Fact Check: ಕರ್ನಾಟಕದಲ್ಲಿ ಜೈನ ಮುನಿಗೆ ಮುಸ್ಲಿಮರು ಹಲ್ಲೆ ನಡೆಸಿದ್ದಾರೆ ಎಂದು ಮಹೇಶ್ ವಿಕ್ರಂ ಹೆಗ್ಡೆ ಹಂಚಿಕೊಂಡಿದ್ದ ಸುಳ್ಳು ಮತ್ತೆ ವೈರಲ್
ಇತ್ತೀಚೆಗೆ, ಕರ್ನಾಟಕದಲ್ಲಿ ಜೈನ ಸನ್ಯಾಸಿಯೊಬ್ಬರ ಮೇಲೆ ಮುಸ್ಲಿಮರಿಂದ ಹಲ್ಲೆ ನಡೆದಿದೆ ಎಂಬ ಹೇಳಿಕೆಯೊಂದಿಗೆ ಕೈಗೆ ಗಾಯವಾಗಿರುವ ವ್ಯಕ್ತಿಯ ಫೋಟೋ ಒಂದು ಹರಿದಾಡುತ್ತಿದೆ. ಜೈನ ಮುನಿಯ ಮೇಲಿನ ದಾಳಿಕೋರರು ‘ಕಾಂಗ್ರೆಸ್ ಜಿಂದಾಬಾದ್’ ಎಂದು ಘೋಷಣೆ ಕೂಗಿದರು ಎಂದು ಪ್ರತಿಪಾದಿಸಲಾಗುತ್ತಿದೆ. “ಇದು ಕಾಂಗ್ರೆಸ್ಗೆ ಮತ ಹಾಕುವ ಹಿಂದೂಗಳ ಭವಿಷ್ಯ” ಎಂದು ಸಂದೇಶದೊಂದಿಗೆ ಈ ಪೋಟೋವನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾಗುತ್ತಿದೆ. ಈ ಪೋಟೋವನ್ನು ಮೊದಲು ಹರಿಬಿಟ್ಟವರು ಸುಳ್ಳು ಸುದ್ಧಿ ಹರಡಲು ಮತ್ತು ಸಮುದಾಯಗಳ ನಡುವೆ ದ್ವೇಷವನ್ನು ಉತ್ತೇಜಿಸಲು ಕುಖ್ಯಾತಿ ಪಡೆದಿರುವ ಪೋಸ್ಟ್ ಕಾರ್ಡ್…