Team Kannada fact check

ರಾಮ, ಹನುಮರ ಪೋಸ್ಟರ್ ಹರಿದವರು ಬಿಜೆಪಿ ಸದಸ್ಯರೇ ಹೊರತು ಕಾಂಗ್ರೆಸ್ ಬೆಂಬಲಿಗರಲ್ಲ

ಹಲವಾರು ಜನರು ರಾಮ, ಹನುಮ ಸೇರಿದಂತೆ ಹಲವು ಹಿಂದೂ ದೇವತೆಗಳ ಪೋಸ್ಟರ್, ಬ್ಯಾನರ್ ಹರಿದು ಹಾಕುತ್ತಿರುವ, ಅವುಗಳನ್ನು ತುಳಿಯುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಕಾಂಗ್ರೆಸ್ ಕಾರ್ಯಕರ್ತರು ಹಿಂದೂ ದೇವತೆಗಳ ಫೋಟೋ ಹರಿದು ಸನಾತನಾ ಧರ್ಮಕ್ಕೆ ಅಪಚಾರ ಮಾಡುತ್ತಿದ್ದಾರೆ ಎಂದು ಪ್ರತಿಪಾದಿಸಲಾಗುತ್ತಿದೆ. ಇದು ನಿಜವೇ ಎಂದು ಪರಿಶೀಲಿಸೋಣ. ಫ್ಯಾಕ್ಟ್ ಚೆಕ್ ವಿಡಿಯೋವನ್ನು ಸೂಕ್ಷ್ಮವಾಗಿ ಗಮನಿಸಿದಾಗ ಮೇಲ್ನೋಟಕ್ಕೆ ಈ ರೀತಿ ಪೋಸ್ಟರ್ ಹರಿದು ಪ್ರತಿಭಟನೆ ಮಾಡುತ್ತಿರುವವು ಕಾಂಗ್ರೆಸ್ ಬೆಂಬಲಿಗರಲ್ಲ, ಬದಲಿಗೆ ಬಿಜೆಪಿ ಕಾರ್ಯಕರ್ತರು ಎಂದು ಅವರು ಹಾಕಿರುವ ಬಿಜೆಪಿ…

Read More

Fact Check: ಕಾಂಗ್ರೆಸ್ ಉಗ್ರರ ಕುಟುಂಬಕ್ಕೆ ಪರಿಹಾರ ನೀಡುತ್ತದೆ ಎಂಬ ಪೋಸ್ಟ್ ದಿಕ್ಕುತಪ್ಪಿಸುವಂತಿದೆ

ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ “ಭಾರತೀಯ ಸಶಸ್ತ್ರ ಪಡೆಗಳಿಂದ ಕೊಲ್ಲಲ್ಪಟ್ಟ ಭಯೋತ್ಪಾದಕರ ಕುಟುಂಬ ಸದಸ್ಯರಿಗೆ ತಲಾ ₹ 1 ಕೋಟಿ ನೀಡುವುದಾಗಿ, ಮತ್ತು ಸೆರೆಮನೆಯಲ್ಲಿರುವ ಎಲ್ಲಾ ಉಗ್ರರನ್ನು ಬಿಡುಗಡೆ ಮಾಡುತ್ತದೆ ಎಂದು ಕಾಂಗ್ರೆಸ್ ನಾಯಕ ಸಗೀರ್ ಸೈಯದ್ ಖಾನ್ ಭರವಸೆ ನೀಡುತ್ತಿದ್ದಾರೆ” ಎಂದು ಪ್ರತಿಪಾದಿಸಿ ವಿಡಿಯೋವೊಂದನ್ನು ಹಂಚಿಕೊಳ್ಳಲಾಗುತ್ತಿದೆ. ಇದು ನಿಜವೇ ಎಂದು ಪರಿಶೀಲಿಸೋಣ. ಫಾಕ್ಟ್ ಚೆಕ್ ವಾಟ್ಸಾಪ್‌ನಲ್ಲಿ ಹರಿದಾಡುತ್ತಿರುವ ವಿಡಿಯೋವನ್ನು ಸೂಕ್ಷ್ಮವಾಗಿ ಗಮನಿಸಿದಾಗ ಅದರ ಮೇಲೆ R. ಎಂಬ ಲೋಗೊ ಇರುವುದರಿಂದ ಇದು ರಿಪಬ್ಲಿಕ್ ಟಿವಿಯ ವಿಡಿಯೋ ಎಂದು…

Read More

ಇತ್ತೀಚೆಗೆ ರಾಹುಲ್ ಗಾಂಧಿ ಅಂಬಾನಿ-ಅದಾನಿ ಬಗ್ಗೆ ಮಾತನಾಡುತ್ತಿಲ್ಲ ಎಂಬ ಮೋದಿಯವರ ಹೇಳಿಕೆ ಸುಳ್ಳು

ಕಾಂಗ್ರೆಸ್ ಪಕ್ಷ ಮತ್ತು ರಾಹುಲ್ ಗಾಂಧಿಯವರು ಮೋದಿಯವರು ತಮ್ಮ ಸ್ನೇಹಿತರಾದ ಅಂಬಾನಿ-ಅದಾನಿಗಾಗಿ ಮಾತ್ರ ಕೆಲಸ ಮಾಡುತ್ತಿದ್ದಾರೆ ಎಂದು ಹಿಂದೆ ಹಲವು ಬಾರಿ ಟೀಕಿಸಿದ್ದರು. ಆದರೆ ಈಗ ಅವರೊಡನೆ ಒಪ್ಪಂದ ಮಾಡಿಕೊಂಡು ಟೀಕಿಸುವುದನ್ನು ನಿಲ್ಲಿಸಿದ್ದಾರೆ ಎಂದು ಪ್ರಧಾನಿ ಮೋದಿ ಆರೋಪಿಸಿದ್ದಾರೆ. ತೆಲಂಗಾಣದಲ್ಲಿ ಲೋಕಸಭಾ ಚುನಾವಣಾ ಪ್ರಚಾರದ ವೇಳೆ ಮಾತನಾಡಿದ ಅವರು, ‘ಚುನಾವಣೆ ಘೋಷಣೆಯಾಗುತ್ತಿದ್ದಂತೆ ಕಾಂಗ್ರೆಸ್ ಪಕ್ಷವು ಏಕಾಏಕಿ ಅಂಬಾನಿ-ಅದಾನಿಯ ವಿಷಯದ ಬಗ್ಗೆ ಟೀಕಿಸುವುದನ್ನು ನಿಲ್ಲಿಸಿದೆ. ಕಾಂಗ್ರೆಸ್‌ಗೆ ಎಷ್ಟು ಹಣ ತಲುಪಿದೆ? ಟೆಂಪೊದಲ್ಲಿ ಎಷ್ಟು ಕಪ್ಪು ಹಣ ಕಾಂಗ್ರೆಸ್‌ಗೆ ತಲುಪಿದೆ?…

Read More

ಬೇಸಿಗೆಯಲ್ಲಿ ವಾಹನಕ್ಕೆ ಫುಲ್ ಟ್ಯಾಂಕ್ ಪೆಟ್ರೋಲ್ ತುಂಬಿಸಿದರೆ ಬ್ಲಾಸ್ಟ್ ಆಗುತ್ತದೆ ಎಂಬುದು ಸುಳ್ಳು

ಬೇಸಿಗೆಯಲ್ಲಿ ವಾಹನಗಳಿಗೆ ಫುಲ್ ಟ್ಯಾಂಕ್ ಪೆಟ್ರೋಲ್ ತುಂಬಿಸಿದರೆ ನಿಮ್ಮ ವಾಹನ ಸ್ಪೋಟಗೊಳ್ಳುತ್ತದೆ. ಹಾಗಾಗಿ ಫುಲ್ ಟ್ಯಾಂಕ್ ಹಾಕಿಸಬೇಡಿ ಎಂದು  ಇಂಡಿಯನ್ ಆಯಿಲ್ ಸಂಸ್ಥೆಯು ತನ್ನ ಗ್ರಾಹಕರಿಗೆ ಎಚ್ಚರಿಕೆ ನೀಡಿದೆ ಎಂಬ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಇದು ನಿಜವೇ ಎಂದು ಪರಿಶೀಲಿಸೋಣ. ಫ್ಯಾಕ್ಟ್ ಚೆಕ್ ಈ ಕುರಿತು ಹುಡುಕಿದಾಗ ಯಾವುದೇ ಅಧಿಕೃತ ವರದಿಗಳು ಕಂಡುಬಂದಿಲ್ಲ. ಇಂಡಿಯನ್ ಆಯಿಲ್ ವೆಬ್‌ಸೈಟ್ ಮತ್ತು ಅದರ ಸಾಮಾಜಿಕ ಜಾಲತಾಣಗಳಲ್ಲಿಯೂ ಈ ಕುರಿತು ಎಚ್ಚರಿಕೆ ಕಂಡುಬಂದಿಲ್ಲ. ಮತ್ತಷ್ಟು ಹಿಂದಕ್ಕೆ ಹೋಗಿ ಹುಡುಕಿದಾಗ 2019ರಲ್ಲಿ…

Read More

ರಾಮನಗರ: ಬಾಲಕೃಷ್ಣಕಿ ಜೈ ಎಂದಿದ್ದನ್ನು ಪಾಕಿಸ್ತಾನ್‌ಕಿ ಜೈ ಎಂದು ಸುಳ್ಳು ಹಬ್ಬಿಸಿದ ಕಿಡಿಗೇಡಿಗಳು

ರಾಮನಗರ ಜಿಲ್ಲೆಯಲ್ಲಿ ಬೆಂಗಳೂರು ಗ್ರಾಮಾಂತರ ಸಂಸದ ಡಿ.ಕೆ ಸುರೇಶ್ ಪರ ಚುನಾವಣಾ ಪ್ರಚಾರದಲ್ಲಿ ಅಭಿಮಾನಿಗಳು ಪಾಕಿಸ್ತಾನ್‌ಕಿ ಜೈ ಎಂದು ಘೋಷಣೆ ಕೂಗಿದ್ದಾರೆ ಎಂದು ಆರೋಪಿಸಿ 20 ಸೆಕೆಂಡ್‌ಗಳ ವಿಡಿಯೋವೊಂದನ್ನು ವಾಟ್ಸಾಪ್‌ ನಲ್ಲಿ ಹಂಚಿಕೊಳ್ಳಲಾಗುತ್ತಿದೆ. ಅದು ನಿಜವೇ ಎಂದು ಪರಿಶೀಲಿಸೋಣ. ಫ್ಯಾಕ್ಟ್ ಚೆಕ್ ವಿಡಿಯೋದಲ್ಲಿ ಡಿ.ಕೆ ಸುರೇಶ್‌ರವರು ಇರುವುದರಿಂದ ಇಂದಿನ ಅವರ ಚುನಾವಣಾ ಪ್ರಚಾರದ ಸುದ್ದಿಗಳನ್ನು ಹುಡುಕಿದಾಗ ಹೆಚ್.ಸಿ ಬಾಲಕೃಷ್ಣ ಎಂಬ ಫೇಸ್‌ಬುಕ್‌ ಖಾತೆಯಲ್ಲಿ ಇದೇ ವಿಡಿಯೋವನ್ನು ಲೈವ್ ಮಾಡಿರುವುದು ಕಂಡುಬಂದಿದೆ. ರಾಮನಗರ ಜಿಲ್ಲೆಯ ಮಾಗಡಿ ತಾಲ್ಲೂಕಿನ ತಿಪ್ಪಸಂದ್ರದಲ್ಲಿ…

Read More

ಕಾಂಗ್ರೆಸ್ ಅಭ್ಯರ್ಥಿ ಗೀತಾ ಮತ್ತು ಶಿವರಾಜ್‌ಕುಮಾರ್ ಅಲ್ಪಸಂಖ್ಯಾರತನ್ನು ಓಲೈಸಲು ಕುಂಕುಮ ಅಳಿಸಿದ್ದಾರೆ ಎಂಬುದು ಸುಳ್ಳು

ಗೀತಾ ಶಿವರಾಜ್‌ಕುಮಾರ್‌ರವರು ಈ ಲೋಕಸಭಾ ಚುನಾವಣೆಯಲ್ಲಿ ಶಿವಮೊಗ್ಗದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದಾರೆ. ಆದರೆ ಅವರು ಮತ್ತು ಅವರ ಪತಿ ಶಿವರಾಜ್‌ಕುಮಾರ್‌ರವರು ಅಲ್ಪಸಂಖ್ಯಾರತನ್ನು ಓಲೈಸಲು ಹಣೆಯಲ್ಲಿನ ಕುಂಕುಮ ಅಳಿಸಿದ್ದಾರೆ ಎಂದು ವಿಡಿಯೋ ಒಂದನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳಲಾಗುತ್ತಿದೆ. ಅದು ನಿಜವೇ ಎಂದು ಪರಿಶೀಲಿಸೋಣ. ಫ್ಯಾಕ್ಟ್ ಚೆಕ್ ವಿಡಿಯೋದ ಸ್ಕ್ರೀನ್‌ ಶಾಟ್‌ಗಳನ್ನು ರಿವರ್ಸ್ ಇಮೇಜ್ ಸರ್ಚ್‌ನಲ್ಲಿ ಹುಡುಕಿದಾಗ ಅದೇ ರೀತಿಯ ಹಲವು ವಿಡಿಯೋಗಳು ಯೂಟ್ಯೂಬ್‌ನಲ್ಲಿ ಕಂಡುಬಂದಿವೆ. ಗೀತಾ ಶಿವರಾಜ್‌ಕುಮಾರ್ ಮತ್ತು ಶಿವರಾಜ್‌ ಕುಮಾರ್‌ರವರು ಧರಿಸಿರುವ ಬಟ್ಟೆಗಳ ಆಧಾರದಲ್ಲಿ ಆ…

Read More

ರಂಜಾನ್ ಮಾಸದ ಪ್ರಯುಕ್ತ ಮಸೀದಿಗಳಿಗೆ ಮಾತ್ರ ಉಚಿತ ನೀರು: ಈ ಪೋಟೊ 2017ರದು ಮತ್ತು ಸಿದ್ದರಾಮಯ್ಯನವರಿಗೆ ಸಂಬಂಧಿಸಿಲ್ಲ

ಮಾನವಿ ಪಟ್ಟಣದಲ್ಲಿ ಪವಿತ್ರ ರಂಜಾನ್ ಮಾಸದ ಪ್ರಯುಕ್ತ ಉಚಿತ ನೀರು ಸರಬರಾಜು (ಮಸೀದಿಗಳಿಗೆ ಮಾತ್ರ) ಎಂಬ ಬ್ಯಾನರ್ ಹೊಂದಿರುವ ನೀರಿನ ಟ್ಯಾಂಕರ್ ಒಂದರ ಫೋಟೊವನ್ನು ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಹಂಚಿಕೊಂಡು ಸಿದ್ದರಾಮಯ್ಯನವರು ಲೋಕಸಭಾ ಚುನಾವಣೆಯಲ್ಲಿ ಓಟಿಗಾಗಿ ಮುಸ್ಲಿಮರ ಓಲೈಕೆ ಮಾಡುತ್ತಿದ್ದಾರೆ ಎಂದು ಆರೋಪಿಸಲಾಗುತ್ತಿದೆ. ಇದು ನಿಜವೇ ಎಂದು ಪರಿಶೀಲಿಸೋಣ. ಫ್ಯಾಕ್ಟ್ ಚೆಕ್ ವೈರಲ್ ಆಗುತ್ತಿರುವ ಫೋಟೊವನ್ನು ಗೂಗಲ್ ರಿವರ್ಸ್ ಇಮೇಜ್‌ನಲ್ಲಿ ಸರ್ಚ್ ಮಾಡಿದಾಗ ಈ ಫೋಟೊ 2017ರಿಂದಲೇ ಅಂತರ್ಜಾಲದಲ್ಲಿ ಇರುವುದು ಪತ್ತೆಯಾಗಿದೆ. ಗುಜ್ಜಲ ಅಂಜಿ ನಾಯಕ ಕೋಟೆಕಲ್…

Read More

ಬೆಂಗಳೂರಿನಲ್ಲಿ ನಮಾಜ್ ವೇಳೆ ಹನುಮಾನ್ ಚಾಲೀಸ ಹಾಕಿದ್ದಕ್ಕೆ ಅಂಗಡಿ ಮಾಲೀಕನ ಮೇಲೆ ಹಲ್ಲೆ ಎಂಬುದು ಸುಳ್ಳು

ಬೆಂಗಳೂರಿನ ನಗರತ್‌ ಪೇಟೆಯ ಜುಮ್ಮಾ ಮಸೀದಿ ರಸ್ತೆಯಲ್ಲಿ ನಮಾಝ್ ವೇಳೆ ಹನುಮಾನ್ ಚಾಲೀಸಾ ಹಾಕಿದ್ದಕ್ಕೆ ಮೊಬೈಲ್ ಅಂಗಡಿ ಮಾಲೀಕನಿಗೆ ಮುಸ್ಲಿಂ ಯುವಕರ ಗುಂಪು ಹಲ್ಲೆ ನಡೆಸಿದೆ ಎಂದು ಆಡಿಯೋ ಇಲ್ಲದ ಸಿಸಿಟಿವಿ ವಿಡಿಯೋವೊಂದನ್ನು ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. ಅದರಲ್ಲಿ ಅಂಗಡಿ ಮಾಲೀಕನ ಮೇಲೆ ಕೆಲ ಯುವಕರು ಹಲ್ಲೆ ಮಾಡುವುದು ದಾಖಲಾಗಿದೆ. Karnataka is bearing the brunt of Congress's Blatant Appeasement Politics. Radical Extremist elements have taken over the streets, openly terrorising…

Read More
ಸಾಲ

ಕಾಂಗ್ರೆಸ್ ಸರ್ಕಾರದ 32 ಸಾವಿರ ಕೋಟಿ ರೂ ಸಾಲವನ್ನು 32 ಲಕ್ಷ ಕೋಟಿ ರೂ ಎಂದು ತಿರುಚಿದ ಬಿಜೆಪಿ

ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ 8 ತಿಂಗಳಲ್ಲಿ ಗ್ಯಾರಂಟಿ ಯೋಜನೆಗಳಿಗಾಗಿ 32 ಲಕ್ಷ ಕೋಟಿ ಸಾಲ ಮಾಡಿದೆ ಎಂದು ಬಿಜೆಪಿ ಸರ್ವಜ್ಞನಗರ್ ಎಂಬ ಇನ್ಸ್ಟಾಗ್ರಾಮ್ ಖಾತೆಯಲ್ಲಿ ವಿಡಿಯೋ ಹಂಚಿಕೊಳ್ಳಲಾಗಿದೆ. ಇದು ನಿಜವೇ ಎಂದು ಪರಿಶೀಲಿಸೋಣ. ಫ್ಯಾಕ್ಟ್ ಚೆಕ್ ಇನ್ಸ್ಟಾಗ್ರಾಮ್ ವಿಡಿಯೋವನ್ನು ಸೂಕ್ಷ್ಮವಾಗಿ ಗಮನಿಸಿದಾಗ ಅದರಲ್ಲಿ ದಿ ಫೈಲ್ ವೆಬ್‌ಸೈಟ್‌ನ ವರದಿಯ ಸ್ಕ್ರೀನ್ ಶಾಟ್ ಬಳಸಿರುವುದು ಕಂಡುಬಂದಿದೆ. ಅದರ ಆಧಾರದಲ್ಲಿ ಹುಡುಕಿದಾಗ ದಿ ಫೈಲ್ ನಲ್ಲಿ ಫೆಬ್ರವರಿ 14ರಂದು ಪ್ರಕಟವಾದ ನಿರಂತರ ಏರಿಕೆ: ಎಂಟೇ ತಿಂಗಳಲ್ಲಿ…

Read More
ಹಿಂದೂ

Fact check: ಹಿಂದೂ ದೇವಾಲಯಗಳ ಹಣವನ್ನು ಬೇರೆ ಧರ್ಮದ ದೇವಾಲಯಗಳಿಗೆ ಬಳಸಲಾಗುತ್ತಿದೆ ಎಂಬುದು ಸುಳ್ಳು

ನನ್ನ ತೆರಿಗೆ ನನ್ನ ಹಕ್ಕು ಹೋರಾಟ ಆರಂಭವಾದ ನಂತರ ಹಾಗಾದರೆ ಹಿಂದೂಗಳು ಹಿಂದೂ ದೇವಾಲಯಕ್ಕೆ ಹಾಕುವ ಹಣ ಹಿಂದೂಗಳಿಗೆ ಸೇರಬೇಕಲ್ಲವೇ? ಭಿನ್ನ ಧರ್ಮದ ದೇವಾಲಯಗಳಿಗೆ ಏಕೆ ಕೊಡಬೇಕು? ಎಂದು ಹಲವಾರು ಜನ ಫೇಸ್‌ಬುಕ್‌ನಲ್ಲಿ ಪೋಸ್ಟ್ ಹಾಕುತ್ತಿದ್ದಾರೆ. ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಸಹ, “ಈ ಆರ್ಥಿಕ ವರ್ಷದಿಂದ ಹಿಂದುಗಳು ಕಟ್ಟಿರುವ ತೆರಿಗೆ ಹಣ ಹಿಂದೂಗಳ ಅಭಿವೃದ್ಧಿಗೆ ಮಾತ್ರ ಉಪಯೋಗ ಆಗಬೇಕು. ಹಿಂದುಗಳು ಕಟ್ಟಿದ ತೆರಿಗೆ ಹಣ ಬೇರೆ ಧರ್ಮಗಳ ಜನರಿಗೆ ಸೇರುವುದು ಹಿಂದುಗಳಿಗೆ ಆಗುವ ಅನ್ಯಾಯ. ಹಿಂದೂಗಳ…

Read More