Fact Check: ರಾಮಚಂದ್ರ ಕಲ್ಸಂಗ್ರ ರಾಮೇಶ್ವರ ಕೆಫೆ ಸ್ಪೋಟದ ಭಯೋತ್ಪಾದಕ ಎಂಬುದು ಸುಳ್ಳು
ಬೆಂಗಳೂರಿನ ಕುಂದಲಹಳ್ಳಿ ಬ್ರೂಕ್ಫೀಲ್ಡ್ನ ದಿ ರಾಮೇಶ್ವರಂ ಕೆಫೆಯಲ್ಲಿ ಮಾರ್ಚ್ 1ರ ಮಧ್ಯಾಹ್ನ 1 ಗಂಟೆ ಸುಮಾರಿಗೆ ನಿಗೂಢ ಸ್ಫೋಟ ಸಂಭವಿಸಿತ್ತು. ಸಿಲಿಂಡರ್ ಅಥವಾ ಬಾಯ್ಲರ್ ಸ್ಫೋಟ ಆಗಿರಬಹುದು ಎಂದು ಆರಂಭದಲ್ಲಿ ಶಂಕಿಸಲಾಗಿತ್ತು. ಸ್ಥಳಕ್ಕಾಗಮಿಸಿದ ಪೊಲೀಸರು ಬಳಿಕ ಎಫ್ಎಸ್ಎಲ್(FSL) ತಂಡಕ್ಕೆ ಕರೆ ಕಳುಹಿಸಿದರು. ಅವರು ಬಂದು ಸಾಕ್ಷ್ಯಗಳನ್ನು ಕಲೆಹಾಕಿದರು. ಅಲ್ಲಿ ಬ್ಯಾಟರಿ ಮತ್ತು ಇತರೆ ಅವಶೇಷಗಳು ಸಿಕ್ಕಿದ ನಂತರ ಇದು ಬಾಂಬ್ ಸ್ಪೋಟ ಎಂದು ಖಚಿತವಾಗಿದೆ. ಸಧ್ಯ ಈ ಸ್ಫೋಟದ ತನಿಖೆಯನ್ನ NIA ಅಧಿಕಾರಿಗಳು ಅಧಿಕೃತವಾಗಿ ಕೈಗೆತ್ತಿಕೊಂಡಿದ್ದು, ಇದೀಗ…