ಇಸ್ರೇಲ್ ಪ್ಯಾಲೆಸ್ಟೈನ್ ಯುದ್ಧ ನಿಲ್ಲಿಸಲು ಇರಾನ್ ಮೋದಿಯವರ ಸಹಾಯ ಕೇಳಿದೆ ಎಂಬುದು ಸುಳ್ಳು

ಇಸ್ರೇಲ್ ಹಮಾಸ್‌ ಯುದ್ಧ ಪ್ರಾರಂಭವಾದ ದಿನಗಳಿಂದ ಭಾರತೀಯ ಮಾಧ್ಯಮಗಳು ಪ್ರಧಾನಿ ನರೇಂದ್ರ ಮೋದಿಯವರ ಸಹಾಯವನ್ನು ಇಸ್ರೇಲ್ ಬಯಸಿದೆ ಅಥವಾ ಫ್ಯಾಲಸ್ಟೈನ್ ಬಯಸುತ್ತಿದೆ ಎಂದು ಹೇಳುತ್ತಲೇ ಬರುತ್ತಿವೆ. ಜಗತ್ತಿನ ದೊಡ್ಡಣ್ಣ ಅಮೇರಿಕ ನರೇಂದ್ರ ಮೋದಿಯವರ ಸಹಾಯ ಬಯಸುತ್ತಿದೆ ಎಂಬೆಲ್ಲಾ ಸುದ್ದಿಗಳು ಹರಿದಾಡುತ್ತಿವೆ. ಇತ್ತೀಚೆಗೆ, ಅಂದು ಕಾಶ್ಮೀರದ ಸಮಸ್ಯೆ ಬಗೆಹರಿಸಲು ವಿಶ್ವಸಂಸ್ಥೆ ಸಹಾಯ ಕೋರಿದ್ದ ಜವಾಹರಲಾಲ್ ನೆಹರು ಇಂದು ಇಸ್ರೇಲ್ ಫ್ಯಾಲೆಸ್ಟೈನ್ ಯುದ್ಧ ನಿಲ್ಲಿಸಲು ಭಾರತದ ಪ್ರಧಾನಿ ಮೋದಿಯ ಸಹಾಯ ಕೇಳಿದ ಇರಾನ್ ದೇಶ. ಎಂಬ ಪೋಸ್ಟರ್‌ ಒಂದು ಹಲವು…

Read More

Fact Check : ಮಾಜಿ ಪ್ರಧಾನಿ ಮನಮೋಹನ್‌ ಸಿಂಗ್‌ ಹೆಸರಿನಲ್ಲಿ ವೈರಲ್‌ ಆಗುತ್ತಿದೆ ನಕಲಿ ಟ್ವೀಟ್‌..!

“ಭಾರತೀಯರಿಗೆ ಮಂದಿರಗಳು ಬೇಕಾಗಿವೆ. ಕಾಂಗ್ರೆಸ್‌ ಐಐಟಿ, ಐಐಎಂ, ಕಾಲೇಜುಗಳು, ಆಸ್ಪತ್ರೆಗಳು, ವಿಮಾನ ನಿಲ್ದಾಣಗಳು, ರೈಲ್ವೆ, ಅಣೆಕಟ್ಟುಗಳು, ಇಸ್ರೋದಂತಹ ಸಂಸ್ಥೆಗಳನ್ನು 70 ವರ್ಷಗಳಿಂದ ನಿರ್ಮಿಸುತ್ತಲೇ ಇತ್ತು. ಅದನ್ನು ಇಂದು ಮಾರಾಟ ಮಾಡಬೇಕಾಗಿದೆ” ಎಂದು ಮನಮೋಹನ್‌ ಸಿಂಗ್‌ ಟ್ವೀಟ್ ಮಾಡಿದ್ದಾರೆ ಎಂದು ಪೋಸ್ಟ್‌ ಒಂದನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳಲಾಗುತ್ತಿದೆ. ಇದರ ಕುರಿತು ಸಾಕಷ್ಟು ಮಂದಿ ಸತ್ಯ ಏನು ಎಂದು ಅವಲೋಕನ ಮಾಡದೆ ವ್ಯಾಪಕವಾಗಿ ಹಂಚಿಕೊಳ್ಳುತ್ತಿದ್ದಾರೆ. ಹೀಗಾಗಿ ಈ ಪೋಸ್ಟ್‌ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗುವುದರ ಜೊತೆಗೆ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ….

Read More

Fact Check : ಬಿಜೆಪಿ ಅಭ್ಯರ್ಥಿಗೆ ಮತ ಹಾಕಬೇಡಿ ಎಂದು ಮಧ್ಯಪ್ರದೇಶದ ಜನರಿಗೆ ಅಮಿತ್‌ ಶಾ ಹೇಳಿಲ್ಲ.!

ಮುಂಬರುವ ಮಧ್ಯಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ದೇಪಾಲ್ಪುರ್‌ ಬಿಜೆಪಿ ಅಭ್ಯರ್ಥಿ ಮನೋಜ್‌ ನಿರ್ಭಯ್‌ ಸಿಂಗ್‌ಗೆ ಮತ ಹಾಕಬೇಡಿ ಎಂದು ಅಮಿತ್‌ ಶಾ ಹೇಳಿಕೆ ನೀಡಿದ್ದಾರೆ ಎಂಬ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗುತ್ತಿದೆ. ಈ ಪೋಸ್ಟ್‌ ಅನ್ನು ಸಾಕಷ್ಟು ಮಂದಿ ತಮ್ಮ ಸಾಮಾಜಿಕ ಜಾಲತಾಣ ಖಾತೆಯಲ್ಲಿ ಹಂಚಿಕೊಳ್ಳುತ್ತಿದ್ದಾರೆ ಈ ವಿಡಿಯೋ ಕುರಿತು ಸತ್ಯ ಶೋಧನೆಯನ್ನ ನಡೆಸಿದಾಗ ಈ ವಿಡಿಯೋ ಎಡಿಟೆಡ್‌ ಎಂದು ತಿಳಿದು ಬಂದಿದೆ. ಇದೇ ನವಂಬರ್‌ 11 ರಂದು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರು…

Read More
ಬೆಂಕಿಯ

400 ಸಂತರು ಬೆಂಕಿಯ ಮೇಲೆ ಮಲಗಿದರೂ ಏನೂ ಆಗಲಿಲ್ಲವೆಂದು ಸಾಕ್ಷ್ಯಚಿತ್ರದ ವಿಡಿಯೋ ಹಂಚಿಕೆ

“ಉತ್ತರಖಂಡದ ಹರಿದ್ವಾರದಲ್ಲಿ 2021ರ ಕುಂಭಮೇಳದಲ್ಲಿ, ಕುಂಭ ಸ್ನಾನದ ಮೊದಲು ಸುಮಾರು 400 ಸಾಧುಗಳು ತಮ್ಮ ದೇಹವನ್ನು ಅಗ್ನಿ ದೇವಿಗೆ ಅರ್ಪಿಸುವುದನ್ನು ಬಿಬಿಸಿ ತಂಡವು ನೋಡಿದೆ.  ಈ ಸಂದರ್ಭದಲ್ಲಿ ಅವರು ವಿಡಿಯೋ ತೆಗೆದಿದ್ದಾರೆ.  ತೀವ್ರತೆರೆನಾದ ಬೆಂಕಿಯ ಜ್ವಾಲೆಯಿಂದ BBC ಕ್ಯಾಮರಾ ಸಿಬ್ಬಂದಿ  ದೂರ ಸರಿಯಬೇಕಾಯಿತು. ಆದರೆ ಉರಿಯುತ್ತಿರುವ ದಿಮ್ಮಿಗಳ ಮೇಲೆ ಮಲಗಿದ್ದ ಸಂತರಿಗೆ ಏನೂ ಆಗಲಿಲ್ಲ!. ಅಲ್ಲಿ ಬೆಂಕಿ ನಂದಿಸುವ ರಾಸಾಯನಿಕಗಳು ಸಹ ಇರಲಿಲ್ಲ. ಈ ಸಂತರನ್ನು ಸಿದ್ಧ ಸಂತರೆಂದು ಕರೆಯುತ್ತಾರೆ.  ನಂತರ BBC ತಂಡ ಅದನ್ನು ತಮ್ಮ…

Read More

Fact Check | ಪ್ಯಾಲೆಸ್ಟೈನ್‌ ಪರ ಪ್ರತಿಭಟನೆಯಲ್ಲಿ ಕತ್ತೆ ಬೆನ್ನಿನ ಮೇಲೆ ಇಸ್ರೇಲ್‌ ಧ್ವಜ ಬಿಡಿಸಿ ಕೊಲ್ಲಲಾಗಿದೆ ಎಂಬುದು ಸುಳ್ಳು

ಪ್ಯಾಲೆಸ್ಟೈನ್‌ ಪರವಾಗಿ ನಡೆದ ಪ್ರತಿಭಟನೆಯಲ್ಲಿ ಪ್ರತಿಭಟನಾಕಾರರು ಕತ್ತೆಯ ಬೆನ್ನಿನ ಮೇಲೆ ಇಸ್ರೇಲ್‌ ಧ್ವಜವನ್ನು ಬಿಡಿಸಿ ನಂತರ ಆ ಕತ್ತೆಗೆ ಬೆಂಕಿ ಹಚ್ಚಿ ಕೊಂದಿದ್ದಾರೆ ಎಂಬ ಫೋಟೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗುತ್ತಿದೆ. ಈ ಫೋಟೋವನ್ನು ಹಂಚಿಕೊಳ್ಳುವ ಮೂಲಕ ಪ್ಯಾಲೆಸ್ಟೈನ್‌ ಜನರನ್ನು ಕ್ರೂರಿಗಳು ಎಂದು ಬಿಂಬಿಸಲಾಗುತ್ತಿದೆ. ಇದೇ ಫೋಟೋವನ್ನು ಸಾವಿರಾರು ಮಂದಿ ಸಾಮಾಜಿಕ ಜಾಲತಾಣದಲ್ಲಿ ಶೇರ್‌ ಮಾಡುತ್ತಿದ್ದಾರೆ. ಅದರಲ್ಲೂ ಇಸ್ರೇಲ್‌ ಅನ್ನು ಬೆಂಬಲಿಸುವ ಸಾಕಷ್ಟು ಮಂದಿ ಈ ವಿಚಾರದ ಕುರಿತು ಅವಲೋಕನ ನಡೆಸದೇ ಈ ಫೋಟೋಗಳನ್ನು ಶೇರ್‌ ಮಾಡುತ್ತಿದ್ದಾರೆ….

Read More

ಜವಹರಲಾಲ್ ನೆಹರೂರವರ ಕುರಿತ ಸರಣಿ ಸುಳ್ಳುಗಳು

ದೇಶದ ಮೊದಲ ಪ್ರಧಾನಿ ಪಂಡಿತ್ ಜವಹರಲಾಲ್ ನೆಹರೂರವರು ಭಾರತದ ಸ್ವತಂತ್ರ್ಯ ಚಳುವಳಿಯ ಮುಂಚೂಣಿ ನಾಯಕರಾಗಿ, ದಕ್ಷ ಆಡಳಿತಗಾರರಾಗಿ, ದೂರ ದೃಷ್ಟಿಯ ರಾಜಕಾರಣಿಯಾಗಿ ಮತ್ತು ಬರಹಗಾರರಾಗಿ ಹೆಸರುವಾಸಿಯಾದವರು. ಆದರೆ ಕಳೆದೊಂದು ದಶಕಗಳಿಂದ ಬೆಜೆಪಿಗರು ಮತ್ತು ಬಲಪಂಥಿಯರು ಸೇರಿ ನೆಹರೂರವರ ಕುರಿತು ನಿರಂತರವಾಗಿ ಸುಳ್ಳು ಸುದ್ದಿಗಳನ್ನು ಹರಿಬಿಡುತ್ತಿದ್ದಾರೆ. ಈ ಮೂಲಕ ನೆಹರೂರವರ ಕೊಡುಗೆಗಳನ್ನು ಇತಿಹಾಸದಿಂದಲೇ ಅಳಿಸುವ ಹುನ್ನಾರ ನಡೆಯುತ್ತಿದೆ. ಆದರೆ ಹರಿದಾಡುತ್ತಿರುವ ಸುದ್ದಿಗಳ ಸುಳ್ಳೇನು? ಸತ್ಯವೇನೆಂದು ತಿಳಿಯೋಣ ಬನ್ನಿ. ಸುಳ್ಳು ೧: ನೆಹರೂರವರ ತಾಯಿ ಮುಸ್ಲಿಂ. ಅವರ ಹೆಸರು ಥುಸ್ಸು…

Read More

Fact Check | ತಾಯಿಯೊಬ್ಬಳು ತನ್ನ ಧ್ವಂಸಗೊಂಡ ಮನೆಯಿಂದ ಮಗುವಿನ ಆಟಿಕೆ ತರುತ್ತಿರುವ ಫೋಟೋ ಗಾಜಾದಲ್ಲ!

ಇಸ್ರೆಲ್‌ ಹಮಾಸ್‌ ನಡುವಿನ ಯುದ್ಧಕ್ಕೆ ಸಂಬಂಧ ಪಟ್ಟಂತೆ ಹಲವು ದಿನಗಳಿಂದ ಸಾಮಾಜಿಕ ಜಾಲತಾಣದಲ್ಲಿ ಫೋಟೋವೊಂದು ವೈರಲ್‌ ಆಗುತ್ತಿದೆ. ಆ ಫೋಟೋವನ್ನು ಹಂಚಿಕೊಂಡಿರುವ ಸಾಕಷ್ಟು ಮಂದಿ ಹಮಾಸ್‌ ಜನರ ಶಕ್ತಿ ಕುಗ್ಗುವುದಿಲ್ಲ ಎಂದು ತಲೆ ಬರಹವನ್ನು ನೀಡಿ ವ್ಯಾಪಕವಾಗಿ ಹಂಚಿಕೊಳ್ಳುತ್ತಿದ್ದಾರೆ. ಇನ್ನೊಂದಷ್ಟು ಮಂದಿ ಈ ಫೋಟೋಗೆ ವಿವಿಧ ರೀತಿಯ ಸುಳ್ಳು ಕತೆಗಳನ್ನು ಕಟ್ಟಿದ್ದಾರೆ. ಅದರಲ್ಲಿ ಪ್ರಮುಖವಾಗಿ  “ಈ ಛಾಯಾಚಿತ್ರದಲ್ಲಿ ಪ್ಯಾಲೇಸ್ಟಿನಿಯನ್ ತಾಯಿಯೊಬ್ಬಳು ಗಾಜಾದಲ್ಲಿರುವ ಧ್ವಂಸವಾದ ಕಟ್ಟಡದಲ್ಲಿರುವ ತಮ್ಮ ಮನೆಯಿಂದ ತನ್ನ ಮಗುವಿನ ಆಟಿಕೆಯ ಕಾರನ್ನು ವಾಪಸ್ಸು ತರುತ್ತಿರುವುದನ್ನ ನೋಡಬಹುದಾಗಿದೆ.”…

Read More
ನೆಹರೂ

ಜವಹರಲಾಲ್ ನೆಹರೂರವರು ಲಂಡನ್ ಪೌರತ್ವವನ್ನು ತೆಗೆದುಕೊಂಡಿದ್ದರು ಎಂಬುದು ಸುಳ್ಳು

ನೆನ್ನೆಯಷ್ಟೆ ದೇಶದಾದ್ಯಂತ ಮಕ್ಕಳ ದಿನಾಚಾರಣೆಯನ್ನು ಸಂಭ್ರಮ ಸಡಗರದಿಂದ ಆಚರಿಸಲಾಗಿದೆ. ದೇಶದ ಮೊದಲ ಪ್ರಧಾನಿ ಜವಹರಲಾಲ್ ನೆಹರೂರವರು ಸ್ವತಂತ್ರ್ಯ ಭಾರತಕ್ಕೆ ನೀಡಿದ ಕೊಡುಗೆಗಳನ್ನು, ಅವರ ದೂರದೃಷ್ಟಿಯ ಯೋಜನೆಗಳನ್ನು ಜನ ನೆನೆದುಕೊಳ್ಳುತ್ತಿದ್ದಾರೆ. ಆದರೆ ಕೆಲವು ನೆಹರೂ ವಿರೋಧಿಗಳು ಅವರ ಮೇಲೆ ನಿರಂತರವಾಗಿ ಸುಳ್ಳು ಸುದ್ದಿಗಳನ್ನು ಹಬ್ಬಿಸುತ್ತಾ, ತಮ್ಮ ರಾಜಕೀಯ ಲಾಭಕ್ಕಾಗಿ ನೆಹರೂ ಮತ್ತು ಅವರ ಮನೆತನದವರ ಮೇಲೆ ಭಾರತೀಯರಲ್ಲಿ ದ್ವೇಷ ಮೂಡಿಸುವ ಪ್ರಯತ್ನ ಮಾಡುತ್ತಿದ್ದಾರೆ. ಮತ್ತು ಈಗಾಗಲೇ ನೆಹರುರವರ ಕುರಿತ ಇಂತಹ ಹಲವು ಸುಳ್ಳು ಸುದ್ದಿಗಳನ್ನು ಕನ್ನಡ ಫ್ಯಾಕ್ಟ್‌ಚೆಕ್‌ ಬಯಲುಗೊಳಿಸಿದೆ….

Read More

ತಾಳಿ, ಕಾಲುಂಗುರ, ಹಿಜಾಬ್ ಧರಿಸಿ ಪರೀಕ್ಷೆ ಬರೆಯುವಂತಿಲ್ಲ ವದಂತಿ: ವಾಸ್ತವ ಇಲ್ಲಿದೆ

ಎಫ್‌ಡಿಎ ಪರೀಕ್ಷೆ, ವಿವಿಧ ನಿಗಮ ಮಂಡಳಿಗಳ ಪರೀಕ್ಷೆಗೆ ಮುಸ್ಲಿಂ ಹೆಣ್ಣು ಮಕ್ಕಳು ಹಿಜಾಬ್ ಧರಿಸಿ ಪರೀಕ್ಷೆ ಬರೆಯಬಹುದು, ಆದರೆ ಹಿಂದೂ ಹೆಣ್ಣು ಮಕ್ಕಳು ತಾಳಿ, ಕಾಲುಂಗುರ ಧರಿಸಿ ಪರೀಕ್ಷೆ ಬರೆಯುವಂತಿಲ್ಲ. ಇದು ಹಿಂದೂ ವಿರೋಧಿ ನೀತಿ ಎಂದು ಹಲವರು ರಾಜ್ಯ ಕಾಂಗ್ರೆಸ್ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಈ ಕುರಿತು ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳಲಾಗುತ್ತಿದೆ. ಇದು ನಿಜವೇ ಎಂದು ಪರಿಶೀಲಿಸಿದಾಗ, ಪರೀಕ್ಷಾ ನಿಯಮಾವಳಿಗಳು ಹಲವಾರು ಬಾರಿ ಬದಲಾಗಿರುವುದು ಕಂಡುಬಂದಿದೆ. ಅಕ್ಟೋಬರ್ 28 ರಂದು ಕಲಬುರಗಿ ಮತ್ತು ಯಾದಗಿರಿ…

Read More

Fact Check : “ಗೋವು ನಮ್ಮ ತಾಯಿಯಲ್ಲ” ಎಂದು ದಿಗ್ವಿಜಯ್ ಸಿಂಗ್‌ ಹೇಳಿಲ್ಲ

ಮಧ್ಯಪ್ರದೇಶದಲ್ಲಿ ವಿಧಾನಸಭೆ ಚುನಾವಣೆಗೆ ದಿನಗಣನೆ ಆರಂಭವಾಗಿದೆ. ಇದರ ಮಧ್ಯೆ ಇದೀಗ ಅಲ್ಲಿನ ಆಡಳಿತರೂಢ  ಸರ್ಕಾರದ ವಿರುದ್ಧ ಮತ್ತು ಅಲ್ಲಿನ ವಿರೋಧ ಪಕ್ಷದ ಕುರಿತು ವ್ಯಾಪಕವಾಗಿ ಸುಳ್ಳು ಸುದ್ದಿಗಳು ಹಬ್ಬೋದಕ್ಕೆ ಪ್ರಾರಂಭವಾಗಿದೆ ಅದರಲ್ಲೂ ಪ್ರಮುಖವಾಗಿ ಮಧ್ಯಪ್ರದೇಶದ ಮಾಜಿ ಸಿಎಂ ದಿಗ್ವಿಜಯ್‌ ಸಿಂಗ್‌ ಅವರ ವಿರುದ್ಧ ಹಲವು ಸುಳ್ಳು ಸುದ್ದಿಗಳು ವ್ಯಾಪಕವಾಗಿ ಹಬ್ಬುತ್ತಿದೆ.  ಇದೇ ರೀತಿಯಾಗಿ “ಗೋವು ನಮ್ಮ ತಾಯಿಯಲ್ಲ. ಅದರ ಮಾಂಸವನ್ನು ತಿನ್ನುವುದರಲ್ಲಿ ತಪ್ಪೇನಿಲ್ಲ” ಎಂಬ ವಿಡಿಯೋ ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ ದಿಗ್ವಿಜಯ್ ಸಿಂಗ್‌ ಹೇಳಿದ್ದಾರೆ ಎಂಬ ಸುದ್ದಿಯೊಂದಿಗೆ…

Read More