ಕಾಂಗ್ರೆಸ್

Fact Check: ಅಮೇಥಿಯಲ್ಲಿ ಕಾಂಗ್ರೆಸ್‌ ಗ್ಯಾರಂಟಿ ಕಾರ್ಡ್‌ ಪಡೆಯಲು ಸರದಿಯಲ್ಲಿ ನಿಂತಿದ್ದ ಮಹಿಳೆ ಸಾವನ್ನಪ್ಪಿದ್ದಾರೆ ಎಂಬುದು ಸುಳ್ಳು

ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಘೋಷಿಸಿದ ‘ಘರ್ ಘರ್ ಗ್ಯಾರಂಟಿ’  ಅಡಿಯಲ್ಲಿ ಮಹಾಲಕ್ಷ್ಮಿ ಯೋಜನೆಗೆ ಅರ್ಜಿ ನಮೂನೆಯನ್ನು ಸಲ್ಲಿಸಲು ತೆರಳಿದ್ದ ಅಮೇಥಿಯ ಮಹಿಳೆಯೊಬ್ಬರು ದೀರ್ಘ ಸರದಿಯಲ್ಲಿ ನಿಂತು ಬಿಸಿಗಾಳಿಯಿಂದ ಸಾವನ್ನಪ್ಪಿದ್ದಾರೆ. ಎಂದು ಹೇಳುವ ಪೋಸ್ಟ್ ಒಂದನ್ನು ಸಾಮಾಜಿಕ ಮಾಧ್ಯಮದಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. ಅವುಗಳನ್ನು ಇಲ್ಲಿ, ಇಲ್ಲಿ ಮತ್ತು ಇಲ್ಲಿ ನೋಡಬಹುದು. ಫ್ಯಾಕ್ಟ್‌ಚೆಕ್: ವೈರಲ್ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆಯ ಕುರಿತು ಕೀವರ್ಡ್ ಹುಡುಕಾಟವನ್ನು ನಡೆಸಿದ ನಂತರ, ಯಾವುದೇ ಕಾಂಗ್ರೆಸ್ ಕಚೇರಿಯ ಬಳಿ ಹಿರಿಯ ಮಹಿಳೆಯೊಬ್ಬರು ಬಿಸಿಗಾಳಿಯ ಶಾಖದ ಅಲೆಯಿಂದ…

Read More
BBC

Fact Check: BBC ಯು ಚುನಾವಣಾ ಪೂರ್ವ ಸಮೀಕ್ಷೆ ನಡೆಸಿದೆ ಎಂಬುದು ಸುಳ್ಳು

ಬ್ರಿಟಿಷ್ ಸಾರ್ವಜನಿಕ ಸೇವಾ ಪ್ರಸಾರಕ ಬಿಬಿಸಿ ಬಿಡುಗಡೆ ಮಾಡಿದೆ ಎನ್ನಲಾದ ಚುನಾವಣಾ ಪೂರ್ವ ಸಮೀಕ್ಷೆಯನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಳ್ಳಲಾಗುತ್ತಿದೆ. 2024ರ ಲೋಕಸಭೆ ಚುನಾವಣೆಯಲ್ಲಿ ಇಂಡಿಯಾ ಮೈತ್ರಿಕೂಟಕ್ಕೆ ಬಹುಮತ ಸಿಗಲಿದೆ ಎಂದು ಸಮೀಕ್ಷೆ ಭವಿಷ್ಯ ನುಡಿದಿದೆ. “2024 ರ ಲೋಕಸಭಾ ಚುನಾವಣೆಗಾಗಿ BBC ಯಿಂದ ಸಮೀಕ್ಷೆ (ಹಿಂದಿಯಿಂದ ಅನುವಾದಿಸಲಾಗಿದೆ)” ಎಂದು ಫೇಸ್‌ಬುಕ್ ಬಳಕೆದಾರರು ಬರೆದುಕೊಂಡಿದ್ದಾರೆ, ಅವರು ‘ಭಾರತ ಮೈತ್ರಿಕೂಟ ಬಹುಮತಕ್ಕೆ ಬಹಳ ಹತ್ತಿರದಲ್ಲಿದೆ | 543 ಲೋಕಸಭಾ ಸ್ಥಾನಗಳಿಗೆ ಅತ್ಯಂತ ವಿಶ್ವಾಸಾರ್ಹ ಸಮೀಕ್ಷೆ’. (ಆರ್ಕೈವ್) ಎಂದು ಪ್ರತಿಪಾದಿಸುತ್ತಿದ್ದಾರೆ.  ಮತ್ತೊಬ್ಬ…

Read More
ಪಾಕಿಸ್ತಾನ್

ಸಮಾಜವಾದಿ ಪಕ್ಷದ ಕಾರ್ಯಕರ್ತರು ‘ಸೈಕಲ್ ನಿಶಾನ್ ಜಿಂದಾಬಾದ್’ ಎಂದು ಕೂಗಿದ್ದಾರೆಯೇ ಹೊರತು ಪಾಕಿಸ್ತಾನ್ ಜಿಂದಾಬಾದ್ ಎಂದಲ್ಲ

ಇತ್ತೀಚೆಗೆ ಇಂಡಿಯಾ ಒಕ್ಕೂಟದ ಪಕ್ಷಗಳು ಪ್ರಚಾರ ನಡೆಸುವ ವೇಳೆ ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕೂಗಲಾಗಿದೆ ಎಂದು ಆರೋಪಿಸಲಾಗುತ್ತಿದೆ. ಕರ್ನಾಟಕದಲ್ಲಿ ವಿಧಾನ ಸೌಧದಲ್ಲಿ ಈ ಘೋಷಣೆ ಕೂಗಿದ ಕುರಿತ ವಿವಾದ ಹಿನ್ನಲೆಗೆ ಸರಿಯುತ್ತಿದ್ದಂತೆ, ರಾಮನಗರದಲ್ಲಿ ಡಿ.ಕೆ ಸುರೇಶ್ ಅವರ ಪ್ರಚಾರದ ವೇಳೆ ಪಾಕಿಸ್ತಾನ್ ಜಿಂದಾಬಾದ್ ಕೂಗಲಾಗಿದೆ ಎಂದು ಮತ್ತು ರಾಯಚೂರಿನಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಕುಮಾರ್ ನಾಯಕ್ ಅವರ ಪ್ರಚಾರದ ವೇಳೆ ಈ ರೀತಿಯ ದೇಶದ್ರೋಹಿ ಘೋಷಣೆ ಕೂಗಲಾಗಿದೆ ಎಂದು ಸುಳ್ಳು ಹಂಚಿಕೊಳ್ಳಲಾಗುತ್ತಿತ್ತು. ಈಗ, ಯುಪಿಯ ಅಜಂಗಢದಲ್ಲಿ ಸಮಾಜವಾದಿ ಪಕ್ಷದ…

Read More
ದೇವೆಗೌಡ

Fact Check: ಮೈಸೂರಿನ ಸಭೆಯಲ್ಲಿ ದೇವೇಗೌಡರು ಬಿಜೆಪಿಯನ್ನು ಸೋಲಿಸಲೇಬೇಕು ಎಂದು ಕರೆಕೊಟ್ಟಿದ್ದಾರೆ ಎಂಬುದು ಸುಳ್ಳು

ಮೈಸೂರು ಲೋಕಸಭಾ ಬಿಜಪಿ ಅಭ್ಯರ್ಥಿ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಪರವಾಗಿ ಪ್ರಚಾರ ನಡೆಸಲು ಬಿಜೆಪಿ-ಜೆಡಿಎಸ್‌ ಮೈತ್ರಿ ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಭಾಗವಹಿಸಿ ಮಾತನಾಡಿದ್ದಾರೆ ಮತ್ತು ಮಂಗಳೂರಿನಲ್ಲಿ ಬಿಜೆಪಿ ಅಭ್ಯರ್ಥಿಗಳ ಪರ ಪ್ರಚಾರ ನಡೆಸಲು ಪ್ರಧಾನಿ ಮೋದಿಯವರು ರ್ಯಾಲಿ ನಡೆಸಿದ್ದಾರೆ. ಈಗ ಮೈಸೂರಿನ ಸಭೆಯಲ್ಲಿ ಎಚ್.ಡಿ ದೇವೇಗೌಡರು ಮಾತನಾಡಿರುವ ಮಾತುಗಳು ಸಾಕಷ್ಟು ವೈರಲ್ ಆಗುತ್ತಿದೆ. “ಮೈಸೂರಿಗೆ ಪ್ರಚಾರಕ್ಕೆಂದು ಆಗಮಿಸಿದ ನರೇಂದ್ರ ಮೋದಿಯವರ ಪಕ್ಕವೇ ಕೂತು ಮಾಜಿ ಪ್ರಧಾನಿ ದೇವೇಗೌಡರು ಭಾರತೀಯ ಜನತಾ ಪಾರ್ಟಿಯನ್ನು ಸೋಲಿಸಲೇಬೇಕು ಎಂದಿದ್ದಾರೆ….

Read More
Sabarimala

ಕೇರಳ ಪೋಲಿಸರು ಶಬರಿಮಲೆಗೆ ತೆರಳುತ್ತಿದ್ದ ಬಾಲಕನನ್ನು ವಶಕ್ಕೆ ಪಡೆದಿದ್ದಾರೆ ಎಂಬುದು ಸುಳ್ಳು

ಶಬರಿಮಲೆಗೆ ಸಂಬಂಧಿಸಿದಂತೆ ಇತ್ತೀಚೆಗೆ ಸಾಕಷ್ಟು ಸುಳ್ಳು ಸುದ್ದಿಗಳು, ಸುಳ್ಳು ಪ್ರತಿಪಾದನೆಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. ಇತ್ತೀಚೆಗೆ ಶಬರಿಮಲೆಯಲ್ಲಿರುವ ವಾವರ್ ಸ್ವಾಮಿ ಮಸೀದಿಯ ಕುರಿತು ಅಪಪ್ರಚಾರ ಮಾಡಿ ಅನೇಕ ಸುಳ್ಳು ಸುದ್ದಿಗಳನ್ನು ಹರಿಬಿಡಲಾಗಿತ್ತು. ಈಗ ಕೇರಳದ ಕಮುನಿಸ್ಟ್‌ ಸರ್ಕಾರ ಮತ್ತು ಇಂಡಿಯಾ ಒಕ್ಕೂಟವನ್ನು ಅಲ್ಲಗೆಳೆಯುವ ಸಲುವಾಗಿ  “ಕೇರಳದಲ್ಲಿ ಹಿಂದುಗಳ ಪರಿಸ್ಥಿತಿ ಹೇಗಿದೆ ನೋಡಿ. ಮಕ್ಕಳು ಎಂಬುದನ್ನು ಲೆಕ್ಕಿಸದೆ ಶಬರಿಮಲೆಗೆ ತೆರಳುತ್ತಿದ್ದ ಬಾಲಕನನ್ನು ಕೇರಳ ಪೋಲಿಸರು ತಮ್ಮ ವಶಕ್ಕೆ ಪಡೆದಿದ್ದಾರೆ.” ಎಂಬ ಸಂದೇಶದ ವಿಡಿಯೋ ಒಂದು ವೈರಲ್ ಆಗುತ್ತಿದೆ. ಇದನ್ನು…

Read More