Fact Check | ಆಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣವಾದರೆ ಆತ್ಮಹತ್ಯೆ ಮಾಡಿಕೊಳ್ಳುತ್ತೇನೆಂದು ಕಪಿಲ್ ಸಿಬಲ್ ಹೇಳಿಲ್ಲ
“ಸುಪ್ರೀಂ ಕೋರ್ಟ್ ವಕೀಲ ಹಾಗೂ ಕಾಂಗ್ರೆಸ್ನ ಮಾಜಿ ನಾಯಕ ಕಪಿಲ್ ಸಿಬಲ್ ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣವಾದರೆ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಹೇಳಿಕೊಂಡಿದ್ದರು” ಎಂಬ ಪೋಸ್ಟ್ವೊಂದನ್ನು ಕಪಿಲ್ ಸಿಬಲ್ ಹೆಸರಿನಲ್ಲಿ ಮಾಡಲಾದ ಟ್ವಿಟ್ವೊಂದರ ಸ್ಕ್ರೀನ್ ಶಾಟ್ನಲ್ಲಿ ವ್ಯಾಪವಾಗಿ ಹಂಚಿಕೊಳ್ಳಲಾಗುತ್ತಿದೆ. ಇದೇ ಸ್ಕ್ರೀನ್ ಶಾಟ್ ಅನ್ನು ತಮ್ಮ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿರುವ ನಿವೃತ್ತ ಮೇಜರ್ ಜನರಲ್ ಹರ್ಷಾ ಕಾಕರ್ ಅವರು ವಾಟ್ಸ್ಆಪ್ನಲ್ಲಿ ಬಂದಿದ್ದು ನನ್ನಿಂದ ಯಾವುದೇ ಪ್ರತಿಕ್ರಿಯೆ ಇಲ್ಲ ಎಂದು ಬರೆದುಕೊಂಡಿದ್ದಾರೆ. ಇದನ್ನೇ ರಿ ಟ್ವೀಟ್ ಮಾಡಿರುವ ಸಾಕಷ್ಟು ಮಂದಿ ಕಾಂಗ್ರೆಸ್ನ…