Fact Check : ದನದ ಕೊಟ್ಟಿಗೆ ಶುಚಿಗೊಳಿಸಿ, ಅಲ್ಲಿ ಮಲಗಿದರೆ ಬಿಪಿ-ಕ್ಯಾನ್ಸರ್ ಗುಣವಾಗುತ್ತದೆ ಎಂಬುದು ಸುಳ್ಳು

ಕ್ಯಾನ್ಸರ್ ರೋಗದಿಂದ ಗುಣಮುಖರಾಗಲು ರೋಗಿಗಳು ಲಕ್ಷಾಂತರ ರೂಪಾಯಿ ಹಣ ವ್ಯಯಿಸಿ ಅತ್ಯಾಧುನಿಕ ವೈದ್ಯಕೀಯ ವಿಜ್ಞಾನದ ಮೊರೆ ಹೋಗುತ್ತಾರೆ. ಆದರೆ, ಉತ್ತರ ಪ್ರದೇಶ ಬಿಜೆಪಿ ಸಚಿವರೊಬ್ಬರು “ಕ್ಯಾನ್ಸರ್ ರೋಗಿಯು ದನದ ಕೊಟ್ಟಿಗೆಯನ್ನು ಶುಚಿಗೊಳಿಸಿ, ಅಲ್ಲಿ ಮಲಗಿದರೆ ಕ್ಯಾನ್ಸರ್ ಕೂಡ ವಾಸಿಯಾಗುತ್ತದೆ ಮತ್ತು ಅಧಿಕ ರಕ್ತದೊತ್ತಡದ ಕಾಯಿಲೆ ಗುಣವಾಗುತ್ತದೆ” ಎಂಬ ವಿವಾದಾತ್ಮಕ ಹೇಳಿಕೆಯನ್ನು ನೀಡಿದ್ದಾರೆ. “ಅಧಿಕ ರಕ್ತದೊತ್ತಡದ (ಬಿಪಿ) ರೋಗಿಗಳಿದ್ದರೆ ಕೇಳಿ. ಇಲ್ಲಿ ಹಸುಗಳಿವೆ. ನೀವು ಪ್ರತಿನಿತ್ಯ ಬೆಳಗ್ಗೆ ಮತ್ತು ಸಂಜೆ ಹಸುಗಳ ಮೈ ನೇವರಿಸುವುದರಿಂದ ಔಷಧವನ್ನು ಅರ್ಧ ಪ್ರಮಾಣಕ್ಕೆ…

Read More

Fact Check: ಅನಾನಸ್‌ ಮತ್ತು ಬಿಸಿ ನೀರಿನಿಂದ ಕ್ಯಾನ್ಸರ್ ಗುಣಪಡಿಸಬಹುದು ಎಂಬುದಕ್ಕೆ ಯಾವುದೇ ಆಧಾರವಿಲ್ಲ

ವೈಜ್ಞಾನಿಕ ವಲಯವು ಕ್ಯಾನ್ಸರ್‌ ಕಾಯಿಲೆಗೆ ಚಿಕಿತ್ಸೆಯನ್ನು ಸಂಶೋಧಿಸುತ್ತಲೇ ಇರುವಾಗ, “ಕ್ಯಾನ್ಸರ್ ಅನ್ನು ಸೋಲಿಸುವ” ಚಿಕಿತ್ಸೆಯನ್ನು ಕಂಡುಹಿಡಿಯಲಾಗಿದೆ ಎಂದು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾಗುತ್ತಿದೆ. ವಾಟ್ಸಾಪ್ ಗುಂಪುಗಳಲ್ಲಿ ಹರಿದಾಡುತ್ತಿರುವ ವೈರಲ್ ಸಂದೇಶದ ಪ್ರಕಾರ, ಕತ್ತರಿಸಿದ ಅನಾನಸ್‌ ಹಣ್ಣಿನ ಹಲವು ತುಂಡುಗಳನ್ನು ಬಿಸಿ ನೀರಿಗೆ ಸೇರಿಸಿ ಮತ್ತು ಈ ಮಿಶ್ರಣವನ್ನು ಕುಡಿಯುವುದರಿಂದ ರೋಗದ ವಿರುದ್ಧ ಹೋರಾಡುವ ದೇಹದ ಸಾಮರ್ಥ್ಯವನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ. ಎಂದು ಪ್ರತಿಪಾದಿಸಲಾಗುತ್ತಿದೆ. ಈ ವೈರಲ್ ಸಂದೇಶವು ಕಳೆದ ಅನೇಕ ವರ್ಷಗಳಿಂದ ಹರಿದಾಡುತ್ತಿದ್ದು ಇಂಗ್ಲಿಷ್‌ನಲ್ಲಿ ಸಹ ಇದೇ ಸಂದೇಶವನ್ನು…

Read More