Fact Check: ಭಾರತದಲ್ಲಿ ಮುಸ್ಲಿಂ ಜನಸಂಖ್ಯೆ ಹೆಚ್ಚಾಗುತ್ತದೆ ಎಂಬುದು ನಿಜವೇ? ಇಲ್ಲಿದೆ ಸಂಪೂರ್ಣ ಮಾಹಿತಿ

ಕಳೆದ ಒಂದು ದಶಕಗಳಿಂದಲೂ ಹಿಂದು-ಮುಸ್ಲಿಂ ಹೆಸರಿನಲ್ಲಿ ಕೋಮುವಾದ ಬಿತ್ತಲು ಮತ್ತು ಧರ್ಮ ಕಲಹ ನಡೆಯುವಂತೆ ಮಾಡಲು ಅನೇಕ ಬಲಪಂಥೀಯ ಸಂಘಟನೆಗಳು ಮತ್ತು ಅವುಗಳ ಬೆಂಬಲಿಗರು ಪ್ರಯತ್ನಿಸುತ್ತಿದ್ದಾರೆ. ಇದರಲ್ಲಿ ಬಿಜೆಪಿ ಬೆಂಬಲಿಗರು ಸಹ ಪ್ರಮುಖವಾಗಿ ಭಾಗಿಯಾಗಿದ್ದು, ಪ್ರತಿನಿತ್ಯ ಮುಸ್ಲಿಂ ಸಮುದಾಯಕ್ಕೆ ಸಂಬಂಧಿಸಿದಂತೆ ಸುಳ್ಳು ಸುದ್ದಿಗಳನ್ನು ಹರಿಬಿಡುವುದು, ಸಂಬಂಧವಿರದ ಘಟನೆಗೆ ಕೋಮು ಆಯಾಮವನ್ನು ನೀಡುವುದು, ಹಿಂದುಗಳ ಮೇಲೆ ಮುಸ್ಲಿಮರು ಹಲ್ಲೆ ನಡೆಸಿದ್ದಾರೆ ಎಂದು ಬಿಂಬಿಸಲು ಹಳೆಯ ಘಟನೆಗಳ ವೀಡಿಯೋಗಳನ್ನು ನಿರಂತರವಾಗಿ ಹರಿಬಿಡುತ್ತಿದ್ದಾರೆ. ನಮ್ಮ ಕನ್ನಡ ಫ್ಯಾಕ್ಟ್‌ಚೆಕ್ ತಂಡ ಇಂತಹ ನೂರಾರು…

Read More
ಅಸ್ಸಾಂ

Fact Check: 1951ರಲ್ಲಿ ಅಸ್ಸಾಂನಲ್ಲಿ ಮುಸ್ಲಿಂ ಜನಸಂಖ್ಯೆ ಶೇ.14ರಷ್ಟಿತ್ತು ಎಂದು ಸುಳ್ಳು ಹರಡಿದ ಹಿಮಂತ ಬಿಸ್ವಾ ಶರ್ಮಾ

ಈ ವರ್ಷದ ಕೊನೆಯಲ್ಲಿ ಜಾರ್ಖಂಡ್‌ನಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದ್ದು, ಬಿಜೆಪಿ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರನ್ನು ರಾಜ್ಯದ ಸಹ ಉಸ್ತುವಾರಿಯಾಗಿ ನೇಮಿಸಿದೆ. ಈ ಸಮಯದಲ್ಲಿ, ಶರ್ಮಾ ಜಾರ್ಖಂಡ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು ಮತ್ತು ರಾಂಚಿಯಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದರು. ತಮ್ಮ ಭಾಷಣದಲ್ಲಿ, ಶರ್ಮಾ, “ನಾನು ಅಸ್ಸಾಂನಿಂದ ಬಂದಿದ್ದೇನೆ, ಮತ್ತು ಜನಸಂಖ್ಯಾಶಾಸ್ತ್ರದಲ್ಲಿನ ಬದಲಾವಣೆ ನನಗೆ ಮಹತ್ವದ ವಿಷಯವಾಗಿದೆ. 1951ರಲ್ಲಿ ಅಸ್ಸಾಂನಲ್ಲಿ ಮುಸ್ಲಿಮರ ಜನಸಂಖ್ಯೆ ಶೇ.14ರಷ್ಟಿತ್ತು. ಇಂದು ಅದು ಶೇ.40ಕ್ಕೆ ಏರಿದೆ. ನಾನು ಅನೇಕ ಜಿಲ್ಲೆಗಳನ್ನು ಕಳೆದುಕೊಂಡಿದ್ದೇನೆ. ನನಗೆ…

Read More

Fact Check: ಏಕರೂಪ ನಾಗರಿಕ ಸಂಹಿತೆ ಜಾರಿಗೊಳ್ಳದೇ ಇದ್ದರೆ ಭಾರತದಲ್ಲಿ ಹಿಂದುಗಳು ಹಿಂದುಳಿದವರಾಗುತ್ತಾರೆ ಎಂಬುದು ಸುಳ್ಳು

ಕಳೆದೊಂದು ದಶಕಗಳಿಂದ ಭಾರತದಲ್ಲಿ ಮುಸ್ಲಿಂ ಜನಸಂಖ್ಯೆ ಹೆಚ್ಚಾಗಿ ಹಿಂದುಗಳೇ ಹಿಂದುಳಿದವರಾಗುವ ಸಾಧ್ಯತೆ ಇದೆ ಮತ್ತು ಭಾರತ ಮುಸ್ಲಿಂ ರಾಷ್ಟ್ರವಾಗುತ್ತದೆ ಎಂದು ಬಿಂಬಿಸಲು ಅನೇಕ ವಾದಗಳನ್ನು, ಪ್ರತಿಪಾದನೆಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಸಂದೇಶ, ವೀಡಿಯೋ, ವರದಿಗಳನ್ನು ಹಂಚಿಕೊಳ್ಳುವ ಮೂಲಕ ಮುಸ್ಲಿಮರಿಂದ ಜನಸಂಖ್ಯಾ ಜಿಹಾದಿ ನಡೆಯುತ್ತಿದೆ ಎಂದು ನಿರೂಪಿಸಲು ಬಿಜೆಪಿ ಮತ್ತು ಬಲಪಂಥೀಯ ಬೆಂಬಲಿಗರು ಮತ್ತು ಅವರ ನೇತೃತ್ವದ ಮಾಧ್ಯಮಗಳು ಇನ್ನಿಲ್ಲದಂತೆ ಪ್ರಯತ್ನ ನಡೆಸುತ್ತಿದ್ದಾರೆ. ಈ ಮೂಲಕ ಹಿಂದುಗಳಲ್ಲಿ ಮುಸ್ಲಿಂ ಜನಸಂಖ್ಯೆ ಹೆಚ್ಚಾಗಿ ನಾವು ಅವರಿಗೆ ಗುಲಾಮರಂತೆ ಬದುಕಬೇಕಾಗುತ್ತದೆ ಎಂಬ ಆತಂಕವನ್ನು…

Read More

Fact Check: ಮನಮೋಹನ್ ಸಿಂಗ್ ಅವರ 18 ವರ್ಷಗಳ ಹಳೆಯ ಭಾಷಣದ ಕುರಿತು ಸುಳ್ಳು ಹೇಳಿದ ಪ್ರಧಾನಿ ಮೋದಿ

ದೇಶದಲ್ಲಿ ಲೋಕಸಭಾ ಚುನಾವಣಾ ಮೊದಲ ಹಂತದ ಚುನಾವಣೆ ಅನೇಕ ರಾಜ್ಯಗಳಲ್ಲಿ ನಡೆದಿದೆ. ಒಟ್ಟು ಏಳು ಹಂತದಲ್ಲಿ ಚುನಾವಣೆಯನ್ನು ನಡೆಸಲು ಚುನಾವಣಾ ಆಯೋಗ ನಿರ್ಧರಿಸಿದೆ. ನೆನ್ನೆಯಷ್ಟೇ ರಾಜಸ್ತಾನದ ಬನ್ಸವಾಡದಲ್ಲಿ ನಡೆದ ಬಿಜೆಪಿ ಪ್ರಚಾರ ಸಭೆಯೊಂದರಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಹೇಳಿರುವ ಕೋಮುವಾದಿ ಹೇಳಿಕೆ ಸಾಕಷ್ಟು ಚರ್ಚೆಗೆ ಕಾರಣವಾಗುತ್ತಿದೆ. ಭಾರತ ದೇಶದ ಪ್ರಧಾನ ಮಂತ್ರಿಗಳು ಧರ್ಮದ ಆಧಾರದ ಮೇಲೆ ಇಲ್ಲಿನ ಜನರನ್ನು ವಿಭಜಿಸಿ ಮಾತನಾಡುವುದು ಅಸಂವಿಧಾನಿಕ ನಡೆಯಾಗುತ್ತದೆ . ನಮ್ಮ ಸಂವಿಧಾನ ಭಾರತದ ಎಲ್ಲಾ ಧರ್ಮ, ಜಾತಿ, ಭಾಷಿಗರನ್ನು ಸಹ…

Read More