Fact Check: ಗಿಳಿ ಕೂಡಿ ಹಾಕಿದಕ್ಕೆ ಶಾಸ್ತ್ರ ಹೇಳುವವರ ಬಂಧಿಸಲಾಗಿದೆಯೇ ಹೊರತು BJP ಗೆಲ್ಲುತ್ತದೆ ಎಂದಿದ್ದಕ್ಕೆ ಅಲ್ಲ
ಈ ಬಾರಿ ತಮಿಳುನಾಡಿನಲ್ಲಿ ತನ್ನ ಖಾತೆ ತೆರೆಯಲು ಶತಾಯಗತಾಯ ಪ್ರಯತ್ನಿಸುತ್ತಿರುವ ಬಿಜೆಪಿ ಯವರು ಅಲ್ಲಿನ ಆಡಳಿತಾರೂಢ ಡಿಎಂಕೆ ಪಕ್ಷದ ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ವಿರುದ್ಧ ನಾನಾ ಆರೋಪಗಳನ್ನು ಮಾಡುತ್ತಿದ್ದಾರೆ. ಜೊತೆಗೆ ಸುಳ್ಳು ಸುದ್ದಿಗಳನ್ನು ಅಸ್ತ್ರವಾಗಿ ಬಳಸುತ್ತಿದ್ದಾರೆ. ಈಗ, ತಮಿಳುನಾಡಿನಲ್ಲಿ ಗಿಣಿ ಶಾಸ್ತ್ರ ಹೇಳುವವನ ಗಿಳಿ ಚುನಾವಣೆಯಲ್ಲಿ BJP ಗೆಲ್ಲುತ್ತದೆ ಎಂದಿದ್ದಕ್ಕೆ ಶಾಸ್ತ್ರದವನನ್ನು ಎಳೆದೊಯ್ದ ಪೊಲೀಸರು! ಎಲ್ಲಿದೆ ಪ್ರಜಾಪ್ರಭುತ್ವ! ಎಂಬ ವಿಡಿಯೋ ಒಂದನ್ನು ಹರಿಬಿಡಿಟ್ಟಿದ್ದು, ಈ ವಿಡಿಯೋದಲ್ಲಿ ತಮಿಳುನಾಡಿನ ಪೋಲೀಸರು ಗಿಳಿ ಶಾಸ್ತ್ರ ಹೇಳುವ ವ್ಯಕ್ತಿಯೊಬ್ಬರನ್ನು ಎಳೆದುಕೊಂಡು ಹೋಗಿ…