Fact Check: ರಾಹುಲ್ ಗಾಂಧಿ ಸದನದಲ್ಲಿ ಹಿಂದು ವಿರೋಧಿ ಹೇಳಿಕೆ ನೀಡಿದ್ದಾರೆ ಎಂದು ಎಡಿಟ್ ವೀಡಿಯೋ ಹಂಚಿಕೊಂಡ ನಿರ್ಮಲ ಸೀತಾರಾಮನ್
ಲೋಕಸಭೆಯಲ್ಲಿ ಇಂದು(ಸೋಮವಾರ) ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಮತ್ತು ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಸೇರಿದಂತೆ ಬಿಜೆಪಿ ನಾಯಕರ ನಡುವೆ ಹಿಂದೂ ಧರ್ಮದ ಕುರಿತು ತೀವ್ರ ಮಾತಿನ ಚಕಮಕಿ ನಡೆಯಿತು. ಸಧ್ಯ ರಾಹುಲ್ ಗಾಂಧಿಯವರು ಹಿಂದು ಧರ್ಮದ ಕುರಿತು ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಹಿಂದುಗಳನ್ನು ಹಿಂಸಾತ್ಮಕ ಎಂದು ಕರೆದಿದ್ದಾರೆ ಎಂದು ಹಣಕಾಸು ಸಚಿವೆ ನಿರ್ಮಲ ಸೀತಾರಾಮನ್ ಮತ್ತು ಬಿಜೆಪಿ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವೀಯ ಆರೋಪಿಸಿದ್ದಾರೆ. ಸಚಿವೆ ನಿರ್ಮಲ ಸೀತಾರಾಮನ್…