Fact Check: ಪ್ರಿಯಾಂಕಾ ಗಾಂಧಿ ನಾಮಪತ್ರ ಸಲ್ಲಿಕೆ ವೇಳೆ ಮಲ್ಲಿಕಾರ್ಜುನ್‌ ಖರ್ಗೆ ಅವರನ್ನು ಅವಮಾನಿಸಲಾಗಿದೆ ಎಂದು ಸುಳ್ಳು ಹಂಚಿಕೊಂಡ ಬಿಜೆಪಿ ನಾಯಕರು

ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಬುಧವಾರ ವಯನಾಡು ಲೋಕಸಭಾ ಕ್ಷೇತ್ರದ ಉಪಚುನಾವಣೆಗೆ ನಾಮಪತ್ರ ಸಲ್ಲಿಸಿದ್ದು, ಕಲ್ಪೆಟ್ಟಾ ಪಟ್ಟಣದ ಮೂಲಕ ಬೃಹತ್ ರೋಡ್ ಶೋ ನಡೆಸಿ ವಯನಾಡು ಕ್ಷೇತ್ರದ ಮತದಾರರ ಬೆಂಬಲಕ್ಕೆ ಸದಾ ಇರುವೆ ಎಂದು ಭರವಸೆ ನೀಡಿದ್ದಾರೆ. ಆದರೆ, ಈ ಕಾರ್ಯಕ್ರಮಕ್ಕೆ ಸಂಬಂಧಿಸಿದಂತೆ ಆರೋಪವೊಂದು ಕೇಳಿ ಬಂದಿದ್ದು, ನಾಮಪತ್ರ ಸಲ್ಲಿಕೆ ವೇಳೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಅವರನ್ನು  ಒಳಗೆ ಕರೆದುಕೊಂಡು ಹೋಗದೇ ಬಾಗಿಲಿನಲ್ಲಿಯೇ ನಿಲ್ಲಿಸಿ ಅವಮಾನಿಸಲಾಗಿದೆ ಎಂದು ಬಿಜೆಪಿ ನಾಯಕರು ಆರೋಪಿಸಿದ್ದಾರೆ….

Read More