Fact Check | ಬಾಲರಾಮ ಮೂರ್ತಿಗೆ ಶಿಲೆ ಕೊಟ್ಟ ರೈತನಿಗೆ ದಂಡ? – ಅಸಲಿ ವಿಷಯ ಇಲ್ಲಿದೆ
ಜನವರಿ 22 ರಂದು ಅಯೋಧ್ಯೆಯ ರಾಮಮಂಂದಿರ ಉದ್ಘಾಟಿಸಿ, ಬಾಲರಾಮ ಪ್ರತಿಮೆ ಪ್ರತಿಷ್ಠಾಪನೆ ಮಾಡಲಾಗಿದೆ. ಈ ಮೂರ್ತಿಯನ್ನು ಕೆತ್ತಿದವರು ಕರ್ನಾಟಕದ ಮೈಸೂರಿನ ಅರುಣ್ ಯೋಗಿರಾಜ್. ರಾಮನ ವಿಗ್ರಹ ತಯಾರಾಗಲು ಬಳಸಿದ ಕಪ್ಪು ಶಿಲೆ ಕೂಡ ಮೈಸೂರಿನದ್ದು ಎಂಬುದು ಎಲ್ಲರಿಗೂ ಗೊತ್ತಿರುವ ವಿಷಯ. ಆದರೆ ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋವೊಂದು ವೈರಲ್ ಆಗುತ್ತಿದ್ದು ಬಾಲರಾಮ ಮೂರ್ತಿಗೆ ಶಿಲೆ ಕೊಟ್ಟ ರೈತನಿಗೆ ಕರ್ನಾಟಕ ಕಾಂಗ್ರೆಸ್ ಸರ್ಕಾರ ಬರೋಬ್ಬರಿ 80 ಸಾವಿರ ರೂ ದಂಡವನ್ನು ಹಾಕುವ ಮೂಲಕ ರಾಮ ವಿರೋಧಿ ಎಂದು ಸಾಭೀತು ಪಡಿಸಿದೆ….