Fact Check: ಅರವಿಂದ್ ಕೇಜ್ರಿವಾಲ್ ಅವರು ಮದ್ಯ ನೀತಿ ಹಗರಣಕ್ಕೆ ಮನೀಶ್ ಸಿಸೋಡಿಯಾ ಅವರನ್ನು ದೂಷಿಸಿದ್ದಾರೆ ಎಂಬುದು ಸುಳ್ಳು
ನೆನ್ನೆಯಷ್ಟೇ ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿಯ ರೂಸ್ ಅವೆನ್ಯೂ ಕೋರ್ಟ್ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು 3 ದಿನಗಳ ಸಿಬಿಐ ವಶಕ್ಕೆ ನೀಡಿದೆ. ಆದರೆ ಅರವಿಂದ್ ಕೇಜ್ರಿವಾಲ್ ಅವರು ಮದ್ಯ ನೀತಿ ಹಗರಣಕ್ಕೆ ದೆಹಲಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರು ಕಾರಣ ಎಂದು ದೂಷಿಸಿದ್ದಾರೆ ಎಂದು ಪ್ರತಿಪಾದಿಸಿ ಅನೇಕರು ಸಾಮಾಜಿಕ ಮಾಧ್ಯಮಗಳಲ್ಲಿ ಸಂದೇಶಗಳನ್ನು ಹಂಚಿಕೊಳ್ಳುತ್ತಿದ್ದಾರೆ. ನ್ಯೂಸ್ 18, ಲೋಕಮತ್ ಮತ್ತು ಫ್ರೀ ಪ್ರೆಸ್ ಜರ್ನಲ್ ಸೇರಿದಂತೆ ಅನೇಕ ಸುದ್ದಿ ಮಾಧ್ಯಮಗಳು ಮತ್ತು ಸಿಬಿಐ ಮೂಲಗಳು…