Fact Check| ಕೆಪಿಎಸ್ಸಿ ಪರೀಕ್ಷೆ ಬಗ್ಗೆ ಸುಳ್ಳು ಸುದ್ದಿ ಹರಡುತ್ತಿರುವ ಬಿಜೆಪಿ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವಿಯಾ
ಕರ್ನಾಟಕದಲ್ಲಿ ಆಗಸ್ಟ್ 27ರಂದು ನಡೆಯಲಿರುವ ಕೆಪಿಎಸ್ಸಿ ಪರೀಕ್ಷೆಯನ್ನು ಮುಂದೂಡುವಂತೆ ಆಗ್ರಹಿಸಿ ವಿದ್ಯಾರ್ಥಿಗಳ ಸಣ್ಣ ಗುಂಪೊಂದು ಆಗಸ್ಟ್ 24ರಂದು ಪ್ರತಿಭಟನೆ ನಡೆಸಿದ್ದು, ಇದರ ಫೋಟೋ ಬಳಸಿಕೊಂಡು “ಕರ್ನಾಟಕದಲ್ಲಿ ಕೆಪಿಎಸ್ಸಿ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ. ಆದರೆ, ರಾಹುಲ್ ಗಾಂಧಿ ಮೌನವಾಗಿದ್ದಾರೆ” ಎಂದು ಬಿಜೆಪಿ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವಿಯಾ ಸುಳ್ಳು ಸುದ್ದಿ ಹಬ್ಬಿಸುತ್ತಿದ್ದಾರೆ. ಕರ್ನಾಟಕ ಲೋಕಸೇವಾ ಆಯೋಗ ಮತ್ತು ಕರ್ನಾಟಕ ಆಡಳಿತ ಸೇವೆಗಳ ಪರೀಕ್ಷೆಗಳಲ್ಲಿ ಆಗುತ್ತಿರುವ ಹಗರಣಗಳನ್ನು ವಿರೋಧಿಸಿ ವಿದ್ಯಾರ್ಥಿಗಳು ಶೂಗಳನ್ನು ಪಾಲಿಶ್ ಮಾಡುವ ಮೂಲಕ ಪ್ರತಿಭಟನೆ ನಡೆಸುತ್ತಿದ್ದಾರೆ….