Fact Check : ಪ್ಯಾಲೆಸ್ಟೈನ್ ಪರ ಪ್ರತಿಭಟನಾಕಾರರು ಪಂಜಾಬಿನಲ್ಲಿ ಮಹಾರಾಜ ರಂಜಿತ್ ಸಿಂಗ್ರವರ ಪ್ರತಿಮೆಯನ್ನು ವಿರೂಪಗೊಳಿಸಿದ್ದಾರೆ ಎಂಬುದು ಸುಳ್ಳು
ಪ್ಯಾಲೆಸ್ಟೈನ್ ಧ್ವಜವನ್ನು ಹಿಡಿದಿರುವ ವ್ಯಕ್ತಿಗಳ ಗುಂಪೊಂದು ಮಹಾರಾಜ ರಂಜಿತ್ ಸಿಂಗ್ರವರ ಪ್ರತಿಮೆಯನ್ನು ಧ್ವಂಸಗೊಳಿಸುತ್ತಿರುವ ಚಿತ್ರವನ್ನು ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. ಈ ಘಟನೆಯು ಪಂಜಾಬ್ನಲ್ಲಿ ನಡೆದಿದೆ ಎಂದು ಕೆಲವು ವರದಿಗಳು ಹೇಳುತ್ತಿದ್ದು, ಪ್ಯಾಲೆಸ್ಟೈನ್ ಬೆಂಬಲಿಗರು ಭಾರತದಲ್ಲಿ ಪ್ರತಿಮೆಯನ್ನು ವಿರೂಪಗೊಳಿಸಿದ್ದಾರೆ ಎಂದು ಉಲ್ಲೇಖಿಸಲಾಗಿದೆ. Xನ @TimesAlgebraIND ಎಂಬ ಖಾತೆಯಲ್ಲಿ ಈ ಚಿತ್ರವನ್ನು ಹಂಚಿಕೊಳ್ಳುವ ಮೂಲಕ, “ಪ್ಯಾಲೆಸ್ಟೈನ್ ಪರ ಬೆಂಬಲಿಗರು ಪಂಜಾಬ್ನಲ್ಲಿ ಮಹಾರಾಜ ರಂಜಿತ್ ಸಿಂಗ್ ಅವರ ಪ್ರತಿಮೆಯನ್ನು ವಿರೂಪಗೊಳಿಸಿದ್ದಾರೆ. ಮಹಾರಾಜ ರಂಜಿತ್ ಸಿಂಗ್ ಅವರು ಪಂಜಾಬ್ನಲ್ಲಿ ಅನೇಕ ಇಸ್ಲಾಮಿಕ್…