Fact Check | ಕೆನಡಾದಲ್ಲಿರುವ ಹನುಮಂತನ ವಿಗ್ರಹದ ಸುತ್ತಮುತ್ತ ಮಲದ ರಾಶಿ ಕಂಡು ಬಂದಿದೆ ಎಂಬ ವರದಿ ನಕಲಿ

ಕೆನಡಾದ ಬ್ರಾಂಪ್ಟನ್‌ನಲ್ಲಿರುವ ಹಿಂದೂ ದೇವರು ಹನುಮಾನ್ ಪ್ರತಿಮೆಯ ಸುತ್ತಲೂ ಮಾನವ ಮಲದ ರಾಶಿಗಳು ಕಂಡುಬಂದಿವೆ ಎಂಬ ಶೀರ್ಷಿಕೆಯಲ್ಲಿ ‘ಟೊರೊಂಟೊ ಸನ್’ ಸುದ್ದಿ ಪ್ರಕಟಿಸಿದೆ ಎಂದು ವರದಿಯ ಸ್ಕ್ರೀನ್‌ಶಾಟ್‌ನೊಂದಿಗೆ ಪೋಸ್ಟ್‌ವೊಂದನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಳ್ಳಲಾಗುತ್ತಿದೆ. ಈ ವರದಿಯನ್ನೇ ನಿಜವೆಂದು ನಂಬಿ ಸಾಕಷ್ಟು ಮಂದಿ ತಮ್ಮ ಸಾಮಾಜಿಕ ಜಾಲತಾಣದ ಖಾತೆಗಳಲ್ಲಿ ಶೇರ್‌ ಕೂಡ ಮಾಡುತ್ತಿದ್ದಾರೆ. ಇನ್ನು ‘ಟೊರೊಂಟೊ ಸನ್’ ವರದಿಯ ಫೋಟೋವನ್ನು ಗಮನಿಸಿದಾಗ ಇದರಲ್ಲಿನ ಅಕ್ಷರಗಳು ಅಸ್ಪಷ್ಟವಾಗಿ ಸ್ವಲ್ಪ ಬದಲಾವಣೆಯೊಂದಿಗೆ ಕಂಡು ಬಂದಿದ್ದು, ಶೀರ್ಷಿಕೆ ಮಾತ್ರ ಸ್ಪಷ್ಟವಾಗಿ ಗೋಚರಿಸುತ್ತಿದೆ. ಹೀಗಾಗಿ…

Read More

Fact Check | ಅಯೋಧ್ಯೆಯ ರಾಮಮಂದಿರದ ಅಧಿಕಾರಿಗಳು ದಲಿತ ಬಾಲಕನಿಗೆ ಹಲ್ಲೆ ನಡೆಸಿದ್ದಾರೆ ಎಂಬುದು ಸುಳ್ಳು

“ಈ ವಿಡಿಯೋ ನೋಡಿ ಅಯೋಧ್ಯೆಯಲ್ಲಿ ದಲಿತ ಬಾಲಕನ ಮೇಲೆ ರಾಮಮಂದಿರದ ಅಧಿಕಾರಿಗಳು ಹೇಗೆ ಹಲ್ಲೆ ನಡೆಸುತ್ತಿದ್ದಾರೆಂದು. ಇದು ನಿಜಕ್ಕೂ ಆಘಾತಕಾರಿ.” ಎಂದು ವ್ಯಕ್ತಿಯೊಬ್ಬ ಬಾಲಕನನ್ನು ಥಳಿಸುತ್ತಿರುವಂತಹ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ನಾನಾ ಬರಹಗಳೊಂದಿಗೆ ವೈರಲ್ ಆಗುತ್ತಿದೆ. ಈ ವಿಡಿಯೋವನ್ನು ಸಾಕಷ್ಟು ಮಂದಿ ತಮ್ಮ ಸಾಮಾಜಿಕ ಜಾಲತಾಣದ ಖಾತೆಗಳಲ್ಲಿ ಹಂಚಿಕೊಳ್ಳುತ್ತಿದ್ದಾರೆ ಈ ವಿಡಿಯೋದಲ್ಲಿ ಸೂಕ್ಷ್ಮವಾಗಿ ಗಮನಿಸಿದಾಗ ಇಬ್ಬರು ವ್ಯಕ್ತಿಗಳು ಸಮವಸ್ತ್ರ ಧರಿಸಿದ ಬಾಲಕನೊಬ್ಬನನ್ನು ರಸ್ತೆಯ ಮೇಲೆಯೇ ಮನಸ್ಸೋ ಇಚ್ಛೆ ಥಳಿಸುತ್ತಿರುವುದನ್ನು ಕಾಣಬಹುದಾಗಿದೆ. ಜೊತೆಗೆ ಇದೇ ವಿಡಿಯೋದಲ್ಲಿ ಹಲವು ವಿದ್ಯಾರ್ಥಿಗಳಿರುವುದು,…

Read More

Fact Check: ಐದು ಮಕ್ಕಳ ಮುಸ್ಲಿಂ ಕುಟುಂಬದ ಪೋಟೋ ಬಾಂಗ್ಲಾದೇಶಕ್ಕೆ ಸೇರಿದ್ದಾಗಿದೆ

ಭಾರತದಲ್ಲಿ ಮುಸ್ಲಿಂ ಸಮುದಾಯದ ಜನಸಂಖ್ಯೆ ಗಣನೀಯವಾಗಿ ಹೆಚ್ಚಾಗುತ್ತಿದೆ. ಮುಂಬರುವ ದಿನಗಳಲ್ಲಿ ಭಾರತ ಮುಸ್ಲಿಂ ರಾಷ್ಟ್ರವಾಗುತ್ತದೆ ಎಂದು ಪ್ರತಿಪಾದಿಸಿದ ಅನೇಕ ಸಂದೇಶಗಳು, ಆಧಾರ ರಹಿತ ಪ್ರತಿಪಾದನೆಗಳು ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ಹರಿದಾಡುತ್ತಿವೆ. ಇವುಗಳ ಮುಖ್ಯ ಉದ್ದೇಶ ಭಾರತದಲ್ಲಿ ಮುಸ್ಲಿಂ ಪ್ರಾಭಲ್ಯ ಹೆಚ್ಚಾಗುತ್ತಿದ್ದು ಹಿಂದುಗಳು ಅದನ್ನು ನಿಯಂತ್ರಿಸಬೇಕು ಎಂಬುದಾಗಿದೆ. ಇದರ ಭಾಗವಾಗಿ ಮುಸ್ಲಿಂ ಸಮುದಾಯವನ್ನು ನೇರವಾಗಿ ಗುರಿ ಮಾಡಿಕೊಂಡು ಅವರ ಮೇಲೆ ಇನ್ನಿಲ್ಲದಂತೆ ಅಪವಾದಗಳನ್ನು ಹೊರಿಸಲಾಗುತ್ತಿದೆ. “ಭಾರತದಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ ಮಾಡದೇ ಹೋದರೆ, ಈ ರೀತಿಯ ದೊಡ್ಡ…

Read More

Fact Check | ನಾಟಕೀಯ ವಿಡಿಯೋವನ್ನ ಫ್ಲೈಟ್‌ನಲ್ಲಿ ನಡೆದ ನಿಜವಾದ ಗಲಾಟೆ ಎಂದು ತಪ್ಪಾಗಿ ಹಂಚಿಕೆ

“ತನ್ನ ಮಗಳಿಗೆ ಸಂಸ್ಕಾರ ಕಲಿಸಿಕೊಡಲಾಗದ ಅಪ್ಪನೊಬ್ಬ ಹಿರಿಯ ನಾಗರಿಕನೊಂದಿಗೆ ಎಷ್ಟು ಅಸಭ್ಯವಾಗಿ ಮಾತನಾಡುತ್ತಾ, ಜಗಳವಾಡುತ್ತಿದ್ದಾನೆ ನೋಡಿ.. ಭಾರತೀಯ ಏರ್‌ಲೈನ್ಸ್ ನಿಧಾ‌ನವಾಗಿ ಭಾರತೀಯ ರೈಲ್ವೇಯಾಗಿ ಬದಲಾಗುತ್ತಿದೆ.” ಎಂಬ ಬರಹದೊಂದಿಗೆ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗುತ್ತಿದೆ. https://twitter.com/TheFake_Ascetic/status/1730545363096908119 ಈ ಕುರಿತು ಪರಿಶೀಲನೆ ನಡೆಸದೇ ಸಾಕಷ್ಟು ಮಂದಿ ಶೇರ್‌ ಮಾಡುತ್ತಿದ್ದು, ಹಲವು ಮಂದಿ ವಿವಿಧ ರೀತಿಯಾದ ತಲೆಬರಹದೊಂದಿಗೆ ಪೋಸ್ಟ್‌ಗಳನ್ನು ಶೇರ್‌ ಮಾಡುತ್ತಿದ್ದಾರೆ. ಇನ್ನು ಸಾಕಷ್ಟು ಮಂದಿ ಇದು ಭಾರತೀಯ ಏರ್‌ಲೈನ್ಸ್‌ ಆಗಿರಲು ಸಾಧ್ಯವಿಲ್ಲ ಎಂದು ಕಮೆಂಟ್‌ ಕೂಡ ಮಾಡುತ್ತಿದ್ದಾರೆ. ಈ…

Read More
ಹನುಮಾನ್ ಚಾಲಿಸ

ಇಂಡಿಯಾ ಪಾಕಿಸ್ತಾನ ಪಂದ್ಯದ ವೇಳೆ 1.5ಲಕ್ಷ ಜನ ಹನುಮಾನ್ ಚಾಲಿಸ ಹಾಡಿದ್ದಾರೆ ಎಂಬುದು ಸುಳ್ಳು

ವಿಶ್ವಕಪ್ ಮುಗಿದರೂ ಅದಕ್ಕೆ ಸಂಬಂಧಿಸಿದಂತೆ ಹರಿದಾಡುತ್ತಿರುವ ಸುಳ್ಳು ಸುದ್ದಿಗಳು ಮಾತ್ರ ನಿಂತಿಲ್ಲ. ಕ್ರಿಕೆಟ್ ಅಭಿಮಾನಿಗಳು ಕೆಲವರು ಸುಳ್ಳು ಸುದ್ದಿ  ಹಬ್ಬಿಸುತ್ತಿದ್ದರೆ ಇನ್ನೂ ಕೆಲವು ಬಲಪಂಥೀಯರು ಕ್ರಿಕೆಟ್‌ಗೂ ಧರ್ಮ, ರಾಜಕಾರಣ ಬೆರೆಸಿ ಸುಳ್ಳು ಆರೋಪಗಳನ್ನು ಹಂಚಿಕೊಳ್ಳುತ್ತಿದ್ದಾರೆ. ಅವುಗಳಲ್ಲಿ ಕೆಲವು ಸುಳ್ಳು ಸುದ್ದಿಗಳನ್ನು ಕನ್ನಡ ಫ್ಯಾಕ್ಟ್‌ಚೆಕ್‌ ತಂಡವು ಸತ್ಯಶೋಧನೆ ನಡೆಸಿದ್ದು ಅವುಗಳನ್ನು ನೀವು ಇಲ್ಲಿ ನೋಡಬಹುದು. ಈಗ ಇಂಡಿಯಾ-ಪಾಕಿಸ್ತಾನ ಪಂದ್ಯಕ್ಕೆ ಸಂಬಂಧಿಸಿದಂತೆ ಸುದ್ದಿಯೊಂದು ಹರಿದಾಡುತ್ತಿದ್ದು “ಗುಜರಾತಿನ ಅಹಮದಾಬಾದ್‌ನಲ್ಲಿರುವ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ಇಂಡಿಯಾ ಪಾಕಿಸ್ತಾನ ವಿಶ್ವಕಪ್‌ ಪಂದ್ಯದ ಸಂದರ್ಭದಲ್ಲಿ…

Read More

ಪಶ್ಚಿಮ ಬಂಗಾಳದ ಚುನಾವಣೆಯ ಹಳೆಯ ವಿಡಿಯೋವನ್ನು ಮಧ್ಯಪ್ರದೇಶಕ್ಕೆ ಸೇರಿದ್ದು ಎಂದು ತಪ್ಪಾಗಿ ಹಂಚಿಕೊಳ್ಳಲಾಗಿದೆ

ಪಂಚರಾಜ್ಯಗಳಾದ ಮಧ್ಯಪ್ರದೇಶ, ಛತ್ತೀಸ್ ಗಢ, ರಾಜಸ್ಥಾನ, ತೆಲಂಗಾಣ ಹಾಗೂ ಮಿಝೋರಾಂ ನಲ್ಲಿ ಈಗಾಗಲೇ ಚುನಾವಣೆಗಳು ಜರುಗುತ್ತಿವೆ. ಈ ಸುದ್ದಿ ಬರೆಯುವ ಹೊತ್ತಿಗೆ ಮಧ್ಯ ಪ್ರದೇಶದ ಚುನಾವಣೆಯು ಮುಗಿದಿದೆ. ಆದರೆ ಮಿಕ್ಕ ರಾಜ್ಯಗಳಿಗೆ ಹೋಲಿಸಿದರೆ ಮಧ್ಯ ಪ್ರದೇಶದಲ್ಲಿ ಹರಿದಾಡಿದಷ್ಟು ಸುಳ್ಳು ಸುದ್ದಿಗಳು, ಅಪಪ್ರಚಾರಗಳು ಬೇರೆಲ್ಲೂ ನಡೆದಿಲ್ಲ. ಮಧ್ಯಪ್ರದೇಶದ ಚುನಾವಣೆಗೆ ಸಂಬಂಧಿಸಿದಂತೆ ಈಗಾಗಲೇ ಹರಿದಾಡುತ್ತಿದ್ದ ಹಲವಾರು ಸುಳ್ಳು ಸುದ್ದಿಗಳನ್ನು ಕನ್ನಡ ಫ್ಯಾಕ್ಟ್‌ಚೆಕ್ ಬಯಲುಗೊಳಿಸಿದೆ. ಅವುಗಳನ್ನು ನೀವು ಇಲ್ಲಿ ನೋಡಬಹುದು. ಇತ್ತೀಚೆಗೆ ಮಧ್ಯಪ್ರದೇಶದ ಆಡಳಿತಾರೂಢ ಬಿಜೆಪಿ ನಾಯಕ ಹಳ್ಳಿಗೆ ಪ್ರಚಾರಕ್ಕೆಂದು ಹೋದ…

Read More
ಹಿಂದುತ್ವ Hindutva

ಹಿಂದುತ್ವ ‘ಚುನಾವಣಾ ಆಟ ಆಡುವ ಕಾರ್ಡ್’ ಎಂದು ನರೇಂದ್ರ ಮೋದಿಯವರು ಹೇಳಿಲ್ಲ

‘ಹಿಂದುತ್ವ ಚುನಾವಣಾ ಆಟ ಆಡುವ ಕಾರ್ಡ್’ ಎಂದು ಪ್ರಧಾನಿ ನರೇಂದ್ರ ಮೋದಿ ತಮ್ಮ ಹಿಂದಿನ ಸಂದರ್ಶನವೊಂದರಲ್ಲಿ ಹೇಳಿದ್ದಾರೆ ಎನ್ನಲಾದ ವಿಡಿಯೋ ಒಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಫ್ಯಾಕ್ಟ್‌ಚೆಕ್: ಇದು 24 ವರ್ಷಗಳ ಹಿಂದೆ ಜೀ ನ್ಯೂಸ್‌ನವರು ನಡೆಸಿದ ನರೇಂದ್ರ ಮೋದಿಯವರ ಸಂದರ್ಶನದ ಹಳೆಯ ವಿಡಿಯೋ ಆಗಿದೆ. ಮೂಲ ಸಂದರ್ಶನದಲ್ಲಿ ವೈರಲ್ ಆಗುತ್ತಿರುವ ಹೇಳಿಕೆಗೆ ವ್ಯತಿರಿಕ್ತವಾಗಿ “ಹಿಂದುತ್ವ ಕೇವಲ ಚುನಾವಣಾ ಆಟ ಆಡುವ ಕಾರ್ಡ್ ಅಲ್ಲ” ಎಂದು ಮೋದಿಯವರು ಹೇಳಿದ್ದಾರೆ. ಅವರ ಕೊನೆಯ ಪದ “ಅಲ್ಲ” ಎಂಬುದನ್ನು ತೆಗೆದುಹಾಕಿ, ಎಡಿಟ್…

Read More
ತ್ರಿವರ್ಣ ಧ್ವಜ

ಡಿಎಂಕೆ ಸರ್ಕಾರ ಭಾರತೀಯ ತ್ರಿವರ್ಣ ಧ್ವಜವನ್ನು ಸ್ಟೇಡಿಯಂಗೆ ಕೊಂಡೊಯ್ಯದಂತೆ ತಡೆದಿದೆ ಎಂಬುದು ಸುಳ್ಳು

ಭಾರತದಲ್ಲಿಯೇ ಭಾರತದ ಧ್ವಜವನ್ನು ಅವಮಾನಿಸಲಾಗಿದೆ. ತಮಿಳುನಾಡು ಪೋಲಿಸರು ನಮ್ಮ ದೇಶದ ತ್ರಿವರ್ಣ ಧ್ವಜಕ್ಕೆ ಅವಮಾನ ಸಲ್ಲಿಸಿದ್ದಾರೆ. ಚಿದಂಬರಂ ಸ್ಟೇಡಿಯಂನಲ್ಲಿ (Chepauk ಸಚಿವ ಉದಯನಿಧಿ ಸ್ಟಾಲಿನ್ ಕ್ಷೇತ್ರ) ನಡೆದ ಪಾಕಿಸ್ತಾನದ ವಿರುದ್ದ ಆಫ್ಘಾನಿಸ್ತಾನ ವಿಶ್ವಕಪ್‌ ಪಂದ್ಯದ ವೇಳೆ ಭಾರತದ ತ್ರಿವರ್ಣ ಧ್ವಜವನ್ನು ಸ್ಟೇಡಿಯಂ ಒಳಗೆ ಕೊಂಡೋಯ್ಯದಂತೆ ತಮಿಳುನಾಡಿನ ಪೋಲಿಸರು ತಡೆದಿದ್ದಾರೆ.  ಭಾರತದ ಧ್ವಜವನ್ನು ಇಂಡಿಯಾ ಒಕ್ಕುಟದ ಡಿಎಂಕೆ ಪಕ್ಷ ನಿಷೇದಿಸಿದೆ. ಎಂಬ ಸುದ್ದಿಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ ಮತ್ತು ಡಿಎಂಕೆ ಪಕ್ಷವನ್ನು ತೀವ್ರವಾಗಿ ಖಂಡಿಸಲಾಗುತ್ತಿದೆ. ತಮಿಳುನಾಡಿನ ಬಿಜೆಪಿ ಮುಖ್ಯಸ್ಥ…

Read More

ನರೇಂದ್ರ ಮೋದಿ ಭಾರತದ ಮೊದಲ ಒಬಿಸಿ ಪ್ರಧಾನಿ ಎಂಬುದು ಸುಳ್ಳು

ಬಿಜೆಪಿಯು ಭಾರತಕ್ಕೆ ಮೊದಲ ಒಬಿಸಿ (ಇತರ ಹಿಂದುಳಿದ ವರ್ಗ) ಪ್ರಧಾನಿಯನ್ನು ನೀಡಿದೆ ಎಂದು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಪ್ರತಿಪಾದಿಸಿದ್ದಾರೆ. ಮಹಿಳೆಯರಿಗೆ 33% ಮೀಸಲಾತಿ ಒದಗಿಸುವ ಸಂವಿಧಾನದ 128ನೇ ತಿದ್ದುಪಡಿ ಕುರಿತು ರಾಜ್ಯಸಭೆಯಲ್ಲಿ ಮಾತನಾಡುವಾಗ ಅವರು ಈ ಹೇಳಿಕೆ ನೀಡಿದ್ದಾರೆ. "भारत को पहला OBC प्रधानमंत्री भाजपा (NDA) ने दिया" ◆ संसद में भाजपा अध्यक्ष जेपी नड्डा का बयान@JPNadda | #OBC | #WomenReservationBill2023 pic.twitter.com/bMRRYcbs1q — News24…

Read More

ಬಸ್ ಮೇಲಿನ ದಾಳಿಯ ಈ ಹಳೆಯ ವಿಡಿಯೋ ಗುಜರಾತ್‌ನದು, ಕರ್ನಾಟಕಕ್ಕೆ ಸಂಬಂಧಿಸಿದ್ದಲ್ಲ

ಕರ್ನಾಟಕ ಸರ್ಕಾರ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಒದಗಿಸಿದೆ. ಬಸ್ ಡ್ರೈವರ್ ಮುಸ್ಲಿಂ ಮಹಿಳೆಗೆ ಬಸ್ ನಿಲ್ಲಿಸದ ಕಾರಣ ಸರ್ಕಾರಿ ಬಸ್ಸಿನ ಮೇಲೆ ದಾಳಿ ನಡೆಸಿದ್ದಾರೆ ಎಂದು ಪ್ರತಿಪಾದಿಸಿ ವಿಡಿಯೋ ಒಂದನ್ನು ಹಂಚಿಕೊಳ್ಳಲಾಗುತ್ತಿದೆ. ಫ್ಯಾಕ್ಟ್ ಚೆಕ್ ಈ ಕುರಿತು ಹುಡುಕಿದಾಗ ಅದೇ ವಿಡಿಯೋ 2019ರಲ್ಲಿಯೇ ಇಂಟರ್‌ನೆಟ್‌ಗೆ ಅಪ್ಲೋಡ್ ಆಗಿರುವುದು ಕಂಡುಬಂದಿದೆ. ಜುಲೈ 2019ರ ವಿಡಿಯೋ ಗುಜರಾತ್‌ನ ಸೂರತ್‌ಗೆ ಸಂಬಂಧಿಸಿದ್ದಾಗಿದೆ. ದಿವ್ಯ ನ್ಯೂಸ್ ಚಾನೆಲ್ ಎಂಬ ಯೂಟ್ಯೂಬ್ ಚಾನೆಲ್‌ನ ವಿಡಿಯೋ ವರದಿಯ ಪ್ರಕಾರ ಗುಜರಾತ್‌ ರಾಜ್ಯದ ಸೂರತ್ ನ…

Read More