಸುಳ್ಳು ಸುದ್ದಿಗಳ ಸೃಷ್ಟಿಕರ್ತರು ಎಂಬುದನ್ನು ವೈಜ್ಞಾನಿಕ ವರದಿ ಬಹಿರಂಗಪಡಿಸಿದೆ. ವಿಧಾನಸೌಧದಲ್ಲಿ ಪಾಕಿಸ್ತಾನ ಜಿಂದಾಬಾದ್ ಎಂದು ಕೂಗಿದ್ದನ್ನು “ನಾಸೀರ್ ಸಾಬ್…

Read More

Fact Check | ವಾಟ್ಸಾಪ್‌ಗೆ ಸಂಬಂಧಿಸಿದಂತೆ ಹರಿದಾಡುತ್ತಿವೆ ಹಲವು ಸುಳ್ಳು ಸುದ್ದಿಗಳು..!

ಸಾಮಾಜಿಕ ಮಾಧ್ಯಮಗಳಾದ ಫೇಸ್‌ಬುಕ್, ಟ್ವಿಟರ್ ಮತ್ತು ವಾಟ್ಸಾಪ್‌ಗಳಲ್ಲಿ, ವಾಟ್ಸಾಪ್‌ ಸಂದೇಶಗಳಿಗೆ ಸಂಬಂಧಿಸಿದಂತೆ ಪೋಸ್ಟ್‌ಅನ್ನು ಹಂಚಿಕೊಳ್ಳಲಾಗುತ್ತಿದೆ. ಇದರ ಸತ್ಯಾಸತ್ಯತೆಯನ್ನು ತಿಳಿದುಕೊಳ್ಳದೆ ಹಲವರು ಇದನ್ನೇ ನಿಜವಾದ ಮಾಹಿತಿ ಎಂದು ನಂಬಿಕೊಂಡಿದ್ದಾರೆ. ವೈರಲ್‌ ಆಗುತ್ತಿರುವ ಸಂದೇಶದಲ್ಲಿ ಈ ಕೆಳಗಿನ ವಿಚಾರಗಳನ್ನು ಪ್ರಮುಖ ಅಂಶಗಳಂತೆ ಉಲ್ಲೇಖ ಮಾಡಲಾಗುತ್ತಿದೆ.  “ಸಂದೇಶಗಳಲ್ಲಿ ಪ್ರಸ್ತಾಪಿಸಿರುವ ಹೊಸ ನಿಯಮಗಳು ಈ ಕೆಳಗಿನಂತಿವೆ: 01. ಎಲ್ಲಾ ಕರೆಗಳು ರೆಕಾರ್ಡಿಂಗ್ ಆಗುತ್ತಿವೆ. 02. ಎಲ್ಲಾ ಕರೆ ರೆಕಾರ್ಡಿಂಗ್‌ಗಳನ್ನು ಉಳಿಸಲಾಗುತ್ತದೆ. 03. WhatsApp, Facebook, Twitter ಮತ್ತು ಎಲ್ಲಾ ಸಾಮಾಜಿಕ ಮಾಧ್ಯಮಗಳನ್ನು ಮೇಲ್ವಿಚಾರಣೆ…

Read More

Fact Check | ಅರಬ್‌ನ ಹಿಂದೂ ದೇವಾಲಯದಲ್ಲಿ ಮುಸ್ಲಿಂ ಪುರಷರು ನೃತ್ಯ ಮಾಡಿದ್ದಾರೆ ಎಂಬುದು ಸುಳ್ಳು..!

“ಈ ವಿಡಿಯೋ ನೋಡಿ ಹಿಂದೂ ದೇವಾಲಯದಲ್ಲಿ ಅರಬ್ ಪುರುಷರು ನೃತ್ಯ ಮಾಡುತ್ತಿದ್ದಾರೆ.. ಅರಬ್‌ನಲ್ಲೂ ಬದಲಾವಣೆ ಆಗುತ್ತಿದೆ.” ಎಂದು ವಿಡಿಯೋವೊಂದನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳಲಾಗುತ್ತಿದೆ. ಈ ವಿಡಿಯೋ ಮೂಲಕ ಅರಬ್‌ನ ಜನರು ಹಿಂದೂ ಧರ್ಮವನ್ನು ಸೇರ ಬಯಸುತ್ತಿದ್ದಾರೆ ಎಂಬ ಅರ್ಥದಲ್ಲಿ ವಿಡಿಯೋವನ್ನು ಹಂಚಿಕೊಳ್ಳುತ್ತಿದ್ದಾರೆ.  ಆದರೆ ವಾಸ್ತವದಲ್ಲಿ ವಿಡಿಯೋ ಕುರಿತು ಪರಿಶೀಲನೆ ನಡೆಸಿದಾಗ ಅಸಲಿ ವಿಚಾರ ಹೊರ ಬಂದಿದೆ. ಈ ವಿಡಿಯೋದಲ್ಲಿ ಹಲವು ರೀತಿಯಾಗಿ ವಿವಿಧ ಬರಹಗಳೊಂದಿಗೆ ಹಂಚಿಕೊಳ್ಳುತ್ತಿದ್ದು, ಪರಿಶೀಲನೆ ನಡೆಸದೆ, ವಿಡಿಯೋದಲ್ಲಿರುವುದು ನಿಜವೇ ಎಂಬುದನ್ನು ತಿಳಿಯದೇ ಸಾಕಷ್ಟು ಮಂದಿ…

Read More

Fact Check | ಬೆಂಗಾಳಿ ಸಿಯೆರಾ ಲಿಯೋನ್‌ ದೇಶದ ಅಧಿಕೃತ ಭಾಷೆ ಎಂಬುದು ಸುಳ್ಳು

“ಬೆಂಗಾಳಿ ಭಾಷೆ ಪಶ್ಚಿಮ ಆಫ್ರಿಕಾದಲ್ಲಿನ ಸಿಯೆರಾ ಲಿಯೋನ್‌ ಅಧಿಕೃತ ಭಾಷೆಯಾಗಿದೆ. ಈ ಬಗ್ಗೆ ಪ್ರತಿಯೊಬ್ಬ ಭಾರತೀಯನು ಹೆಮ್ಮೆ ಪಡಬೇಕು” ಎಂಬ ಸುದ್ದಿಯೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ. ದುರಂತವೆಂದರೇ ಈ ಸುದ್ದಿಯನ್ನು ಪರಿಶೀಲನೆ ನಡೆಸದೇ ಹಲವು ರಾಷ್ಟ್ರೀಯ ಸುದ್ದಿ ಮಾಧ್ಯಮಗಳು ವರದಿ ಮಾಡಿವೆ. ಹೀಗಾಗಿ ಈಗ ಮಾಧ್ಯಮಗಳ ಮೇಲಿ ವಿಶ್ವಾಸರ್ಹತೆಯ ಬಗ್ಗೆ ಪಶ್ನೆಗಳು ಮೂಡುವಂತೆ ಮಾಡಿದೆ. ನ್ಯೂಸ್‌ 18, ಆಜ್‌ ತಕ್‌, ಢಾಕಾ ಟ್ರಿಬ್ಯುನ್‌ ದ ಇಂಡಿಯನ್‌ ಎಕ್ಸ್‌ಪ್ರೆಸ್‌ ಸುದ್ದಿ ಸಂಸ್ಥೆಗಳೆ ಈ ಸುಳ್ಳು ಸುದ್ದಿಯನ್ನು ಪ್ರಸಾರ…

Read More

Fact Check | ಮದರಾಸದಲ್ಲಿ ಭಾರೀ ಶಸ್ತ್ರಾಸ್ತ ಪತ್ತೆ ಎಂದು ಸುಳ್ಳು ಸುದ್ದಿ ಹಬ್ಬಿದ ಕಿಡಿಗೇಡಿಗಳು..!

“ಉತ್ತರ ಪ್ರದೇಶದ ಬಿಜ್ನೋರ್‌ನ ಮದರಾಸ ಮೇಲೆ ನಡೆದ ದಾಳಿಯಲ್ಲಿ ಶಸ್ತ್ರಾಸ್ತ್ರಗಳ ಸಂಗ್ರಹ ಪತ್ತೆ.!, ಆರು ಧರ್ಮ ಗುರುಗಳನ್ನ ಬಂಧಿಸಲಾಗಿದೆ. ಕಾಳಜಿಯ ಅಂಶವೆಂದರೆ ಎಲ್ಎಂಜಿ ಮಿಷನ್ ಗನ್‌ ಲಭ್ಯತೆ. ಒಂದು ನಿಮಿಷದಲ್ಲಿ 8,000 ಸುತ್ತು ಗುಂಡು ಹಾರಿಸುವ ಸಾಮರ್ಥ್ಯ ಮಷೀನ್ ಗನ್. ಈ ಜನರ ತಯಾರಿಯನ್ನು ಅರ್ಥ ಮಾಡಿಕೊಳ್ಳಿ ಹಿಂದುಗಳೇ.. ಎದ್ದೇಳಿ ಅವರು ನಿಮ್ಮ ಭವಿಷ್ಯವನ್ನು ನಿರ್ಧರಿಸಿದ್ದಾರೆ.” “ಮೋದಿ ಹೋರಾಡಲು ತಡವಾಗಿದೆ ಈ ಸತ್ಯವನ್ನು ಪ್ರತಿಯೊಬ್ಬ ಹಿಂದೂ ಸಹೋದರರಿಗೆ ಹಂಚಿಕೊಳ್ಳಿ” ಎಂದು ಬರಹದೊಂದಿಗೆ ಸುಮಾರು 7 ಫೋಟೋಗಳನ್ನು ಹಂಚಿಕೊಳ್ಳಲಾಗಿದೆ….

Read More

Fact Check: ದುಬೈನ ಮಸೀದಿಯೊಂದರಲ್ಲಿ ಮುಸ್ಲಿಂ ಮಹಿಳೆಯರು ರಾಮ ಭಜನೆ ಹಾಡಿದ್ದಾರೆ ಎಂಬುದು ಸುಳ್ಳು

ರಾಮ ಮಂದಿರದ ಉದ್ಘಾಟನೆಯ ಬಳಿಕ ಜಗತ್ತಿನ ಬಹುತೇಕ ರಾಷ್ಟ್ರಗಳಲ್ಲಿ ರಾಮ ಭಜನೆ ಮಾಡಲಾಗುತ್ತಿದೆ. ಮುಸ್ಲಿಂ ರಾಷ್ಟ್ರಗಳಲ್ಲಿಯೂ ಸಹ ಶ್ರೀ ರಾಮನ ಭಜನೆಯನ್ನು ಮಾಡಲಾಗುತ್ತಿದೆ ಎಂದು ಪ್ರತಿಪಾದಿಸಿದ ಹಲಾವರು ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಇತ್ತೇಚೆಗೆ, ದುಬೈನ ಮಸೀದಿಯೊಂದರಲ್ಲಿ ಮುಸ್ಲಿಂ ಮಹಿಳೆಯರು ರಾಮ ಭಜನೆ ಹಾಡುತ್ತಿರುವ ವಿಡಿಯೋ. ಇದು ಭಾರತದಲ್ಲಿ ನಡೆದಿದ್ದರೆ ಇಸ್ಲಾಂ ಅಪಾಯದಲ್ಲಿದೆ ಎನ್ನುತ್ತಿದ್ದರು. ಎಂದು ಪ್ರತಿಪಾದಿಸಿದ ವಿಡಿಯೋ ಒಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಫ್ಯಾಕ್ಟ್‌ಚೆಕ್: ಈ ವಿಡಿಯೋವನ್ನು ದುಬೈನ ಮಸೀದಿಯಲ್ಲಿ ತೆಗೆಯಲಾಗಿಲ್ಲ, ಇದು ಆಂಧ್ರಪ್ರದೇಶದ ಪುಟ್ಟಪರ್ತಿಯಲ್ಲಿರುವ ಪ್ರಶಾಂತಿ…

Read More
ನೆಹರೂ

Fact Check: ನೆಹರೂರವರು ಬ್ರಿಟೀಷರಿಗೆ ಕ್ಷಮಾಪಣಾ ಪತ್ರ ಬರೆದಿದ್ದರು ಎಂದು ಸುಳ್ಳು ಹೇಳಿದ ಅಜಿತ್ ಹನುಮಕ್ಕನವರ್

ಜವಹರಲಾಲ್ ನೆಹರೂ ಅವರ ಕುರಿತು ಪ್ರತಿ ದಿನ ಒಂದಿಲ್ಲೊಂದು ಸುಳ್ಳು ಸುದ್ದಿಗಳನ್ನು ಹರಿಬಿಡಲಾಗುತ್ತಿರುತ್ತದೆ. ಕೆಲವು ಕಿಡಿಗೇಡಿಗಳು ಇತಿಹಾಸವನ್ನು ತಿರುಚುವ ಸಲುವಾಗಿ ಅನೇಕ ಅರೋಪಗಳನ್ನು ಮಾಡುತ್ತಿರುತ್ತಾರೆ. ನೆಹರು ಅವರ ಕುರಿತ ಇಂತಹ ಅನೇಕ ಆರೋಪಗಳನ್ನು ಹೀಗಾಗಲೇ ಬಯಲು ಮಾಡಲಾಗಿವೆ. ಅವುಗಳನ್ನು ನೀವು ಇಲ್ಲಿ ಓದಬಹುದು. ಈಗ, ಅಸಲಿಗೆ ನೆಹರು ಅವರು ಕೇವಲ 14 ದಿನ ಮಾತ್ರ ಜೈಲು ವಾಸ ಅನುಭವಿಸಿದ್ದು ಮತ್ತು ಅವರು ಸಹ ನಭಾ ಜೈಲಿನಿಂದ ಹೊರಬರಲು ಬ್ರಿಟೀಷರಿಗೆ ಕ್ಷಮಾಪಣಾ ಪತ್ರವನ್ನು ಬರೆದಿದ್ದರು. ಎಂದು ಪ್ರತಿಪಾದಿಸಲಾಗುತ್ತಿದೆ. ಕನ್ನಡದ…

Read More

Fact Check | ನಿತಾಶಾ ಕೌಲ್‌ ಪಾಕಿಸ್ತಾನದವರು ಎಂಬುದು ಸುಳ್ಳು

“ಕರ್ನಾಟಕ ಕಾಂಗ್ರೆಸ್‌ ಸರ್ಕಾರದ ಆಮಂತ್ರಣದಂತೆ ಭಾರತದ ಸಂವಿಧಾನದ ಬಗ್ಗೆ ಭಾಷಣ ಮಾಡಲು ಪಾಕಿಸ್ತಾನದಿಂದ ಬಂದಿದ್ದ ನಿತಾಷ ಕೌಲ್‌ ಅನ್ನೋ ಜಿಹಾದಿಯನ್ನು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಆದೇಶದಂತೆ ಕೇಂದ್ರೀಯ ಭದ್ರತಾ ಪಡೆ ಬೆಂಗಳೂರು ವಿಮಾನ ನಿಲ್ದಾಣದಿಂದ ಸಿದ್ದರಾಮಯ್ಯ ತವರು ಮನೆ ಪಾಕಿಸ್ತಾನಕ್ಕೆ ಹಿಂದೆ ಕಳಿಸಿದೆ.” “ಮಾನ ಮರ್ಯಾದೆ ಇಲ್ಲದ ಕರ್ನಾಟಕ ಕಾಂಗ್ರೆಸ್‌ ಸರ್ಕಾರ ಸರಕಾರಿ ಪೋಷಿತ ಜಿಹಾದಿ ಕೂಲಿಗಳನ್ನು ರಾಜ್ಯಕ್ಕೆ ಕರೆಸಿಕೊಳ್ಳುತ್ತಿರುವುದು ದುರಂತ” ಎಂಬ ಸುದ್ದಿಯೊಂದು ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದ. ಫ್ಯಾಕ್ಟ್‌ಚೆಕ್‌  ಇವರು ಪಾಕಿಸ್ತಾನದವರು…

Read More

Fact Check: ವಿಧಾನ ಸೌಧದಲ್ಲಿ “ಪಾಕಿಸ್ತಾನ ಜಿಂದಾಬಾದ್” ಘೋಷಣೆ ಎಂದು ಸುಳ್ಳು ವರದಿ ಮಾಡಿದ ಕರ್ನಾಟಕದ ಮಾಧ್ಯಮಗಳು

ಪ್ರತ್ಯಕ್ಷವಾಗಿ ಕಂಡರೂ ಪ್ರಮಾಣಿಸಿ ನೋಡು ಎಂಬ ಗಾದೆ ಮಾತು ನಮ್ಮ ಸಮಾಜದಲ್ಲಿ ಬಹು ಹಿಂದಿನಿಂದಲೂ ಇದೆ. ಆದರೆ ಇಂದು ಬಹುತೇಕ ಮಾಧ್ಯಮಗಳು ಜನರಿಗೆ ಸತ್ಯವನ್ನು ತೋರಿಸುವ ಬದಲಾಗಿ ಆಧಾರರಹಿತವಾದ ಸುಳ್ಳುಗಳನ್ನೇ ಹಂಚಿಕೊಳ್ಳುತ್ತಿವೆ. ಸುದ್ದಿಯ ನಿಖರತೆಯನ್ನು ಪರೀಕ್ಷಿಸಿಕೊಳ್ಳದೆ ಪತ್ರಿಕಾ ಧರ್ಮವನ್ನು ಮರೆತವರಂತೆ ವರ್ತಿಸುತ್ತಿವೆ. ಇದಕ್ಕೆ ಸಾಕ್ಷಿಯೆಂಬಂತೆ ನೆನ್ನೆ ನಡೆದ ರಾಜ್ಯ ಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಸಂಸದ ನಾಸಿರ್ ಹುಸೇನ್ ಅವರ ಬೆಂಬಲಿಗರಿಂದಲೇ ವಿಧಾನ ಸೌಧದಲ್ಲಿ “ಪಾಕಿಸ್ತಾನ್ ಜಿಂದಾಬಾದ್” ಘೋಷಣೆ ಕೇಳಿಬಂದಿದೆ. ಎಂದು ಕನ್ನಡದ ಬಹುತೇಕ ಮಾಧ್ಯಮಗಳು ವರದಿ ಮಾಡಿವೆ….

Read More