ಆಕಸ್ಮಿಕವಾಗಿ ನಾನು ಹಿಂದೂ! ಎಂದು ಜವಹರಲಾಲ್ ನೆಹರುರವರು ಹೇಳಿಲ್ಲ

ಕಳೆದ ಒಂದು ದಶಕಗಳಿಂದ ದೇಶದ ಮೊದಲ ಪ್ರಧಾನಿ ಜವಹರಲಾಲ್ ನೆಹರುರವರ ಕುರಿತು ಇನ್ನಿಲ್ಲದ ಆರೋಪಗಳು ಕೇಳಿಬರುತ್ತಿವೆ. ಪ್ರಧಾನಿ ನರೇಂದ್ರ ಮೋದಿಯವರು ಸೇರಿದಂತೆ ಬಿಜೆಪಿ ಬೆಂಬಲಿಗರು, ಬಲಪಂಥೀಯರು ದೇಶಕ್ಕೆ ನೆಹರೂರವರ ಕೊಡುಗೆಗಳು ಶೂನ್ಯ ಎನ್ನುವಂತೆ ಬಿಂಬಿಸುತ್ತಿದ್ದಾರೆ . ಇನ್ನೂ ನೆಹರುರವರ ಮೂಲ ಧರ್ಮ ಇಸ್ಲಾಂ, ಆತನೊಬ್ಬ ಅವಕಾಶವಾದಿ ರಾಜಕಾರಣಿ, ಸ್ತ್ರೀಲೋಲ ಹೀಗೆ ನಾನಾ ವಿಧವಾಗಿ ಪಂಡಿತ್ ನೆಹರೂರವರ ಇತಿಹಾಸವನ್ನು ತಿರುಚಿ ಹಂಚಿಕೊಳ್ಳಲಾಗುತ್ತಿದೆ. ನಾನು ಶಿಕ್ಷಣದಿಂದ ಕ್ರಿಶ್ಚಿಯನ್, ಸಂಸ್ಕೃತಿಯಿಂದ ಮುಸ್ಲಿಂ, ಆಕಸ್ಮಿಕವಾಗಿ ಹಿಂದೂ! ಎಂದು ಜವಾಹರಲಾಲ್ ನೆಹರು ಹೇಳಿಕೊಂಡಿದ್ದಾರೆ ಎಂಬ…

Read More
ಟಿಪ್ಪು ಸುಲ್ತಾನ್

ಕರ್ನಾಟಕ ಹೈಕೋರ್ಟ್ ಟಿಪ್ಪು ಸುಲ್ತಾನರನ್ನು ಜಿಹಾದಿ, ಅತ್ಯಾಚಾರಿ ಎಂದು ಘೋಷಿಸಿದೆ ಎಂಬುದು ಸುಳ್ಳು

‘ಕರ್ನಾಟಕ ಹೈಕೋರ್ಟ್ ಟಿಪ್ಪು ಸುಲ್ತಾನನನ್ನು ಜಿಹಾದಿ ಎಂದು ಘೋಷಿಸಿದೆ ಮತ್ತು ಸ್ವಾತಂತ್ರ್ಯ ಹೋರಾಟಗಾರನಲ್ಲ’ ಎಂದು ಹೇಳಿದೆ ಎಂದು ಬರೆಯಲಾಗಿರುವ ಪೋಸ್ಟ್‌ ಒಂದನ್ನು ಸಾಮಾಜಿಕ ಮಾಧ್ಯಮದಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. ಆ ಪೋಸ್ಟ್‌ನಲ್ಲಿ ‘ಟಿಪ್ಪು ಸುಲ್ತಾನ್ ಹಿಂದೂಗಳನ್ನು ಹತ್ಯೆಗೈದ, ಅತ್ಯಾಚಾರ ಮಾಡಿದ, ಮತ್ತು ಮತಾಂತರ ಮಾಡುತ್ತಿದ್ದ’ ಎಂದು ಕರ್ನಾಟಕ ಹೈಕೋರ್ಟ್‌ನ ಮಾಜಿ ಮುಖ್ಯ ನ್ಯಾಯಮೂರ್ತಿಯಾಗಿದ್ದ ನ್ಯಾಯಮೂರ್ತಿ ಸುಭ್ರೋ ಕಮಲ್ ಮುಖರ್ಜಿ ಅವರು ಹೇಳಿದ್ದಾರೆ’ ಎಂದು ಬರೆಯಲಾಗಿದೆ. ಪೋಸ್ಟ್‌ನಲ್ಲಿನ ಪ್ರತಿಪಾದನೆ ನಿಜವೆ ಎಂಬುದನ್ನು ಪರಿಶೀಲಿಸೋಣ. ಫ್ಯಾಕ್ಟ್ ಚೆಕ್ ಈ ಕುರಿತು ಹುಡುಕಿದಾಗ…

Read More

Fact Check : ಮ್ಯಾಕ್ಸ್‌ವೆಲ್ ಜಾಗದಲ್ಲಿ ಕೊಹ್ಲಿ ಇದ್ದಿದ್ದರೆ ಸಿಂಗಲ್ ತೆಗೆದುಕೊಳ್ಳುತ್ತಿದ್ದರು ಎಂದು ಗೌತಮ್ ಗಂಭೀರ್ ಹೇಳಿಲ್ಲ

“ಒಂದು ವೇಳೆ ವಿರಾಟ್‌ ಕೊಹ್ಲಿ 195 ರನ್‌ ಗಳಿಸಿ ಬ್ಯಾಟ್‌ ಮಾಡುತ್ತಿದ್ದರೆ, ಅಲ್ಲಿ ದ್ವಿಶತಕ ಬಾರಿಸುವ ಸಲುವಾಗಿ ಅವರು ಸಿಂಗಲ್ಸ್‌ ತೆಗೆದುಕೊಳ್ಳುತ್ತಿದ್ದರು. ಆದರೆ, ಗ್ಲೆನ್‌ ಮ್ಯಾಕ್ಸ್‌ವೆಲ್‌ ಹಾಗೆ ಮಾಡಲಿಲ್ಲ. ಅವರು ಸಿಕ್ಸರ್‌ ಬಾರಿಸಿದರು. ಆದ್ದರಿಂದಲೇ ಅವರು ಉಳಿದವರಿಗಿಂತ ವಿಭಿನ್ನವಾಗಿ ಕಾಣಿಸಿಕೊಳ್ಳುತ್ತಾರೆ. ವೈಯಕ್ತಿಕ ಮೈಲುಗಲ್ಲುಗಳ ಸಲುವಾಗಿ ಆಡುವವರಲ್ಲ” ಎಂದು ಮಾಜಿ ಕ್ರಿಕೆಟಿಗ ಗೌತಮ್‌ ಗಂಭಿರ್‌ ಅವರು ಹೇಳಿದ್ದಾರೆ ಎಂದು  ವ್ಯಾಪಕವಾಗಿ ಸುದ್ದಿಯೊಂದು ಹರಡುತ್ತಿದೆ. ಈ ಸುದ್ದಿಯ ಪೂರ್ವಪರವನ್ನು ಅಳೆಯದೆ, ತಿಳಿಯದೆ ಯಥಾವತ್ತಾಗಿ ಕೆಲ ಸುದ್ದಿ ಸಂಸ್ಥೆಗಳು ವರದಿ ಮಾಡಿವೆ….

Read More

Fact Check: ಪ್ರಧಾನಿ ಮೋದಿಯವರು ಗಾರ್ಬಾ ನೃತ್ಯದಲ್ಲಿ ಭಾಗವಸಿದ್ದಾರೆ ಎಂಬುದು ಸುಳ್ಳು

ಕೆಲವುದಿನಗಳ ಹಿಂದೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಹಂಪಿ ಉತ್ಸವದಲ್ಲಿ ವೀರ ಮಕ್ಕಳ ಕುಣಿತದಲ್ಲಿ ಹೆಜ್ಜೆ ಹಾಕಿ ಸುದ್ದಿಯಾಗಿದ್ದರು. ಹಲವರು ಇದನ್ನು ಶ್ಞಾಘಿಸಿದರೆ ಅನೇಕರು ಸಿದ್ದರಾಮಯ್ಯನವರನ್ನು ಟೀಕಿಸಿದ್ದಾರೆ. ಈಗ ನರೇಂದ್ರ ಮೋದಿಯವರು ನವರಾತ್ರಿಯ ಗುಜರಾತಿನ ಪಾರಂಪರಿಕ ಗಾರ್ಬಾ ನೃತ್ಯದಲ್ಲಿ ಭಾಗವಹಿಸಿದ್ದಾರೆ ಎಂದು ಪ್ರತಿಪಾದಿಸಿದ ವಿಡಿಯೋ ಒಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. “ಸಿದ್ದರಾಮಯ್ಯ ಕುಣಿದರೆ ತಪ್ಪು ಮೋದಿಯವರು ಕುಣಿದರೆ ಸರಿ, ಇದು ಭಕ್ತರ ಲಾಜಿಕ್” ಎಂದು ಹಲವರು ಇದನ್ನು ಟೀಕಿಸಿ ಹಂಚಿಕೊಂಡರೆ, ಇನ್ನೂ ಮೋದಿಯವರ ಅಭಿಮಾನಿಗಳು “ದೇಶಕ್ಕಾಗಿ ಬಿಡುವಿಲ್ಲದೆ ಕೆಲಸ ಮಾಡುತ್ತಿದ್ದ…

Read More

Fact Check : ಕಾಂಗ್ರೆಸ್‌ ಸರ್ಕಾರವಿರುವ ರಾಜಸ್ಥಾನದಲ್ಲಿ ಪೊಲೀಸರ ಮೇಲೆ ಹಲ್ಲೆ ನಡೆದಿದೆ ಎಂಬುದು ಸುಳ್ಳು

ರಾಜಸ್ಥಾನದಲ್ಲಿ ಅಧಿಕಾರದಲ್ಲಿರುವ ಕಾಂಗ್ರೆಸ್‌ ಸರ್ಕಾರದಿಂದ ಪೊಲೀಸರಿಗೆ ರಕ್ಷಣೆಯೇ ಇಲ್ಲ ಎಂಬ ಪೋಸ್ಟ್‌ ಒಂದನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳಲಾಗುತ್ತಿದೆ. ಸಾಮಾಜಿಕ ಜಾಲತಾಣ ಎಕ್ಸ್‌ ಬಳಕೆದಾರ ಗಜೇಂದ್ರ ಸಿಂಗ್‌ ಎಂಬಾತ ಹಂಚಿಕೊಂಡಿರುವ ಪೋಸ್ಟ್‌ನಲ್ಲಿ “ಇದು ರಾಜಸ್ಥಾನದ ಕೋಟಾ ಜಿಲ್ಲೆಯ ಹಳ್ಳಿಯೊಂದರಲ್ಲಿ ಜಿಹಾದಿಗಳಿಂದ ನಡೆದ ಘಟನೆ. ರಾಜಸ್ಥಾನದಲ್ಲಿ ಕಾಂಗ್ರೆಸ್ ಸರ್ಕಾರವಿದೆ. ನೋಡಿ ಪೊಲೀಸರೇ ಜಿಹಾದಿಗಳಿಂದ ಪ್ರಾಣಭಿಕ್ಷೆ ಬೇಡುತ್ತಿದ್ದಾರೆ. ಇನ್ನು ಸಾಮಾನ್ಯ ಹಿಂದುಗಳ ಪರಿಸ್ಥಿತಿ ಏನಾಗಬಹುದು. ಈ ದೃಶ್ಯಗಳು ಮುಂದಿನ ದಿನಗಳಲ್ಲಿ ಕರ್ನಾಟಕದಲ್ಲಿ ಕಂಡು ಬಂದರೆ ಆಶ್ಚರ್ಯವಿಲ್ಲ” ಎಂದು ಉಲ್ಲೇಖಿಸಿ ವಿಡಿಯೋವೊಂದನ್ನು ಹಂಚಿಕೊಂಡಿದ್ದಾನೆ….

Read More
ರಾಮ ನವಮಿ

ಕರ್ನಾಟಕದ ರಾಮನವಮಿಯ ತಿರುಚಿದ ವಿಡಿಯೋವನ್ನು ಉಜ್ಜೈನಿಯದು ಎಂದು ತಪ್ಪಾಗಿ ಹಂಚಿಕೊಳ್ಳಲಾಗುತ್ತಿದೆ

ಭಾರತದಲ್ಲಿ ಕಳೆದೆರಡು ದಶಕಗಳಿಂದ ಹಿಂದು ಮುಸ್ಲಿಂ ಕಲಹ ತಾರಕಕ್ಕೇರುತ್ತಿದೆ. ಹಿಂದು ಮುಸ್ಲಿಂ ಸಾಮರಸ್ಯ ಬೆಸೆಯಬೇಕಾದ ಅಧಿಕಾರರೂಢ ಸರ್ಕಾರಗಳೇ ಕೋಮುವಾದಕ್ಕೆ ಬೆಂಬಲ ನೀಡುತ್ತಿವೆ. ಪ್ರತಿನಿತ್ಯ ಮುಸ್ಲಿಂ ಸಮುದಾಯವನ್ನು ಕೇಂದ್ರವಾಗಿರಿಸಿಕೊಂಡು, ಆ ಸಮುದಾಯದ ಮೇಲೆ ಜನರಿಗೆ ದ್ವೇಷ ಮೂಡಿಸುವ ಸಲುವಾಗಿ ಅನೇಕ ಸುಳ್ಳುಗಳನ್ನು ಹರಿಬಿಡಲಾಗುತ್ತಿದೆ. ಅಂತಹದ್ದೆ ಒಂದು ಸುಳ್ಳು ಹಲವು ದಿನಗಳಿಂದ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. “ಮಧ್ಯಪ್ರದೇಶದ ಉಜ್ಜೈನಿಯಲ್ಲಿ ಮುಸ್ಲಿಮರು ಮೊಹರಂ ಮೆರವಣಿಗೆಯ ಸಂದರ್ಭದಲ್ಲಿ “ಪಾಕಿಸ್ತಾನ ಜಿಂದಾಬಾದ್” ಎಂದು ಫೋಷಣೆ ಕೂಗಿದ್ದಾರೆ. ಮಾರನೇ ದಿನವೇ ಆ ನಗರದ ಎಲ್ಲಾ ಹಿಂದುಗಳು…

Read More
5 ಲಕ್ಷ

ಹಮಾಸ್‌ 5 ಲಕ್ಷ, ನಾವು 25 ಕೋಟಿ ಶೀರ್ಷಿಕೆಯಲ್ಲಿ ಫೇಕ್ ನ್ಯೂಸ್: 2019ರ ವಿಡಿಯೋ ಪ್ರಕಟಿಸಿದ ಸುವರ್ಣ ನ್ಯೂಸ್

ಅವರು 5 ಲಕ್ಷ ಮಾತ್ರ. ಆದರೆ ನಾವು 25 ಕೋಟಿ ಮಂದಿ ಇದ್ದೇವೆ. ಮೋದಿ ಹಾಗೂ ಅಮಿತ್ ಶಾ ಸರಿಯಾಗಿ ಕೇಳಿಸಿಕೊಳ್ಳಿ. 25 ಕೋಟಿ ಜನಸಂಖ್ಯೆಯಲ್ಲಿ 5 ಕೋಟಿ ಮಂದಿ ಹೋರಾಟದಲ್ಲಿ ಪ್ರಾಣ ನೀಡಿದರೂ ನಾವು 20 ಕೋಟಿ ಇರುತ್ತೇವೆ. ಬಾಬಾ ಸಾಹೇಬ್ ಅಂಬೇಡ್ಕರ್ ಬರೆದಿರುವ ಸಂವಿಧಾನ ಬದಲಿಸಿ, ಶರಿಯಾ ಕಾನೂನು ಜಾರಿಗೆ ತರುತ್ತೇವೆ ಎಂಬುದಾಗಿ ವ್ಯಕ್ತಿಯೊಬ್ಬ ಹೇಳುವ ವಿಡಿಯೋವೊಂದು ಕಳೆದ ಒಂದು ತಿಂಗಳಿನಿಂದ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. Here a MusIim leader of India…

Read More

Fact Check : ದಸರಾ ಕಲಾವಿದರಿಗೆ ಸಹಿ ವ್ಯತ್ಯಾಸದಿಂದ ಚೆಕ್‌ಬೌನ್ಸ್‌ ಆಗಿದೆಯೇ ಹೊರತು ನಾಡಹಬ್ಬದಲ್ಲಿ ಹಗರಣವಾಗಿಲ್ಲ

ರಾಜ್ಯ ಸರ್ಕಾರವನ್ನು ಟೀಕಿಸುವ ಬರದಲ್ಲಿ ಸುಳ್ಳು ಸುಳ್ಳು ಪ್ರತಿಪಾದನೆಯೊಂದಿಗೆ ವಿಡಿಯೋವೊಂದು ವೈರಲ್‌ ಆಗಿದೆ. ಅದರಲ್ಲಿ “ಥೂ ನಿಮ್ಮ ಸರ್ಕಾರಕ್ಕೆ !! ದಸರಾ ಕಲಾವಿದರಿಗೆ ಕೊಟ್ಟ ಚೆಕ್‌ ಬೌನ್ಸ್‌ ಆಗಿದ್ದಲ್ಲದೆ ಅವರಿಗೆ ದಂಡ ಹಾಕಲಾಗಿದೆ!! ನಾಡಹಬ್ಬದಲ್ಲೂ ಹಗರಣ ಮಾಡಿದ ಕಾಂಗ್ರೆಸ್ಸನ್ನು ಖಂಡಿಸಲು ಶೇರ್‌ ಮಾಡಿ” ಎಂದು ಬರೆದುಕೊಳ್ಳಲಾಗಿದೆ. ಇದರ ಕುರಿತು ಪರಿಶೀಲನೆ ನಡೆಸಿದಾಗ ದಸರಾ ಅಂಗವಾಗಿ ಖರ್ಚು ವೆಚ್ಚದ ಲೆಕ್ಕಕ್ಕಾಗಿ ಆಯಾ ಉಪಸಮಿತಿಗಳ ಹೆಸರಿನಲ್ಲಿಯೇ ಬ್ಯಾಂಕ್‌ ಖಾತೆ ತೆರೆದು ಆ ಮೂಲಕವೇ ಕಲಾವಿದರಿಗೆ ಗೌರವ ಸಂಭಾವನೆಯ ಚೆಕ್‌ ನೀಡಲಾಗುತ್ತಿದೆ….

Read More

Fact Check : ಸೋನಿಯಾ ಗಾಂಧಿ ಹಿಂದೂ ವಿರೋಧಿ ಎಂದು ಮಾಜಿ ರಾಷ್ಟ್ರಪತಿ ಪ್ರಣಬ್‌ ಮುಖರ್ಜಿ ಬರೆದಿದ್ದಾರೆಂಬುದು ಸುಳ್ಳು

ಸಾಮಾಜಿಕ ಜಾಲತಾಣದಲ್ಲಿ ಪೇಪರ್‌ ಕಟಿಂಗ್‌ವೊಂದು ವೈರಲ್‌ ಆಗುತ್ತಿದೆ. ಅದರಲ್ಲಿ ‘ಸೋನಿಯಾ ಗಾಂಧಿ ಹಿಂದೂಗಳನ್ನು ದ್ವೇಷಿಸುತ್ತಾರೆ’ ಎಂಬ ಶೀರ್ಷಿಕೆ ಇದ್ದು ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿಯವರ ಪುಸ್ತಕ ದಿ ಕೊಯಲಿಷನ್ ಇಯರ್ಸ್ 1996-2012 ಪುಸ್ತಕದಲ್ಲಿ ಸೋನಿಯಾ ಗಾಂಧಿ ಹಿಂದೂ ವಿರೊಧಿ ಎಂದು ಬರೆಯಲಾಗಿದೆ. ಈ ಪೋಸ್ಟ್‌ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗುತ್ತಿದ್ದು ಸಾಕಷ್ಟು ಮಂದಿ ಇದನ್ನು ನಿಜವೆಂದು ನಂಬಿ ವ್ಯಾಪಕವಾಗಿ ಶೇರ್‌ ಮಾಡುತ್ತಿದ್ದಾರೆ. ಹಾಗಾಗಿ ಈ  ಕುರಿತು ಫ್ಯಾಕ್ಟ್‌ಚೆಕ್‌ ನಡೆಸಿದಾಗ ಸಿಕ್ಕ ಮಾಹಿತಿ ಬೇರೆಯದ್ದೇ ಆಗಿದೆ. ಅಸಲಿಗೆ ಪೇಪರ್‌…

Read More
ರಾಹುಲ್ ಗಾಂಧಿ

ರಾಹುಲ್ ಗಾಂಧಿಯವರು ಮೂರು ತಿಂಗಳ ಉಚಿತ ರಿಚಾರ್ಜ್ ಯೋಜನೆಯನ್ನು ಘೋಷಿಸಿದ್ದಾರೆಂಬುದು ಸುಳ್ಳು

ಪಂಚರಾಜ್ಯಗಳ ಚುನಾವಣೆಯ ಈ ಸಂದರ್ಭದಲ್ಲಿ ಆಯಾ ರಾಜ್ಯಗಳನ್ನು ಆಧರಿಸಿ  ಎರಡೂ ರಾಷ್ಟ್ರೀಯ ಪಕ್ಷಗಳು ಅನೇಕ ಯೋಜನೆಯನ್ನು ಘೋಷಿಸಿವೆ. ಈ ಯೋಜನೆಗಳ ಕುರಿತು ಹಲವು ಪರ-ವಿರೋಧಗಳು ಮತ್ತು ಅಪಪ್ರಚಾರದ ಸುಳ್ಳುಗಳು ಹರಿದಾಡುತ್ತಿವೆ. ಇಂತಹದ್ದೇ ಒಂದು ಸುದ್ದಿ ಈಗ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. “2024 ರ ಸಾರ್ವತ್ರಿಕ ಚುನಾವಣೆಯಲ್ಲಿ ಹೆಚ್ಚಿನ ಜನರು ಕಾಂಗ್ರೆಸ್‌ಗೆ ಮತ ಚಲಾಯಿಸಲು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ “ಮೂರು ತಿಂಗಳ ಉಚಿತ ರೀಚಾರ್ಜ್” ನೀಡುವುದಾಗಿ ಹೇಳಿದ್ದಾರೆ ಎಂಬ ಸುದ್ದಿಯೊಂದು ಸಾಮಾಜಿಕ ಜಾಲತಾಣಗಲಲ್ಲಿ ಹರಿದಾಡುತ್ತಿದೆ. ಫ್ಯಾಕ್ಟ್‌ಚೆಕ್: ಈ…

Read More