Fact Check | ಕರ್ನಾಟಕದ ಕಾಂಗ್ರೆಸ್‌ ಆಡಳಿತದಲ್ಲಿ ಹಿಂದೂಗಳಿಗೆ ರಕ್ಷಣೆ ಇಲ್ಲವೆಂದು ಮಹಾರಾಷ್ಟ್ರದ ವಿಡಿಯೋ ಹಂಚಿಕೆ

ಸಾಮಾಜಿಕ ಜಾಲತಾಣದಲ್ಲಿ ( Social Media )  “ಕರ್ನಾಟಕದಲ್ಲಿ ( Karnataka ) ಕಾಂಗ್ರೆಸ್‌ ಸರ್ಕಾರವಿದೆ. ಆದರೆ ಅಲ್ಲಿ ಹಿಂದೂಗಳಿಗೆ ( Hindus )  ಯಾವುದೇ ರಕ್ಷಣೆ ಇಲ್ಲ. ಈ ವಿಡಿಯೋ ( Video ) ನೋಡಿ ಹಿಂದೂಗಳ ಮೇಲೆ ಹೇಗೆ ಅನ್ಯಕೋಮಿನವರು ಹಲ್ಲೆ ನಡೆಸುತ್ತಿದ್ದಾರೆ” ಎಂದು ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. ಈ ವಿಡಿಯೋವು ಹಲವು ಸುಳ್ಳುಗಳಿಂದ ಕೂಡಿದ್ದು ಹಲವು ತಪ್ಪು ಮಾಹಿತಿಗಳನ್ನು ( False Information ) ಈ ವಿಡಿಯೋದ ತಲೆ ಬರಹದೊಂದಿಗೆ ಹಂಚಿಕೊಳ್ಳಲಾಗುತ್ತಿದೆ. ಈ ವಿಡಿಯೋದಲ್ಲೂ…

Read More
ಉತ್ತರ ಪ್ರದೇಶ

ಉತ್ತರ ಪ್ರದೇಶದ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ವ್ಯಕ್ತಿ ಹಿಂದುವೇ ಹೊರತು ಮುಸ್ಲಿಂ ಅಲ್ಲ

ಭಾರತದಲ್ಲಿ ದಿನಂಪ್ರತೀ ಮುಸ್ಲೀಮರಿಗೆ ಸಂಬಂಧಿಸಿದ ಸುಳ್ಳು ಸುದ್ದಿಗಳು ಹರಿದಾಡುತ್ತಿವೆ. ಇವುಗಳ ಉದ್ದೇಶ ಮುಸ್ಲಿಂ ಸಮುದಾಯದ ಕುರಿತು ಜನರಲ್ಲಿ  ದ್ವೇಷ ಹುಟ್ಟಿಸುವುದೇ ಆಗಿದೆ. ಆದ್ದರಿಂದಲೇ ಬಲಪಂಥೀಯರು ಮತ್ತು ಬಿಜೆಪಿ ಬೆಂಬಲಿಗರು ಮುಸ್ಲೀಮರ ವಿರುದ್ಧ ನಿರಂತರವಾದ ಆರೋಪಗಳಲ್ಲಿ ತೊಡಗಿದ್ದಾರೆ. ಇತ್ತೀಚೆಗೆ, ಬಾಲಕಿಯರ ಶಾಲೆಗೆ ಪ್ರವೇಶಿಸಿ “ಲೈಂಗಿಕ ಕಿರುಕುಳ” ನೀಡಿದ ಮುಸ್ಲಿಂ ಯುವಕನಿಗೆ ಥಳಿಸಿ ಪಾಠ ಕಲಿಸಿದ ಹಿಂದು ಬಾಲಕಿಯರು ಎಂಬ ಹೇಳಿಕೆಯ ವಿಡಿಯೋ ಒಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಇದನ್ನು ಹಲವು ಜನ ಬಲಪಂಥೀಯರು ಮತ್ತು ಬಿಜೆಪಿ ಬೆಂಬಲಿಗರು…

Read More

ರಾಮ ಮಂದಿರದ ಮೇಲೆ ಭಗವಧ್ವಜ ಹಾರಿಸಿದ ದಿನವೇ ಭಾರತವನ್ನು ಹಿಂದೂ ರಾಷ್ಟ್ರ ಎಂದು ಘೋಷಿಸಲಾಗುವುದು ಎಂದು ಯೋಗಿ ಆದಿತ್ಯನಾಥ್ ಹೇಳಿಲ್ಲ

ಲೋಕಸಭಾ ಚುನಾವಣೆ ಹತ್ತಿರ ಬರುತ್ತಿದ್ದಂತೆ ಅಯೋಧ್ಯೆಯ ರಾಮಮಂದಿರದ ಕೆಲಸಗಳು ಭರದಿಂದ ಸಾಗುತ್ತಿವೆ. ಅಯೋಧ್ಯೆಯ “ರಾಮ ಮಂದಿರ”, “ಹಿಂದೂ ರಾಷ್ಟ್ರ” ಮತ್ತು “ಅಖಂಡ ಭಾರತ” ಬಿಜೆಪಿ ಮತ್ತು ಬಲಪಂಥೀಯರು ಪ್ರತಿಪಾದಿಸುತ್ತಿರುವ “ಉಗ್ರ ಹಿಂದುತ್ವದ” ಪ್ರತೀಕವಾಗಿದೆ ಮತ್ತು ಆಢಳಿತಾರೂಢ ಬಿಜೆಪಿಯ ರಾಜಕೀಯದ ಅಸ್ತ್ರವಾಗಿದೆ. ಆದ್ದರಿಂದ ಬಿಜೆಪಿ ನಾಯಕರು ಭಾರತವನ್ನು ಮುಂಬರುವ ದಿನಗಳಲ್ಲಿ ಹಿಂದೂ ರಾಷ್ಟ್ರವನ್ನಾಗಿ ಪರಿವರ್ತಿಸಲಾಗುವುದು ಎಂದು ತಮ್ಮ ಪಕ್ಷದ ಬೆಂಬಲಿಗರಿಗೆ ಈಗಾಗಲೇ ಭರವಸೆಯನ್ನು ನೀಡುತ್ತಾ ಬಂದಿದ್ದಾರೆ. ಅದರಂತೆ, “ರಾಮಜನ್ಮ ಭೂಮಿಯಲ್ಲಿ ನಿರ್ಮಾಣವಾಗುತ್ತಿರುವ ಶ್ರೀರಾಮ ಮಂದಿರದ ಮೇಲೆ ಭಗವಧ್ವಜ ಹಾರಿಸಿದ…

Read More
Kerala

ಕೇರಳದಲ್ಲಿ ಹಿಂದುಗಳ ಸಂಖ್ಯೆ ಕಡಿಮೆ ಎಂದಿರುವ ಆಜ್‌ತಕ್‌ ವರದಿ ಸುಳ್ಳು

“ದೀಪಾವಳಿಯನ್ನು ಜಗತ್ತಿನ ಹಲವು ರಾಷ್ಟ್ರಗಳಲ್ಲಿ ಆಚರಿಸಲಾಗುತ್ತದೆ.  ಭಾರತದಲ್ಲಿಯೂ ಸಹ ಅಂದು ರಾಷ್ಟ್ರೀಯ ರಜೆ ಘೋಷಿಸಿದ್ದಾರೆ. ಆದರೆ ಭಾರತದಲ್ಲಿ ಒಂದು ರಾಜ್ಯ ಮಾತ್ರ ಸಡಗರದಿಂದ ದೀಪಾವಳಿಯನ್ನು ಆಚರಿಸುವುದಿಲ್ಲ. ನಿಜ ನೀವು ಕೇಳಿದ್ದು ಸತ್ಯ. ಭಾರತದಾದ್ಯಂತ  ಸಂಭ್ರಮ ಸಡಗರದಿಂದ ದೀಪಾವಳಿಯನ್ನು ಆಚರಿಸಲಾಗುತ್ತದೆ. ದೀಪಾವಳಿಯಂದೇ ಭಗವಾನ್ ರಾಮ ತನ್ನ ಹದಿನಾಲ್ಕು ವರ್ಷಗಳ ವನವಾಸ ಮುಗಿಸಿ ಅಯೋಧ್ಯೆಗೆ ಮರಳಿದ ನೆನಪಿಗಾಗಿ ಈ ಹಬ್ಬವನ್ನು ಆಚರಿಸಲಾಗುತ್ತಿದೆ.  ಆದರೆ ಕೇರಳದಲ್ಲಿ ಈ ಹಬ್ಬವನ್ನು ಆಚರಿಸುವುದಿಲ್ಲ. ಇದರ ಕಾರಣ ಏನು ಅಂದರೆ ಆ ದಿನವೇ ಮಹಾರಾಜ ಮಹಾಬಲಿಯು…

Read More

ಆಕಸ್ಮಿಕವಾಗಿ ನಾನು ಹಿಂದೂ! ಎಂದು ಜವಹರಲಾಲ್ ನೆಹರುರವರು ಹೇಳಿಲ್ಲ

ಕಳೆದ ಒಂದು ದಶಕಗಳಿಂದ ದೇಶದ ಮೊದಲ ಪ್ರಧಾನಿ ಜವಹರಲಾಲ್ ನೆಹರುರವರ ಕುರಿತು ಇನ್ನಿಲ್ಲದ ಆರೋಪಗಳು ಕೇಳಿಬರುತ್ತಿವೆ. ಪ್ರಧಾನಿ ನರೇಂದ್ರ ಮೋದಿಯವರು ಸೇರಿದಂತೆ ಬಿಜೆಪಿ ಬೆಂಬಲಿಗರು, ಬಲಪಂಥೀಯರು ದೇಶಕ್ಕೆ ನೆಹರೂರವರ ಕೊಡುಗೆಗಳು ಶೂನ್ಯ ಎನ್ನುವಂತೆ ಬಿಂಬಿಸುತ್ತಿದ್ದಾರೆ . ಇನ್ನೂ ನೆಹರುರವರ ಮೂಲ ಧರ್ಮ ಇಸ್ಲಾಂ, ಆತನೊಬ್ಬ ಅವಕಾಶವಾದಿ ರಾಜಕಾರಣಿ, ಸ್ತ್ರೀಲೋಲ ಹೀಗೆ ನಾನಾ ವಿಧವಾಗಿ ಪಂಡಿತ್ ನೆಹರೂರವರ ಇತಿಹಾಸವನ್ನು ತಿರುಚಿ ಹಂಚಿಕೊಳ್ಳಲಾಗುತ್ತಿದೆ. ನಾನು ಶಿಕ್ಷಣದಿಂದ ಕ್ರಿಶ್ಚಿಯನ್, ಸಂಸ್ಕೃತಿಯಿಂದ ಮುಸ್ಲಿಂ, ಆಕಸ್ಮಿಕವಾಗಿ ಹಿಂದೂ! ಎಂದು ಜವಾಹರಲಾಲ್ ನೆಹರು ಹೇಳಿಕೊಂಡಿದ್ದಾರೆ ಎಂಬ…

Read More
ರಾಮ ನವಮಿ

ಕರ್ನಾಟಕದ ರಾಮನವಮಿಯ ತಿರುಚಿದ ವಿಡಿಯೋವನ್ನು ಉಜ್ಜೈನಿಯದು ಎಂದು ತಪ್ಪಾಗಿ ಹಂಚಿಕೊಳ್ಳಲಾಗುತ್ತಿದೆ

ಭಾರತದಲ್ಲಿ ಕಳೆದೆರಡು ದಶಕಗಳಿಂದ ಹಿಂದು ಮುಸ್ಲಿಂ ಕಲಹ ತಾರಕಕ್ಕೇರುತ್ತಿದೆ. ಹಿಂದು ಮುಸ್ಲಿಂ ಸಾಮರಸ್ಯ ಬೆಸೆಯಬೇಕಾದ ಅಧಿಕಾರರೂಢ ಸರ್ಕಾರಗಳೇ ಕೋಮುವಾದಕ್ಕೆ ಬೆಂಬಲ ನೀಡುತ್ತಿವೆ. ಪ್ರತಿನಿತ್ಯ ಮುಸ್ಲಿಂ ಸಮುದಾಯವನ್ನು ಕೇಂದ್ರವಾಗಿರಿಸಿಕೊಂಡು, ಆ ಸಮುದಾಯದ ಮೇಲೆ ಜನರಿಗೆ ದ್ವೇಷ ಮೂಡಿಸುವ ಸಲುವಾಗಿ ಅನೇಕ ಸುಳ್ಳುಗಳನ್ನು ಹರಿಬಿಡಲಾಗುತ್ತಿದೆ. ಅಂತಹದ್ದೆ ಒಂದು ಸುಳ್ಳು ಹಲವು ದಿನಗಳಿಂದ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. “ಮಧ್ಯಪ್ರದೇಶದ ಉಜ್ಜೈನಿಯಲ್ಲಿ ಮುಸ್ಲಿಮರು ಮೊಹರಂ ಮೆರವಣಿಗೆಯ ಸಂದರ್ಭದಲ್ಲಿ “ಪಾಕಿಸ್ತಾನ ಜಿಂದಾಬಾದ್” ಎಂದು ಫೋಷಣೆ ಕೂಗಿದ್ದಾರೆ. ಮಾರನೇ ದಿನವೇ ಆ ನಗರದ ಎಲ್ಲಾ ಹಿಂದುಗಳು…

Read More

Fact Check : ಸೋನಿಯಾ ಗಾಂಧಿ ಹಿಂದೂ ವಿರೋಧಿ ಎಂದು ಮಾಜಿ ರಾಷ್ಟ್ರಪತಿ ಪ್ರಣಬ್‌ ಮುಖರ್ಜಿ ಬರೆದಿದ್ದಾರೆಂಬುದು ಸುಳ್ಳು

ಸಾಮಾಜಿಕ ಜಾಲತಾಣದಲ್ಲಿ ಪೇಪರ್‌ ಕಟಿಂಗ್‌ವೊಂದು ವೈರಲ್‌ ಆಗುತ್ತಿದೆ. ಅದರಲ್ಲಿ ‘ಸೋನಿಯಾ ಗಾಂಧಿ ಹಿಂದೂಗಳನ್ನು ದ್ವೇಷಿಸುತ್ತಾರೆ’ ಎಂಬ ಶೀರ್ಷಿಕೆ ಇದ್ದು ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿಯವರ ಪುಸ್ತಕ ದಿ ಕೊಯಲಿಷನ್ ಇಯರ್ಸ್ 1996-2012 ಪುಸ್ತಕದಲ್ಲಿ ಸೋನಿಯಾ ಗಾಂಧಿ ಹಿಂದೂ ವಿರೊಧಿ ಎಂದು ಬರೆಯಲಾಗಿದೆ. ಈ ಪೋಸ್ಟ್‌ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗುತ್ತಿದ್ದು ಸಾಕಷ್ಟು ಮಂದಿ ಇದನ್ನು ನಿಜವೆಂದು ನಂಬಿ ವ್ಯಾಪಕವಾಗಿ ಶೇರ್‌ ಮಾಡುತ್ತಿದ್ದಾರೆ. ಹಾಗಾಗಿ ಈ  ಕುರಿತು ಫ್ಯಾಕ್ಟ್‌ಚೆಕ್‌ ನಡೆಸಿದಾಗ ಸಿಕ್ಕ ಮಾಹಿತಿ ಬೇರೆಯದ್ದೇ ಆಗಿದೆ. ಅಸಲಿಗೆ ಪೇಪರ್‌…

Read More
ಕನ್ಹಯ್ಯ ಕುಮಾರ್

ಇಸ್ಲಾಂ ಧರ್ಮಕ್ಕೆ ಮತಾಂತರವಾಗಿ ಎಂದು ಕನ್ಹಯ್ಯ ಕುಮಾರ್ ಹೇಳಿಲ್ಲ

ಹಿಂದು ಧರ್ಮ ಕೆಟ್ಟದ್ದು, ಅಲ್ಲಾ ಶಕ್ತಿಶಾಲಿ: ಇಸ್ಲಾಮಿಗೆ ಮತಾಂತರ ಆಗಿ ಎಂದು ಕನ್ಹಯ್ಯ ಕುಮಾರ್ ಹೇಳಿದ್ದಾರೆ. ಎಂಬ ವಿಡಿಯೋ ಒಂದು ಹಲವು ವರ್ಷಗಳಿಂದ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಹಲವರು “ಕುತಂತ್ರಿ ಕನ್ಹಯ್ಯ ಕುಮಾರ್ ವಂಚನೆ ಬಯಲಾಗಿದೆ. ಹಿಂದೂ ಹೆಸರನ್ನು ಇಟ್ಟುಕೊಂಡು ಎಲ್ಲರ ಕಣ್ಣಗೆ ಮಣ್ಣು ಎರಚುತ್ತಿರುವ ಮುಲ್ಲಾ ಇವನು. ಅವನು ಒಬ್ಬ ದೇಶದ್ರೋಹಿ; ಅವರು(ಮೌಲಾನಾ ಅಬ್ದುಲ್ ಕಾಲಂ) ದೇಶದ ಅತಿದೊಡ್ಡ ದೇಶದ್ರೋಹಿ. ಮುಸ್ಲಿಮರ ರಹಸ್ಯ ಸಭೆಯಲ್ಲಿ ತಮ್ಮ ವಾಸ್ತವವನ್ನು ಹೇಳಿದ್ದಾರೆ. ಮುಸ್ಲಿಂ ಎಂಬ ಅವರ ಸ್ವಂತ ಹೇಳಿಕೆಯಿಂದ…

Read More
ಮುಸ್ಲಿಂ

Fact Check : ಬೆಂಗಳೂರಿನಲ್ಲಿ ಮುಸ್ಲಿಂ ಸಮುದಾಯದ ರಹಸ್ಯ ಸಭೆ ನಡೆದು ಹಿಂದೂಗಳ ಬಳಿ ವ್ಯಾಪಾರ ಬಹಿಷ್ಕರಿಸಿದ್ದಾರೆ ಎಂಬುದು ಸುಳ್ಳು

ಸಾಮಾಜಿಕ ಸಾಮರಸ್ಯವನ್ನು ಕದಡುವ ನಿಟ್ಟಿನಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಕೆಲವೊಂದು ಸುಳ್ಳು ಸುದ್ದಿಗಳು ಇತ್ತೀಚೆಗಿನ ದಿನಗಳಲ್ಲಿ ವ್ಯಾಪಕವಾಗಿ ಹರಡುತ್ತಿದೆ. ಅದರಲ್ಲೂ ಮುಸ್ಲಿಂ ಮತ್ತು ಹಿಂದೂ ಸಮಾಜದ ನಡುವೆ ದ್ವೇಷ ಬಿತ್ತುವ ಕೆಲಸಗಳು ಆಗಾಗ ನಡೆಯುತ್ತಲೇ ಇರುತ್ತವೆ. ಇದಕ್ಕೆ ಪೂರಕ ಎಂಬಂತೆ ರಾಜ್ಯದಲ್ಲಿ ಕಳೆದ ಕೆಲ ವರ್ಷಗಳಿಂದ ಹಿಂದೂ ಮುಸ್ಲಿಂ ವ್ಯಾಪರ ವಿಚಾರಕ್ಕೆ ಸಂಬಂಧ ಪಟ್ಟಂತೆ ದ್ವೇಷ ಹರಡುವ ಕೆಲಸಗಳು ಕೂಡ ನಡೆಯುತ್ತಿವೆ. ಇದಕ್ಕೆ ಪೂರಕ ಎಂಬಂತೆ ಬೆಂಗಳೂರಿನಲ್ಲಿ ಮುಸ್ಲಿಂ ಸಮುದಾಯದ ವಿರುದ್ಧ ಗಂಭೀರವಾದ ಆರೋಪವನ್ನು ಹರಿಬಿಡಲು ಯತ್ನಿಸಲಾಗಿದೆ. ಇದಕ್ಕೆ…

Read More

Fact Check : ಕಾಮಾಖ್ಯ ದೇವಿ ದೇವಸ್ಥಾನದಲ್ಲಿ ಪ್ರತಿ 15 ವರ್ಷಗಳಿಗೊಮ್ಮೆ ವಿಗ್ರಹದ ಮುಖವನ್ನು ತೋರಿಸಲಾಗುತ್ತದೆ ಎಂಬುದು ಸುಳ್ಳು

ಇತ್ತೀಚೆಗಿನ ದಿನಗಳಲ್ಲಿ ದೇವರ ಹೆಸರಿನಲ್ಲಿ ಮತ್ತು ಧಾರ್ಮಿಕ ವಿಚಾರದಲ್ಲಿ ಹಲವು ರೀತಿಯಾದ ಸುಳ್ಳು ಸುದ್ದಿಗಳು ಮತ್ತು ನಕಲಿ ಮಾಹಿತಿಯನ್ನು ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. ಇದೇ ರೀತಿಯಾಗಿ ಅಸ್ಸಾಂನ ಗುವಾಹಟಿಯಲ್ಲಿರುವ ಕಾಮಾಖ್ಯ ದೇವಿಯ ವಿಗ್ರಹವನ್ನು ಪ್ರತೀ 15 ವರ್ಷಗಳಿಗೊಮ್ಮೆ ಮಾತ್ರ ದೇವಿಯ ಮುಖವನ್ನು ಅನಾವರಣಗೊಳಿಸಲಾಗುತ್ತದೆ ಎಂದು ವೀಡಿಯೊದೊಂದನ್ನು ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದ್ದು. ಇದು ನಿಜ ಎಂದು ಭಾವಿಸಿದ ಸಾಕಷ್ಟು ಮಂದಿ ಶೇರ್‌ ಮಾಡುತ್ತಿದ್ದಾರೆ. Fact Check : ಇನ್ನು ಈ ಕುರಿತು ಫ್ಯಾಕ್ಟ್‌ ಚೆಕ್‌ ನಡೆಸಿದಾಗ…

Read More