Fact Check | ಸನಾತನಿಗಳ ಮೇಲಿನ ದಾಳಿ ಕುರಿತು ಪ್ರಧಾನಿ ಮೋದಿ ಹೇಳಿಕೆ ಹಳೆಯದ್ದಾಗಿದೆ
“ಪ್ರಧಾನಿ ಮೋದಿ ಅವರು ತಮ್ಮ ಇತ್ತೀಚೆಗಿನ ಭಾಷಣದಲ್ಲಿ ಸನಾತನಿಗಳ ಮೇಲೆ ದಾಳಿ ಮಾಡುವವರಿಗೆ ಎಚ್ಚರಿಕೆಯನ್ನು ನೀಡಿದ್ದಾರೆ. ಅದರಲ್ಲೂ ಬಾಂಗ್ಲಾದೇಶದಲ್ಲಿ ನಡೆದ ಸನಾತನಿಗಳ ಮೇಲಿನ ದೌರ್ಜನ್ಯದ ವಿರುದ್ಧ ಪ್ರಧಾನಿಗಳ ಧ್ವನಿ ಇತ್ತು. ಹೀಗಾಗಿ ಭಾರತದಲ್ಲಿ ಕೂಡ ಎಚ್ಚರಿಕೆಯಿಂದ ಇರುವಂತೆ ಪ್ರಧಾನಿ ಕರೆಕೊಟ್ಟಿದ್ದಾರೆ. ಮುಂದಿನ ದಿನಗಳಲ್ಲಿ ಹಿಂದೂಗಳು ಜಾಗೃತಿಯಿಂದ ಇರಬೇಕು ಎಂದು ಸ್ವತಃ ಪ್ರಧಾನಿಗಳೇ ಕರೆಕೊಟ್ಟಿರುವುದರಿಂದ ಎಲ್ಲರೂ ಸಿದ್ದರಾಗಿ” ಎಂಬ ಬರಹದೊಂದಿಗೆ ಟಿಪ್ಪಣಿಯೊಂದನ್ನು ಹಂಚಿಕೊಳ್ಳಲಾಗುತ್ತಿದೆ. ಇದನ್ನು ಗಮನಿಸದಾಗ ಹಲವರು ಪ್ರಧಾನಿ ಮೋದಿ ಅವರೇ ಭಾರತದಲ್ಲಿ ಮುಸ್ಲಿಂ ಸಮುದಾಯದ ವಿರುದ್ಧ ಎಚ್ಚತ್ತುಕೊಳ್ಳಬೇಕು…