ನಟ ಅಶುತೋಷ್ ರಾಣ ಬಿಜೆಪಿಗೆ ಮತ ನೀಡುವಂತೆ ಜನರನ್ನು ಉತ್ತೇಜಿಸಿಲ್ಲ

ಪಂಚರಾಜ್ಯಗಳ ಚುನಾವಣೆಗೆ ಸಂಬಂಧಿಸಿದಂತೆ ಹೀಗಾಗಲೇ ಮತ ಚಲಾವಣೆ ಪ್ರಕ್ರಿಯೆಗಳು ಮುಗಿದಿವೆ. ಎಲ್ಲರೂ ಚುನಾವಣಾ ಫಲಿತಾಂಶಕ್ಕಾಗಿ ಕಾಯುತ್ತಿದ್ದಾರೆ. ಆದರೆ ಮಧ್ಯ ಪ್ರದೇಶದ ಚುನಾವಣೆಯಲ್ಲಿ ಹಂಚಿಕೊಳ್ಳಲಾದ ಸುಳ್ಳು ಸುದ್ದಿಗಳು ನಿಧಾನವಾಗಿ ಬೆಳಕಿಗೆ ಬರುತ್ತಿವೆ. ಇತ್ತೀಚೆಗೆ ಬಾಲಿವುಡ್ ನಟ ಅಶುತೋಷ್ ರಾಣ ಬಿಜೆಪಿಗೆ ಮತ ನೀಡುವಂತೆ ಜನರನ್ನು ಉತ್ತೇಜಿಸಿದ್ದಾರೆ ಎಂಬ ವಿಡಿಯೋ ಒಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಫ್ಯಾಕ್ಟ್‌ಚೆಕ್: ಅಶುತೋಷ್ ರಾಣ ಅವರು ಚುನಾವಣಾ ಮಹತ್ವ ಸಾರುವಂತಹ ಸಂದೇಶದೊಂದಿಗೆ ಜನರಿಗೆ ಮತದಾನ ಮಾಡುವಂತೆ ಮನವಿ ಮಾಡಲು ನಿರ್ಮಿಸಿದ ವಿಡಿಯೋ ಇದಾಗಿದೆ. ಆದರೆ ಅವರು…

Read More
ಜಾರ್ಖಂಡ್

ಜಾರ್ಖಂಡ್ ಪೊಲೀಸರ ಅಣಕು ಡ್ರಿಲ್ ವಿಡಿಯೋ ಸುಳ್ಳು ಹೇಳಿಕೆಗಳೊಂದಿಗೆ ವೈರಲ್ ಆಗಿದೆ

ನೆನ್ನೆಯಷ್ಟೆ ಮಧ್ಯಪ್ರದೇಶದ ಚುನಾವಣೆ ನಡೆದಿದೆ, ಇಡೀ ದೇಶವೇ ಡಿಸೆಂಬರ್ 3ರಂದು ಪ್ರಕಟವಾಗುವ ಪಂಚರಾಜ್ಯಗಳ ಪಲಿತಾಂಶಕ್ಕಾಗಿ ಕಾಯುತ್ತಿದ್ದಾರೆ. ಆದರೆ ಈ ಬಾರಿ ಮಧ್ಯಪ್ರದೇಶದ ಚುನಾವಣಾ ಪ್ರಚಾರಕ್ಕಾಗಿ ಎರಡೂ ರಾಷ್ಟ್ರೀಯ ಪಕ್ಷಗಳು ಸುಳ್ಳನ್ನೆ ತಮ್ಮ ಅಸ್ತ್ರವನ್ನಾಗಿ ಮಾಡಿಕೊಂಡಿವೆ. ಈ ಚುನಾವಣೆಗೆ ಸಂಬಂಧಿಸಿದಂತೆ ಈಗಾಗಲೇ ಹಲವು ಸುಳ್ಳು ಸುದ್ದಿಗಳು, ಆಪಾದನೆಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. ಇತ್ತೀಚೆಗೆ, 2016 ರಲ್ಲಿ, ಶಿವರಾಜ್ ಸಿಂಗ್ ಚೌಹಾಣ್ ಸರ್ಕಾರವು ಮಂದಸೌರ್‌ನಲ್ಲಿ ತಮ್ಮ ಉತ್ಪನ್ನಗಳಿಗೆ ಸರಿಯಾದ ಬೆಲೆಯನ್ನು ಕೇಳಿದ ರೈತರ ಮೇಲೆ ಗುಂಡು ಹಾರಿಸಿತು ಅದರಲ್ಲಿ ಆರು…

Read More
BJP

ಬಿಜೆಪಿಗೆ ಮತ ನೀಡಬೇಡಿ ಎಂದು ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ ಉಮಾ ಭಾರತಿಯವರು ಹೇಳಿಲ್ಲ

ಪಂಚರಾಜ್ಯಗಳ ಚುನಾವಣೆಯ ಈ ಸಂದರ್ಭದಲ್ಲಿ ಅನೇಕ ಸುಳ್ಳು ಸುದ್ದಿಗಳು ಆರೋಪ-ಪ್ರತ್ಯಾರೋಪಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಇನ್ನೂ ಹಲವು ಎಡಿಟೆಡ್ ವಿಡಿಯೋಗಳನ್ನು ಜನ ಸತ್ಯವೆಂದು ನಂಬಿ ಹಂಚಿಕೊಳ್ಳುತ್ತಿದ್ದಾರೆ. ಇತ್ತೀಚೆಗೆ, ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ ಉಮಾ ಭಾರತಿಯವರು ಲೋಧಿ ಸಮಾಜವನ್ನು ಕಡೆಗಣಿಸಿರುವ ಕಾರಣಕ್ಕಾಗಿ ಈ ಬಾರಿ ಬಿಜೆಪಿಗೆ ಓಟು ನೀಡದಂತೆ ಜನರಲ್ಲಿ ಕೇಳಿಕೊಂಡಿದ್ದಾರೆ ಎಂಬ ವಿಡಿಯೋ ಒಂದು ಸಾಮಾಜಿಕ ಜಾಲತಾಣಗಳಲ್ಲಿ  ವೈರಲ್ ಆಗುತ್ತಿದೆ. ಫ್ಯಾಕ್ಟ್‌ಚೆಕ್‌: ಈ ವಿಡಿಯೋ 1 ಫೆಬ್ರವರಿ 2023ರಂದು ಭೋಪಾಲ್‌ನ ಅಯೋಧ್ಯೆ ನಗರದ ಹನುಮಾನ್ ದೇವಸ್ಥಾನದಲ್ಲಿ ಮದ್ಯ…

Read More

ಮಧ್ಯಪ್ರದೇಶದಲ್ಲಿ ಬಿಜೆಪಿ ಪರ ಪ್ರಚಾರ ಮಾಡಲು ಹಿಂದೂ ಸಂತರು ನಿರಾಕರಿಸಿದ್ದಾರೆ ಎಂಬುದು ಸುಳ್ಳು

ಪಂಚರಾಜ್ಯಗಳ ಚುನಾವಣೆಗಳು ಜರುಗುತ್ತಿವೆ. ಆಯಾ ರಾಜ್ಯಗಳಲ್ಲಿ  ವಿವಿಧ ರಾಜಕೀಯ ಪಕ್ಷಗಳು ತೀವ್ರವಾದ ಪ್ರಚಾರ ಕಾರ್ಯದಲ್ಲಿ ತೊಡಗಿವೆ. ಈ ನಡುವೆ ತಮ್ಮ ಎದುರಾಳಿ ಅಭ್ಯರ್ಥಿಯನ್ನು, ಪಕ್ಷವನ್ನು ಹಿಮ್ಮೆಟ್ಟಿಸಲು ಅನೇಕ ಸುಳ್ಳು ಸುದ್ದಿಗಳನ್ನು, ವಿಡಿಯೋಗಳನ್ನು ಹರಿಬಿಡಲಾಗುತ್ತಿದೆ. ಈಗ, ಮಧ್ಯಪ್ರದೇಶದಲ್ಲಿ ಹಿಂದೂ ಸಾಧು-ಸಂತರು ಶಿವರಾಜ್ ಸಿಂಗ್ ಚೌಹಾಣ್ ಮತ್ತು ಬಿಜೆಪಿ ಪರ ಪ್ರಚಾರ ಮಾಡಲು ನಿರಾಕರಿಸಿದ್ದಾರೆ, ಈ ಬಾರಿ ಬಿಜೆಪಿ ಕೇವಲ 50 ಸ್ಥಾನಗಳಿಗೆ ಸೀಮಿತವಾಗಲಿದೆ ಎಂದು ಹೇಳಿದ್ದಾರೆ ಎಂಬ ವಿಡಿಯೋ ಒಂದು ಹಲವು ತಿಂಗಳಿಂದ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಫ್ಯಾಕ್ಟ್‌ಚೆಕ್‌:…

Read More

Fact Check : ಮಸೀದಿ ಭೂಮಿ ಮತ್ತು ಆರ್ಟಿಕಲ್‌ 370 ವಾಪಸ್ಸು ಪಡೆಯುತ್ತೇವೆ ಎಂದು ಕಮಲ್‌ ನಾಥ್‌ ಹೇಳಿಲ್ಲ

ಮಧ್ಯಪ್ರದೇಶ ಚುನಾವಣೆ ಹತ್ತಿರ ಬರುತ್ತಿದ್ದಂತೆ ಅಲ್ಲಿನ ಮಾಜಿ ಮುಖ್ಯಮಂತ್ರಿ ಕಮಲ್‌ ಅವರ ಕುರಿತು ವ್ಯಾಪಕವಾದ ಸುಳ್ಳು ಸುದ್ದಿಗಳು ಹಬ್ಬೋದಕ್ಕೆ ಪ್ರಾರಂಭವಾಗಿದೆ. ಇದು ಅಲ್ಲಿನ ಕಾಂಗ್ರೆಸ್‌ ಪಕ್ಷವನ್ನು ಇಕ್ಕಟ್ಟಿಗೆ ಸಿಲುಕಿಸಿದೆ. ಚುನಾವಣೆ ಎದುರಾಗಲಿರುವ ಈ ಸಂದರ್ಭದಲ್ಲಿ ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ ಕಮಲ್‌ನಾಥ್‌ ಅವರ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಕಮಲ್ ನಾಥ್ ಅವರು ಮುಸ್ಲಿಂ ಸಮುದಾಯದೊಂದಿಗೆ ಸಭೆ ನಡೆಸುತ್ತಿರುವುದನ್ನು ವಿಡಿಯೋದಲ್ಲೆ ಕಾಣಬಹುದಾಗಿದೆ. ಸಭೆಯಲ್ಲಿ ಕಮಲ್ ನಾಥ್ ಅವರು ಮುಸ್ಲಿಮರಿಗೆ ಮತ ನೀಡುವಂತೆ ಮನವಿ ಮಾಡಿದ್ದಾರೆ ಮತ್ತು ಮಸೀದಿ…

Read More

ಮಧ್ಯಪ್ರದೇಶ ಸಿಎಂ ಶಿವರಾಜ್ ಸಿಂಗ್ ಚೌಹಾಣ್ ಮೋದಿ ಹೆಸರಿನಲ್ಲಿ ಓಟು ಕೇಳಿ ಎಂದು ಹೇಳಿಲ್ಲ

ಪಂಚರಾಜ್ಯಗಳ ಚುನಾವಣೆ ಹತ್ತಿರ ಬರುತ್ತಿದ್ದಂತೆ ರಾಷ್ಟ್ರ ರಾಜಕಾರಣದಲ್ಲಿ ತ್ರೀವ್ರವಾದ ಸಂಚಲನ ಶುರುವಾಗಿದೆ. ರಾಷ್ಟ್ರೀಯ ಪಕ್ಷಗಳ ಆರೋಪ, ಪ್ರತ್ಯಾರೋಪಗಳ ನಡುವೆ ಕೆಲವು ಸುಳ್ಳು ಸುದ್ದಿಗಳು ಸಹ ಹರಿದಾಡುತ್ತಿವೆ. ಇತ್ತೀಚಿಗೆ ಇದೇ ರೀತಿಯ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದು. ಮಧ್ಯಪ್ರದೇಶದ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾನ್‌ರವರು ತಮ್ಮ ಪಕ್ಷದ ಆಂತರಿಕ ಸಭೆಯಲ್ಲಿ “ಬೆಲೆ ಏರಿಕೆಯಿಂದ, ನಿರುದ್ಯೋಗದಿಂದ ಮಧ್ಯಪ್ರದೇಶದ ಜನ ಬಿಜೆಪಿಯ ಕುರಿತು ಬೇಜಾರಾಗಿದ್ದಾರೆ. ಸರ್ವೆಗಳು ಸಹ ನಮ್ಮ ಪಾರ್ಟಿಯ ಸ್ಥಿತಿ ಚಿಂತಾಜನಕವಾಗಿವೆ ಎಂದು ಹೇಳುತ್ತಿವೆ. ಹಾಗಾಗಿ ನಾನು ಎಲ್ಲರಿಗೂ…

Read More