ಛತ್ತಿಸ್ಗಡದ ಮುಖ್ಯಮಂತ್ರಿ ಅದಾನಿಗಾಗಿ ಕೆಲಸ ಮಾಡುತ್ತಾರೆ ಎಂದು ರಾಹುಲ್ ಗಾಂಧಿ ಹೇಳಿಲ್ಲ

ರಾಹುಲ್ ಗಾಂಧಿ ಅವರು ಟಿ.ಎಸ್.ಸಿಂಗ್ ದೇವ್ ಅವರನ್ನು ಛತ್ತೀಸ್ ಗಢದ ಮುಖ್ಯಮಂತ್ರಿ ಎಂದು ಉಲ್ಲೇಖಿಸಿದ್ದಾರೆ. ಮತ್ತು ಚತ್ತಿಸ್ಗಡದ ಮುಖ್ಯಮಂತ್ರಿಗಳು(ಕಾಂಗ್ರೆಸ್‌) ಸಹ ಅದಾನಿಯಂತವರಿಗೆ ಕೆಲಸ ಮಾಡುತ್ತಾರೆ.  ಎಂದು ಪ್ರತಿಪಾದಿಸಿ ಬಿಜೆಪಿ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವಿಯ, ಬಲಪಂಥೀಯ ಮಾಧ್ಯಮಗಳಾದ ಪೋಲಿಟಿಕಲ್ ಕಿಡ, ಮೇಘ ಅಪ್ಡೆಟ್ಸ್ ಬಲಪಂಥೀಯ ಪತ್ರಕರ್ತ ಮಿ. ಸಿನ್ಹ  ಸೇರಿದಂತೆ ಅನೇಕರು ಈ ವಿಡಿಯೋವನ್ನು ಹಂಚಿಕೊಳ್ಳುತ್ತಿದ್ದಾರೆ. ಫ್ಯಾಕ್ಟ್‌ಚೆಕ್: ಈ ವಿಡಿಯೋ 2023ರ ಅಕ್ಟೋಬರ್ 29ರಂದು ಛತ್ತಿಸ್ಗಡದ ರಾಜನಂದಗಾಂವ್‌ನಲ್ಲಿ ನಡೆದ ಸಾರ್ವಜನಿಕ ಭಾಷಣದ್ದಾಗಿದೆ. ತಮ್ಮ ಭಾಷಣದಲ್ಲಿ ರಾಹುಲ್…

Read More
ರಶೀದ್ ಖಾನ್

ಕ್ರಿಕೆಟಿಗ ರಶೀದ್ ಖಾನ್‌ಗೆ ಉದ್ಯಮಿ ರತನ್ ಟಾಟಾ 10 ಕೋಟಿ ರೂ ಬಹುಮಾನ ಘೋಷಿಸಿದ್ದಾರೆ ಎಂಬುದು ಸುಳ್ಳು

ಪಾಕ್ ವಿರುದ್ಧ ಗೆಲುವಿನ ಸಂಭ್ರಮಾಚರಣೆಯಲ್ಲಿ ಭಾರತದ ಧ್ವಜ ಪ್ರದರ್ಶಿಸಿದ್ದಕ್ಕಾಗಿ ಆಪ್ಘಾನಿಸ್ತಾನದ ಕ್ರಿಕೆಟಿಗ ರಶೀದ್ ಖಾನ್‌ಗೆ ICC 50 ಲಕ್ಷ ರೂ ದಂಡ ವಿಧಿಸಿದೆ. ನಂತರ ಅವರಿಗೆ ಉದ್ಯಮಿ ರತನ್ ಟಾಟಾ 10 ಕೋಟಿ ರೂ ಬಹುಮಾನ ಘೋಷಿಸಿದ್ದಾರೆ ಎಂಬ ಸುದ್ದಿಯೊಂದು ವೈರಲ್ ಆಗುತ್ತಿದೆ. ಫ್ಯಾಕ್ಟ್‌ಚೆಕ್: ಈ ಕುರಿತು ತಮ್ಮ ಟ್ವಿಟರ್ (X) ಖಾತೆಯಲ್ಲಿ ಪ್ರತಿಕ್ರಿಯಿಸಿರುವ ರತನ್ ಟಾಟಾ, “ನಾನು ಯಾವುದೇ ಆಟಗಾರನಿಗೆ ಬಹುಮಾನ ಘೋಷಿಸಿಲ್ಲ. ನನಗೂ ಕ್ರಿಕೆಟ್‌ಗೂ ಯಾವುದೇ ಸಂಬಂಧವಿಲ್ಲ. ನನ್ನ ಅಧಿಕೃತ ಸಾಮಾಜಿಕ ಜಾಲತಾಣಗಳ ವೇದಿಕೆಗಳಲ್ಲಿ…

Read More
ತೆಲಂಗಾಣ

ತೆಲಂಗಾಣ ಸರ್ಕಾರ ಮುಸ್ಲಿಮರಿಗೆ ಮಾತ್ರ ಕಾರುಗಳನ್ನು ನೀಡುತ್ತಿಲ್ಲ, ಹಲವು ಸಮುದಾಯಗಳಿಗೆ ಈ ಸೌಲಭ್ಯವಿದೆ

ತೆಲಂಗಾಣ ಸರ್ಕಾರ ಮುಸ್ಲಿಮರಿಗೆ ಮಾತ್ರ ಕಾರುಗಳನ್ನು ನೀಡುವ ಯೋಜನೆ ಜಾರಿಗೆ ತಂದಿದೆ. ನಮ್ಮ ತೆರಿಗೆ ಹಣವನ್ನು ಮುಸ್ಲಿಮರ ತುಷ್ಟೀಕರಣ ಮಾಡಲು ಬಳಸುತ್ತಿದೆ ಎಂದು ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಬಿಜೆಪಿ ಶಿವಮೊಗ್ಗ ಪೇಜ್‌ನಲ್ಲಿ ಅದನ್ನು ಹಂಚಿಕೊಂಡು ಮುಸ್ಲಿಮರ ವಿರುದ್ಧ ಕಿಡಿಕಾರಲಾಗಿದೆ. ಇದು ನಿಜವೇ ಎಂದು ಪರಿಶೀಲಿಸೋಣ.   ತೆಲಂಗಾಣ ರಾಜ್ಯ ಸರ್ಕಾರವು ಚಾಲಕರ ಸಬಲೀಕರಣ ಕಾರ್ಯಕ್ರಮದ ಭಾಗವಾಗಿ ಅಲ್ಪಸಂಖ್ಯಾತರ ಹಣಕಾಸು ಕಾರ್ಪೊರೇಶನ್‌ನಿಂದ ಅರ್ಹ ಅಲ್ಪಸಂಖ್ಯಾತ ಚಾಲಕರಿಗೆ  ಡ್ರೈವರ್ ಕಮ್ ಓನರ್ ಯೋಜನೆಯಡಿ ಕಾರು ತೆಗೆದುಕೊಳ್ಳಲು ಸಹಾಯಧನ ಒದಗಿಸುತ್ತಿದೆ….

Read More

Fact Check : ಹಮಾಸ್‌ ಶಾಲಾ ಮಕ್ಕಳಿಗೆ ಮಿಲಿಟರಿ ತರಬೇತಿ ನೀಡುತ್ತಿದೆ ಎಂದು ಹಳೆಯ ವಿಡಿಯೋ ಹಂಚಿಕೆ

ಶಾಲಾ-ವಯಸ್ಸಿನ ಮಕ್ಕಳಿಗೆ ಶಸ್ತ್ರಾಸ್ತ್ರ ಮತ್ತು ಮಿಲಿಟರಿ ವ್ಯಾಯಾಮಗಳಲ್ಲಿ ತರಬೇತಿ ಪಡೆಯುತ್ತಿರುವುದನ್ನು ತೋರಿಸುವ ವೀಡಿಯೊವು ಪ್ರಸ್ತುತ ಸಾಮಾಜಿಕ ಮಾಧ್ಯಮದಲ್ಲಿ ಪ್ರಸಾರವಾಗುತ್ತಿದ್ದು, ಈಗ ನಡೆಯುತ್ತಿರುವ ಇಸ್ರೇಲ್-ಹಮಾಸ್ ನಡುವಿನ ಸಂಘರ್ಷಕ್ಕೆ ಸಂಬಂಧಿಸಿದ್ದಾಗಿದೆ ಎಂದು ಹಂಚಿಕೊಳ್ಳಲಾಗುತ್ತಿದೆ.. ಆದರೆ ಈ ವಿಡಿಯೋ ಸತ್ಯಾಸತ್ಯತೆಯನ್ನು ಪರಶೀಲಿಸಿದಾಗ ಸಿಕ್ಕ ಉತ್ತರವೇ ಬೇರೆಯದ್ದಾಗಿತ್ತು. ಕಳೆದ ಒಂದು ಎರಡು ವಾರಗಳಿಂದ “ಹಮಾಸ್‌ ಬಂಡುಕೋರಾರು ಇಸ್ರೇಲ್‌ ವಿರುದ್ಧ ಹೋರಾಟವನ್ನು ಮುಂದುವರೆಸಲು ಶಾಲಾ ಮಕ್ಕಳಿಗೆ ಸೈನಿಕ ತರಬೇತಿಯನ್ನು ನೀಡುತ್ತಿದೆ. ಯುದ್ಧದಲ್ಲಿ ಹೋರಾಡಲು ಮಕ್ಕಳನ್ನ ಮುಂದಕ್ಕೆ ಬಿಟ್ಟು ಹಮಾಸ್‌ ಬಂಡುಕೋರರು ತಪ್ಪಿಸಿಕೊಳ್ಳಲು ರಣತಂತ್ರವನ್ನು ಹೂಡುತ್ತಿದ್ದಾರೆ…

Read More
ಮುಸ್ಲಿಂ

Fact Check: ಮುಸ್ಲಿಂ ವ್ಯಕ್ತಿಯೊಬ್ಬ ತನ್ನ ಮಗಳನ್ನೇ ಮದುವೆಯಾಗಿದ್ದಾನೆ ಎಂಬುದು ಸುಳ್ಳು

ಇದು ಇಸ್ಲಾಂನ ಸೌಂದರ್ಯ. ಇಲ್ಲಿ ಹೆಂಡತಿಯಾಗಲು ವಯಸ್ಸು ಮುಖ್ಯವಲ್ಲ. ಮುಸ್ಲಿಂ ವ್ಯಕ್ತಿಯೊಬ್ಬ ತನ್ನ ಮಗಳಾದ ಪುಟ್ಟ ಬಾಲಕಿಯನ್ನೇ ಮದುವೆಯಾಗಿದ್ದಾನೆ. ಎಂಬ ವಿಡಿಯೋ ಒಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಫ್ಯಾಕ್ಟ್‌ಚೆಕ್: ಇಟಲಿಯ ಕ್ಯಾಥೋಲಿಕ್ ಕುಟುಂಬವೊಂದು ಕ್ರಿಶ್ಚಿಯನ್ ಸಂಪ್ರದಾಯದಂತೆ ತಮ್ಮ ಮಗಳ ಮೊದಲ ಕಮುನಿಯನ್(communion ceremony) ಆಚರಣೆಯನ್ನು ನಡೆಸುತ್ತಿರುವ ವಿಡಿಯೋ ಇದಾಗಿದೆ. ಹುಡುಗಿಯ ತಂದೆ ಜಿನೊ ಕೊಪ್ಪೊಲಾ ಅಕ್ಟೋಬರ್ 23ರಂದು ತಮ್ಮ ಇಂಸ್ಟಾಗ್ರಾಮ್ ಖಾತೆಯಲ್ಲಿ ಈ ವಿಡಿಯೋವನ್ನು ಮೊದಲು ಹಂಚಿಕೊಂಡಿದ್ದಾರೆ. ಮಾರನೆ ದಿನವೂ ಸಹ ತನ್ನ ಹೆಂಡತಿ ಜೊತೆಗೆ ಮಗಳಿಗೆ…

Read More

Fact Check :ಈ ಫೋಟೋ ಇಸ್ರೇಲ್‌ನ ಸೇನೆಗೆ ಸಂಬಂಧಿಸಿದ್ದು ಎಂಬುದಕ್ಕೆ ಯಾವುದೇ ಸಾಕ್ಷಿಗಳಿಲ್ಲ

ಇಸ್ರೇಲ್‌ ಮತ್ತು ಹಮಾಸ್‌ ನಡುವಿನ ಯುದ್ಧ ಆರಂಭವಾಗುತ್ತಿದ್ದಂತೆ ಈ ಯುದ್ಧಕ್ಕೆ ಸಂಬಂಧ ಪಟ್ಟಂತೆ ಹಲವು ರೀತಿಯ ಸುಳ್ಳು ಸುದ್ದಿಗಳು ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಹಬ್ಬೋದಕ್ಕೆ ಪ್ರಾರಂಭವಾಗಿದೆ. ಅದರಲ್ಲೂ ಕೆಲವೊಂದು ಸುದ್ದಿಗಳಿಗೆ ಹಳೆಯ ಫೋಟೋಗಳನ್ನು ಬಳಸಿಕೊಂಡು ಅದು ಇತ್ತೀಚಿನ ಹಮಾಸ್‌ ಮತ್ತು ಇಸ್ರೇಲ್‌ ನಡುವೆ ನಡೆಯುತ್ತಿರುವ ಯುದ್ಧಕ್ಕೆ ಸಂಬಂಧಿಸಿದ ಫೋಟೋವಾಗಿದೆ ಎಂದು ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. ಇದಕ್ಕೆ ಪೂರಕ ಎಂಬಂತೆ ಯೋಧೆಯೊಬ್ಬಳು ಸೈನಿಕರ ರೀತಿ ಬಟ್ಟೆ ಧರಿಸಿ ಒಂದು ಕೈಯಲ್ಲಿ ಗನ್‌ ಮತ್ತೊಂದು ಕೈಯಲ್ಲಿ ಮಗುವನ್ನು ಹಿಡಿದುಕೊಂಡಿರುವ ಫೋಟೋ ಸಾಮಾಜಿಕ…

Read More
ಕಾಂಗ್ರೆಸ್

ನಿಮ್ಮ ಮಕ್ಕಳ ಕಲ್ಯಾಣವಾಗಬೇಕಾದರೆ ಕಾಂಗ್ರೆಸ್‌ಗೆ ಮತ ನೀಡಿ ಎಂದು ಪ್ರಧಾನಿ ಮೋದಿ ಹೇಳಿಲ್ಲ

“ನಿಮ್ಮ ಮತ್ತು ನಿಮ್ಮ ಮಕ್ಕಳ ಭವಿಷ್ಯ ಕಲ್ಯಾಣವಾಗಬೇಕಾದರೆ ಕಾಂಗ್ರೆಸ್‌ಗೆ ಮತ ನೀಡಿ” ಎಂದು ಪ್ರಧಾನಿ ನರೇಂದ್ರ ಮೋದಿಯವರು ತಮ್ಮ ಭಾಷಣದಲ್ಲಿ ತಿಳಿಸಿದ್ದಾರೆ ಎನ್ನುವ ವಿಡಿಯೋ ಒಂದನ್ನು मोदी जी का जनता से अपील ಎಂಬ ಸಂದೇಶದೊಂದಿಗೆ ಹಂಚಿಕೊಳ್ಳಲಾಗುತ್ತಿದೆ. ಫ್ಯಾಕ್ಟ್‌ಚೆಕ್: ಈ ವೈರಲ್ ವಿಡಿಯೋ 27, ಜೂನ್ 2023ರಂದು ಮಧ್ಯಪ್ರದೇಶದ ಭುಪಾಲ್‌ನಲ್ಲಿ ನಡೆದ “ಮೆರಾ ಬೂತ್ ಸಬ್ಸೆ ಮಜಬೂತ್” ಕಾರ್ಯಕ್ರಮದ್ದಾಗಿದೆ. ಭಾಷಣದಲ್ಲಿ ಮೋದಿಯವರು “ನಿಮ್ಮ ಹಾಗೂ ನಿಮ್ಮ ಮಕ್ಕಳ ಭವಿಷ್ಯ ಕಲ್ಯಾಣವಾಗಬೇಕಾದರೆ ಬಿಜೆಪಿಗೆ ಮತ ನೀಡಿ. ನೆಹರೂ…

Read More
AI

Fact Check: AI ಸೃಷ್ಟಿಸಿದ ಚಿತ್ರಗಳನ್ನೇ ಕಾಶಿ, ಅಯೋಧ್ಯೆಯ ರೈಲ್ವೆ ನಿಲ್ದಾಣದ ನೀಲನಕ್ಷೆ ಎಂದು ಹಂಚಿಕೊಳ್ಳಲಾಗುತ್ತಿದೆ

ಇತ್ತೀಚೆಗೆ ಕೃತಕ ಬುದ್ದಿಮತ್ತೆ(AI)ಯಿಂದ ಸೃಷ್ಟಿಸಿದ ಪೋಟೋಗಳನ್ನು ಮತ್ತು ವಿಡಿಯೋಗಳನ್ನು ನಿಜವೆಂದು ನಂಬಿ ಹಂಚಿಕೊಳ್ಳಲಾಗುತ್ತಿದೆ. ಇದಕ್ಕೆ ಉದಾಹರಣೆ ಎಂಬಂತೆ “ಇದು ಕಾಶಿ, ವಾರಣಾಸಿ ಅಥವಾ ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ಮೆಟ್ರೋ, ರೈಲ್ವೆ ಸ್ಟೇಷನ್ ನೀಲನಕ್ಷೆ” ಎಂದು ಪ್ರತಿಪಾದಿಸಿದ ಪೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಫ್ಯಾಕ್ಟ್‌ಚೆಕ್‌: ಇದು ಕೃತಕ ಬುದ್ಧಿಮತ್ತೆ(AI)ಯಿಂದ ಸೃಷ್ಟಿಸಿದ ಚಿತ್ರವಾಗಿದೆ. ಅಮರ್ ಎಂಬ ಇಂಜಿನಿಯರ್ ಒಬ್ಬ ಹಲವಾರು ರೈಲ್ವೆ ನಿಲ್ದಾಣಗಳ ಚಿತ್ರಗಳನ್ನು ಸೃಷ್ಟಿಸಿದ್ದು, ತನ್ನ X ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಈತ ಅಯೋಧ್ಯೆಯ ರೈಲ್ವೇ ನಿಲ್ದಾಣದ ಚಿತ್ರವನ್ನೂ ಸಹ AI…

Read More
ಟಿಪ್ಪು ಸುಲ್ತಾನ

ಟಿಪ್ಪು ಸುಲ್ತಾನನ ನಿಜ ಚಿತ್ರವೆಂದು ತಪ್ಪಾಗಿ ಹಂಚಿಕೊಳ್ಳಲಾಗುತ್ತಿರುವ ಪೋಟೋಗಳು ಅರಬ್ ಮತ್ತು ಆಫ್ರಿಕಾದ ವ್ಯಾಪಾರಿಗಳದ್ದು

ಕಳೆದೊಂದು ದಶಕದಲ್ಲಿ “ಮೈಸೂರ ಹುಲಿ” ಎಂದೇ ಖ್ಯಾತನಾದ ಟಿಪ್ಪು ಸುಲ್ತಾನ್ ಕುರಿತು, ಆತನ ಇತಿಹಾಸದ ಕುರಿತು ಸಾಕಷ್ಟು ರಾಜಕೀಯ ಪ್ರೇರಿತ ಚರ್ಚೆಗಳು, ವಾದ-ವಿವಾದಗಳು ನಡೆಯುತ್ತಿವೆ. ನೈಜ ಇತಿಹಾಸವನ್ನು ಕೆದಕುವ ಭರದಲ್ಲಿ ಸುಳ್ಳುಗಳನ್ನು, ಕಟ್ಟು ಕಥೆಗಳನ್ನೂ ಬಳಸಿಕೊಂಡು ಟಿಪ್ಪು ಸುಲ್ತಾನನ ಇತಿಹಾಸದ ಮೇಲೆ ಸಾಕಷ್ಟು ದಾಳಿ ನಡೆಸಲಾಗುತ್ತಿದೆ. ಇಂತಹ ತೇಜೋವಧೆಯ ಭಾಗವಾಗಿ ಹಲವಾರು ವರ್ಷಗಳಿಂದ “ಇದು ನಿಜವಾದ ಟಿಪ್ಪು ಸುಲ್ತಾನನ ಚಿತ್ರ. ಕಾಂಗ್ರೆಸ್ ಸುಳ್ಳು ಚಿತ್ರವನ್ನು ಭಾರತದ ಶಾಲಾ ಪಠ್ಯಪುಸ್ತಕದಲ್ಲಿ ಮಕ್ಕಳಿಗೆ ತೋರಿಸುತ್ತಾ ಬಂದಿದೆ.” ಎಂದು ಪ್ರತಿಪಾದಿಸಿದ ಹಲವಾರು…

Read More
ಬುರ್ಖಾ

ಬುರ್ಖಾ ಧರಿಸದ ಹಿಂದೂ ಮಹಿಳೆಯರು ಕೇರಳದ ಬಸ್‌ ಹತ್ತುವಂತಿಲ್ಲ ಎಂಬುದು ಸುಳ್ಳು

“ಕೇರಳದಲ್ಲಿ ಮುಸ್ಲಿಂ ಮಹಿಳಾ ಪ್ರಯಾಣಿಕರು ಬುರ್ಖಾ ಇಲ್ಲದೆ ಮಹಿಳೆಯರನ್ನು ಬಸ್‌ನಲ್ಲಿ ಅನುಮತಿಸುವುದಿಲ್ಲ ಎಂದು ಹೇಳಿದ್ದಾರೆ. ಈಗ, ಹಿಂದೂಗಳು ತಮ್ಮ ತಲೆಯನ್ನು ಮುಚ್ಚಿಕೊಳ್ಳಬೇಕು ಮತ್ತು ನಂತರ ಮಾತ್ರ ಸಾರ್ವಜನಿಕ ಸಾರಿಗೆಯಲ್ಲಿ ಪ್ರಯಾಣಿಸಬಹುದು. ಆಶ್ಚರ್ಯಕರವಾಗಿ, ಈ ಘಟನೆಯನ್ನು ಯಾವುದೇ ಟಿವಿ ಚಾನೆಲ್ ಮತ್ತು ಯಾವುದೇ ಪತ್ರಿಕೆಯು ವರದಿ ಮಾಡಿಲ್ಲ. ಮಾಧ್ಯಮಗಳು ನಿಗೂಢವಾಗಿ ಮೌನವಾಗಿವೆ” ಎಂದು ಬಸ್‌ನಲ್ಲಿ ಜಗಳ ನಡೆಯುವ ವಿಡಿಯೋವೊಂದನ್ನು ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. ಇದು ನಿನ್ನೆ ಕೇರಳದಲ್ಲಿ. ಮುಸ್ಲಿಂ ಮಹಿಳಾ ಪ್ರಯಾಣಿಕರು ಬುರ್ಖಾ ಇಲ್ಲದೆ ಮಹಿಳೆಯರನ್ನು ಬಸ್‌ನಲ್ಲಿ ಅನುಮತಿಸುವುದಿಲ್ಲ ಎಂದು…

Read More