Fact Check: ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಎಂಬುದು ಸುಳ್ಳು
ಲೋಕಸಭಾ ಚುನಾವಣೆಗೂ ಮುನ್ನ ಈ ಬಾರಿ ಚುನಾವಣೆಯಲ್ಲಿ ಚಿಕ್ಕಬಳ್ಳಾಪುರ ಕ್ಷೇತ್ರದಿಂದ ಡಾ.ಕೆ. ಸುಧಾಕರ್ ಗೆದ್ದರೆ ರಾಜೀನಾಮೆ ಕೊಡುವುದಾಗಿ ಶಾಸಕ ಪ್ರದೀಪ್ ಈಶ್ವರ್ ಹೇಳಿದ್ದರು. ಈಗ ಸುಧಾಕರ್ ಗೆಲುವಿನ ಬೆನ್ನಲ್ಲಿಯೇ ಪ್ರದೀಪ್ ಈಶ್ವರ್ ಅವರು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಎಂಬ ಪತ್ರ ಒಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ವೈರಲ್ ಪತ್ರದಲ್ಲಿ “ಬಾಲ್ಯದಿಂದಲೂ ಪುಣ್ಯಕೋಟಿ ಕಥೆಯನ್ನು ಆದರ್ಶವಾಗಿಸಿಕೊಂಡು ‘ಕೊಟ್ಟ ಮಾತು-ಇಟ್ಟ ಹೆಜ್ಜೆ ತಪ್ಪಬಾರದು’ ಅನ್ನೋ ಮಾತನ್ನು ಜೀವನದುದ್ದಕ್ಕೂ ಪಾಲಿಸುತ್ತಾ ಬಂದವನು ನಾನು. ನಾನು ಕೆಲ ದಿನಗಳ ಹಿಂದೆ…