Fact Check : ಬಾಬಾ ಸಿದ್ದಿಕಿ ಕೊಲೆಗೈದ ಆರೋಪಿ ಜೈಲಿನಲ್ಲಿ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿಲ್ಲ
ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ (ಅಜಿತ್ ಪವಾರ್ ಬಣದ) ನಾಯಕ ಬಾಬಾ ಸಿದ್ದಿಕಿಯ ಹತ್ಯೆಯ ನಂತರ ಪೊಲೀಸ್ ಕಸ್ಟಡಿಯಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಆರೋಪಿ ಮಾತನಾಡಿದ್ದಾನೆ ಎಂದು ಸುಳ್ಳು ಹೇಳಿಕೆಯೊಂದಿಗೆ ವಿಡಿಯೋವೊಂದನ್ನು ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. “ಬಾಬಾ ಸಿದ್ದಿಕಿ ಒಳ್ಳೆಯ ವ್ಯಕ್ತಿಯಲ್ಲ, ಕಾನೂನುಬಾಹಿರ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದಾನೆ. ಅವನ ವಿರುದ್ಧ MCOCA (ಮಹಾರಾಷ್ಟ್ರದ ಸಂಘಟಿತ ಅಪರಾಧ ನಿಯಂತ್ರಣ ಕಾಯ್ದೆ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿತ್ತು. “ದಯವಿಟ್ಟು ಪೊಲೀಸ್ ಇಲಾಖೆ ಮತ್ತು ಎಲ್ಲಾ ನ್ಯಾಯಾಲಯಗಳನ್ನು ಮುಚ್ಚಿ, ಇನ್ನು ಮುಂದೆ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್…