Likith Rai

Fact Check | ಆಂಧ್ರದ ಸಿಎಂ ಚಂದ್ರಬಾಬು ನಾಯ್ಡು ಇತ್ತೀಚೆಗೆ ಬಿಜೆಪಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ ಎಂಬುದು ಸುಳ್ಳು

ಇತ್ತೀಚೆಗೆ ನಡೆದ ಎನ್‌ಡಿಎ ಸರ್ಕಾರದ ಪ್ರಮಾಣ ವಚನ ಸಮಾರಂಭದ ಸಂದರ್ಭದಲ್ಲಿ , ಬಿಜೆಪಿಯ ಮಿತ್ರಪಕ್ಷವಾದ ಟಿಡಿಪಿ ಮುಖ್ಯಸ್ಥ ಚಂದ್ರಬಾಬು ನಾಯ್ಡು ಅವರು ಅಸಮಾಧಾನಗೊಂಡಿದ್ದು, ಆಂಧ್ರಪ್ರದೇಶ ವಿಧಾನಸಭೆಯನ್ನು ಉದ್ದೇಶಿಸಿ ಕೋಪದಿಂದ ಮಾತನಾಡಿದ್ದಾರೆ ಎಂದು ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ. (ಈ  ವೀಡಿಯೊವನ್ನು ನೀವು ಇಲ್ಲಿ , ಇಲ್ಲಿ ಮತ್ತು ಇಲ್ಲಿ  ನೋಡಬಹುದಾಗಿದೆ.) ಇನ್ನು ವಿಡಿಯೋದಲ್ಲಿ ಚಂದ್ರಬಾಬು ನಾಯ್ಡು ಆಕ್ರೋಶದಿಂದ ಮಾತನಾಡುತ್ತಿರುವುದನ್ನು ಕಾಣಬಹುದಾಗಿದೆ. ಹೀಗಾಗಿ ವೈರಲ್‌ ವಿಡಿಯೋ ನಿಜವಿರಬಹುದೆಂದು ಹಲವರು ಈ ವಿಡಿಯೋವನ್ನು ತಮ್ಮ ಸಾಮಾಜಿಕ ಜಾಲತಾಣದ ಖಾತೆಗಳಲ್ಲಿ…

Read More

Fact Check| ಒಡಿಶಾದ ಸೋಫಿಯಾ ಫಿರ್ದೌಸ್ ವಿಜಯೋತ್ಸವದ ವೇಳೆ ಪಾಕ್ ಪರ ಘೋಷಣೆ ಕೂಗಿಲ್ಲ

ಇತ್ತೀಚೆಗೆ ಒಡಿಶಾದ ವಿಧಾನಸಭೆ ಚುನಾವಣ ಫಲಿತಾಂಶ ಹೊರಬಿದ್ದಿದ್ದು,  ಕಾಂಗ್ರೆಸ್‌ನ ಸೋಫಿಯಾ ಫಿರ್ದೌಸ್ ಒಡಿಶಾದ ಮೊದಲ ಮುಸ್ಲಿಂ ಮಹಿಳಾ ಶಾಸಕಿಯಾಗುವ ‌ಆಯ್ಕೆಯಾಗುವ ಮೂಲಕ ಹೊಸ ಇತಿಹಾಸ ಸೃಷ್ಟಿಸಿದ್ದಾರೆ. ಇದು ಅವರ ಅಭಿಮಾನಿಗಳ ಸಂಭ್ರಮಕ್ಕೆ ಕಾರಣವಾಗಿದ್ದು, ಇದೀಗ ಅವರ ಅಭಿಮಾನಿಗಳು ಮೆರವಣಿಗೆಯ ವೇಳೆ ಪಾಕಿಸ್ತಾನದ ಪರ ಘೋಷಣೆ ಕೂಗಿದ್ದಾರೆ. ಹಲವು ಮಕ್ಕಳು ಕೂಡ ಪಾಕ್‌ ಪರ ಘೋಷಣೆ ಕೂಗಿದ್ದಾರೆ ಎಂದು ವಿಡಿಯೋವೊಂದು ವೈರಲ್‌ ಮಾಡಲಾಗಿದೆ. ଠିକ୍ ସେ ଶୁଣନ୍ତୁ,ଏହି ଛୋଟ ପିଲାମାନେ କଣ କହୁଛନ୍ତି ଆମେ ଜିତେଇ ଥିବା ବାରବାଟି…

Read More

Fact Check | ರಿಯಾಸಿಯಲ್ಲಿ ನಡೆದ ಭಯೋತ್ಪಾದಕ ದಾಳಿಯ ಕುರಿತು ಸಂಬಂಧವಿಲ್ಲದ ಫೋಟೋಗಳ ಹಂಚಿಕೆ

“ಜಮ್ಮು ಮತ್ತು ಕಾಶ್ಮೀರದ ರಿಯಾಸಿಯಲ್ಲಿ ಭಾರತೀಯ ಸೇನೆಯ ಸೈನಿಕರನ್ನು ಹೊತ್ತೊಯ್ಯುತ್ತಿದ್ದ ಬಸ್ ಮೇಲೆ ದಾಳಿ ಮಾಡಲಾಗಿದ್ದು, ಹತ್ತು ಸೈನಿಕರು ಸಾವನ್ನಪ್ಪಿದ್ದಾರೆ” ಎಂದು ಸಾಮಾಜಿಕ ಜಾಲತಾಣದಲ್ಲಿ ಹಲವು ಫೋಟೋಗಳನ್ನು ಹಂಚಿಕೊಳ್ಳಲಾಗುತ್ತಿದೆ. ಈ ಫೋಟೋಗಳನ್ನು ನೋಡಿದ ಹಲವರು ರಿಯಾಸಿಲ್ಲಿ ನಡೆದ ದಾಳಿಯಲ್ಲಿ ಸೈನಿಕರೂ ಸಾವನ್ನಾಪ್ಪಿದ್ದಾರಾ ಎಂದು ಆಶ್ಚರ್ಯ ವ್ಯಕ್ತ ಪಡಿಸಿದ್ದಾರೆ. ಜೊತೆಗೆ ಇದೇ ಫೋಟೋವನ್ನು ಎಲ್ಲರಿಗೂ ಶೇರ್‌ ಮಾಡಿ ಎಂಬ ಬರಹಗಳು ಕೂಡ ಕಂಡು ಬಂದಿದೆ. #BREAKING: Massive News⚠️ A major attack on a bus carrying…

Read More

Fact Check | ಲೋಕಸಭೆ ಚುನಾವಣೆಯಲ್ಲಿ 19,731 ಮತಗಳಿಂದ ಹಲವು ನಾಯಕರು ಸೋತಿದ್ದಾರೆ ಎಂಬುದು ಸುಳ್ಳು

2024 ರ ಲೋಕಸಭಾ ಚುನಾವಣೆಯ ಫಲಿತಾಂಶಗಳ ಘೋಷಣೆಯ ನಂತರ, ನವನೀತ್ ರಾಣಾ, ಮಾಧವಿ ಲತಾ, ಮತ್ತು ಕನ್ಹಯ್ಯಾ ಕುಮಾರ್ ಸೇರಿದಂತೆ ಹಲವಾರು ಪ್ರಮುಖ ನಾಯಕರ ಸೋಲಿನ ಬಗೆಗಿನ ಪೇಪರ್‌ ಕಟಿಂಗ್‌ವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ. ಈ ಎಲ್ಲಾ ನಾಯಕರು 19,731 ಮತಗಳ ಅಂತರದಿಂದ ಸೋತಿದ್ದಾರೆ ಎಂದು ಈ ಪೇಪರ್‌ ಕಟಿಂಗ್‌ನಲ್ಲಿ ಕಂಡು ಬಂದಿದೆ. ಅದರಲ್ಲೂ ಈ ಎಲ್ಲಾ ನಾಯಕರು ಒಂದೇ ಅಂತರದಲ್ಲಿ ಸೋತಿದ್ದಾರೆ ಎಂದು ಸಾಕಷ್ಟು ಜನ ಅಚ್ಚರಿಯನ್ನು ಕೂಡ ವ್ಯಕ್ತ ಪಡಿಸಿದ್ದಾರೆ. EVM पर…

Read More

Fact Check | ದೇಶದ ಸಂಪತ್ತಿನಲ್ಲಿ ಮುಸ್ಲಿಮರು ಮೊದಲ ಹಕ್ಕುದಾರರಾಗಿದ್ದಾರೆಂದು ಯೋಗಿ ಆದಿತ್ಯನಾಥ್ ಹೇಳಿಲ್ಲ

“ದೇಶದ ಸಂಪತ್ತಿನಲ್ಲಿ ಮುಸ್ಲಿಂ ಸಮುದಾಯಕ್ಕೆ ಮೊದಲ ಆದ್ಯತೆ ನೀಡಲಾಗಿ ಮತ್ತು ಅವರೇ ಮೊದಲ ಹಕ್ಕುದಾರರಾಗಿದ್ದಾರೆ ಎಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಅವರು ಹೇಳಿದ್ದಾರೆ” ಎಂಬ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗುತ್ತಿದೆ. ಈ ವಿಡಿಯೋ ನೋಡಿದ ಬಹುತೇಕರು ಇದು ನಿಜವಿರಬಹುದು ಎಂದು ವ್ಯಾಪಕವಾಗಿ ಹಂಣಚಿಕೊಳ್ಳುತ್ತಿದ್ದಾರೆ. उत्तर प्रदेश की जनता ने योगी जी के सुर ही बदल डाले… Indian Muslims pic.twitter.com/LtwB483blo — 𝐍𝐚𝐮𝐬𝐡𝐚𝐝 (@NaushadVibe) June 10, 2024…

Read More

Fact Check | ರಾಷ್ಟ್ರಪತಿ ಭವನದಲ್ಲಿ ಚಿರತೆ ಕಾಣಿಸಿಕೊಂಡಿದೆ ಎಂಬುದು ಸುಳ್ಳು

ರಾಷ್ಟ್ರಪತಿ ಭವನದಲ್ಲಿ ಮೂರನೇ ಅವಧಿಗೆ ಪ್ರಧಾನಿಯಾಗಿ ನರೇಂದ್ರ ಮೋದಿ ಪ್ರಮಾಣ ವಚನ ಸ್ವೀಕಾರ ಸಮಾರಂಭದ ವೇಳೆ  ನಿಗೂಢ ಪ್ರಾಣಿಯೊಂದು ಕಂಡು ಬಂದಿದೆ ಎಂದು ಸಾಮಾಜಿಕ ಜಾಲತಾಣದಲ್ಲಿ ವಿಡಿಯೋವೊಂದು ವೈರಲ್‌ ಆಗುತ್ತಿದೆ. ಈ ವಿಡಿಯೋ ನೋಡಿದ ಬಹುತೇಕರು ಇದು ಚಿರತೆ ಇರಬಹುದು ಎಂದು ಊಹಿಸಿ ವ್ಯಾಪಕವಾಗಿ ಹಂಚಿಕೊಂಡಿದ್ದಾರೆ. ಆದರೆ ಹಲವರು ರಾಷ್ಟ್ರಪತಿ ಭವನದಲ್ಲಿ ಕಾಡು ಪ್ರಾಣಿಗಳು ಕಂಡು ಬರುವುದು ಅನುಮಾನ ಇದು ಯಾವುದೋ ಸಾಕುಪ್ರಾಣಿ ಇರಬಹುದು ಎಂದು ಹಂಚಿಕೊಳ್ಳುತ್ತಿದ್ದಾರೆ. An animal was seen strolling back in…

Read More

Fact Check | ಗೂಳಿಹಟ್ಟಿ ಶೇಖರ್‌ ತಮ್ಮ ಆರೋಪ ನಿರಾಧಾರ ಎಂದು ಒಪ್ಪಿಕೊಂಡಿದ್ದಾರೆ ಎಂಬುದು ಸುಳ್ಳು!

ಸಾಮಾಜಿಕ ಜಾಲತಾಣದಲ್ಲಿ ಗೂಳಿಹಟ್ಟಿ ಶೇಖರ್‌ ಅವರು ಕೋಟ ಶ್ರೀನಿವಾಸ್‌ ಪೂಜಾರಿಯವರ ಕ್ಷಮೆ ಕೇಳಿದ್ದಾರೆ ಮತ್ತು  ಭೋವಿ ಸಮಾಜದ ಹಣವನ್ನು ಕೆಲವರು ದುರ್ಬಳಕೆ ಮಾಡಿಕೊಂಡಿದ್ದಾರೆ ಎಂದು ತಾವು ಮಾಡಿದ ಆರೋಪ ನಿರಾಧರವೆಂದು ಒಪ್ಪಿಕೊಂಡಿದ್ದಾರೆ ಎಂಬ ರೀತಿಯಲ್ಲಿ ಬಿಂಬಿಸಿದ ಸುದ್ದಿಯೊಂದು ವೈರಲ್‌ ಆಗುತ್ತಿದೆ. ಇನ್ನು ಕೆಲವೊಂದು ಪೋಸ್ಟ್‌ಗಳಲ್ಲಿ ಗೂಳಿಹಟ್ಟಿ ಶೇಖರ್‌ ಅವರು ಸ್ವತಃ ಕ್ಷಮೆ ಕೇಳಿರುವ ಆಡಿಯೋ ಕೂಡ ವೈರಲ್‌ ಆಗುತ್ತಿದೆ. ಹಾಗಾಗಿ ಇದನ್ನು ನಿಜವೆಂದು ನಂಬಿ ಹಲವರು ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಹಂಚಿಕೊಳ್ಳುತ್ತಿದ್ದಾರೆ. ಇದರ ಜೊತೆಗೆ ಸಾಮಾಜಿಕ ಜಾಲತಾಣದಲ್ಲಿ…

Read More

Fact Check | ಮಕ್ಕಳ ಮುಂದೆಯೇ ಹಿಂದೂ ವ್ಯಕ್ತಿಯನ್ನು ಮುಸ್ಲಿಂ ಕೊಂದಿದ್ದಾನೆ ಎಂಬುದು ಸುಳ್ಳು

ಸಿಸಿಟಿವಿಯಲ್ಲಿ ವ್ಯಕ್ತಿಯೊಬ್ಬನನ್ನು ಹಣೆಗೆ ಶೂಟ್ ಮಾಡಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಮೀರತ್‌ನಲ್ಲಿ ಮುಸ್ಲಿಂನೊಬ್ಬ ತನ್ನ ಮಕ್ಕಳ ಎದುರೇ ಹಿಂದೂ ವ್ಯಕ್ತಿಯನ್ನು ಕೊಂದಿದ್ದಾನೆ ಎಂಬ ಹೇಳಿಕೆಯೊಂದಿಗೆ ಈ ವಿಡಿಯೋವನ್ನು ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. ಹೀಗಾಗಿ ಇದು ಕೋಮು ಬಣ್ಣವನ್ನು ಪಡೆದುಕೊಂಡಿದ್ದು ಹಲವರು ಕೋಮು ದ್ವೇಷ ಹರಡುವ ರೀತಿಯಲ್ಲಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳುತ್ತಿದ್ದಾರೆ. ಆದರೆ ವಾಸ್ತವದಲ್ಲಿ ಘಟನೆಗೆ ಮೂಲ ಕಾರಣದ ಕುರಿತು ವೈರಲ್‌ ಪೋಸ್ಟ್‌ನಲ್ಲಿ ಬರೆಯಲಾಗಿಲ್ಲ. ಮತ್ತು ಹತನಾದವನ ಹಿನ್ನೆಲೆ ಏನು ಎಂಬುದು ಕೂಡ ಎಲ್ಲಿಯೂ ಉಲ್ಲೇಖವಾಗದೆ ಇರುವುದು…

Read More

Fact Check | ಉತ್ತರ ಪ್ರದೇಶದಲ್ಲಿ 2 ಮಕ್ಕಳ ಮಿತಿ ಕಾನೂನು ಜಾರಿಗೊಳಿಸಲಾಗಿದೆ ಎಂಬುದು ಸುಳ್ಳು.!

ಸಾಮಾಜಿಕ ಜಾಲತಾಣದಲ್ಲಿ ” ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಅವರ ಜನಸಂಖ್ಯಾ ನಿಯಂತ್ರಣ ಕಾಯ್ದೆಯನ್ನು ಜಾರಿಗೆ ತಂದಿದ್ದಾರೆ. ಈ ಕಾಯ್ದೆಯಲ್ಲಿ ದಂಪತಿಗಳು ಎರಡಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದುವಂತಿಲ್ಲ. ಒಂದು ವೇಳೆ ಹಾಗೆ ಎರಡಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದೇ ಆದಲ್ಲಿ ಆ ಕುಟುಂಬಕ್ಕೆ ಯಾವುದೇ ರೀತಿಯಾದ ಸರ್ಕಾರಿ ಯೋಜನೆಗಳು ಸಿಗುವುದಿಲ್ಲ. ಆ ಕುಟುಂಬದಿಂದ ಭವಿಷ್ಯದಲ್ಲಿ ಯಾರಾದರು ಚುನಾವಣೆಗೆ ಸ್ಪರ್ಧಿಸಲು ಇಚ್ಚಿಸಿದರು ಅದು ಸಾಧ್ಯವಾಗುದಿಲ್ಲ.” ಎಂಬ ಪೋಸ್ಟ್‌ ಅನ್ನು ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. CM Yogi on…

Read More

Fact Check | ಪ್ಯಾಲೆಸ್ತೀನಿಯರು ಭಾರತದ ಧ್ವಜಕ್ಕೆ ಅವಮಾನ ಮಾಡಿದ್ದಾರೆ ಎಂಬುದು ಸುಳ್ಳು

ಸಾಮಾಜಿಕ ಜಾಲತಾಣದಲ್ಲಿ ಭಾರತ, ಇಸ್ರೇಲ್ ಮತ್ತು ಅಮೆರಿಕದ ಧ್ವಜಗಳಿಗೆ ಪುರುಷರ ಗುಂಪೊಂದು ಅವಮಾನ ಮಾಡುತ್ತಿರುವು ಮತ್ತು ಆ ಧ್ವಜಗಳನ್ನು ಸುಡುವುದನ್ನು ತೋರಿಸುವ ಫೋಟೋವನ್ನು ವೇದಿಕೆಗಳಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. ಈ ಫೋಟೋವನ್ನು ಹಂಚಿಕೊಂಡ ಹಲವರು ಪ್ಯಾಲೆಸ್ತೀನಿಯರು ಭಾರತದ ರಾಷ್ಟ್ರಧ್ವಜವನ್ನು ಅವಮಾನಿಸುತ್ತಿದ್ದಾರೆ. ಆದರೆ ಕೆಲ ಭಾರತೀಯರು ಮಾತ್ರ ಇನ್ನೂ ಕೂಡ ಪ್ಯಾಲೆಸ್ತೀನಿಯರನ್ನು ಬೆಂಬಲಿಸುತ್ತಿದ್ದಾರೆ ಎಂದು ಈ ಫೋಟೋವನ್ನು ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. Oo shitty ass , if India supports Israel fr front then u Muslims will…

Read More