Fact check | ತೆಲಂಗಾಣದಲ್ಲಿ ಕಾಂಗ್ರೆಸ್‌ ಸರ್ಕಾರ 90,040 ರೇಷನ್‌ ಕಾರ್ಡ್‌ ರದ್ದುಗೊಳಿಸಲಾಗಿಲ್ಲ

ಸಾಮಾಜಿಕ ಜಾಲತಾಣದಲ್ಲಿ “ತೆಲಂಗಾಣದಲ್ಲಿ ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಮೆಡ್ಕಲ್‌-ಮಲ್ಕಜ್‌ಗಿರಿ ಜಿಲ್ಲೆಯಲ್ಲಿ ಸುಮಾರು 90,040 ರೇಷನ್‌ ಕಾರ್ಡ್‌ಗಳನ್ನು ರದ್ದು ಮಾಡಿದೆ. ಮುಂದೆ ಇಡೀ ರಾಜ್ಯ ಮತ್ತು ಕೇಂದ್ರದಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ದೇಶದಲ್ಲೇ ರೇಷನ್‌ ಕಾರ್ಡ್‌ ರದ್ದು ಮಾಡುವ ಸಾಧ್ಯತೆ ಇದೆ.” ಎಂಬ ಸುಳ್ಳು ಸುದ್ದಿಯನ್ನು ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. మేడ్చల్ జిల్లాలో 95,040 రేషన్ కార్డులు రద్దు.. ఆందోళనలో ప్రజలు మేడ్చల్ జిల్లాలో మొత్తంగా 95,040 తెల్ల రేషన్ కార్డులు రద్దు కాగా.. బాచుపల్లి మండలం…

Read More

Fact Check | ತೆಲಂಗಾಣದಲ್ಲಿ ಮುಸಲ್ಮಾನರ ಅಭಿವೃದ್ಧಿಗೆ ಹಿಂದೂಗಳ ದೇವಾಲಯದ ಭೂಮಿ ಹರಾಜು ಎಂಬುದು ಸುಳ್ಳು

“ತೆಲಂಗಾಣ ಸಿಎಂ ರೇವಂತ್ ರೆಡ್ಡಿ ಅವರು ಮುಸಲ್ಮಾನರ ಶ್ರೇಯೋಭಿವೃದ್ಧಿ ಮತ್ತು ಇತರೆ ಮುಸ್ಲಿಂ ಕಲ್ಯಾಣ ಯೋಜನೆಗಳಿಗೆ ನಿಧಿ ಸಂಗ್ರಹಿಸಲು ದೇವಾಲಯದ ಭೂಮಿಯನ್ನು ಹರಾಜು ಮಾಡುವುದಾಗಿ ಘೋಷಿಸಿದ್ದಾರೆ ಎಂದು NTV ತೆಲುಗು ಮತ್ತು ವೇ 2 ನ್ಯೂಸ್‌ ವರದಿ ಮಾಡಿವೆ ” ಎಂಬ ಸುದ್ದಿ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಹರಡಲಾಗುತ್ತಿದೆ. ಈ ಸುದ್ದಿಗಳನ್ನು ಸೂಕ್ಷ್ಮವಾಗಿ ಗಮನಿಸಿದರೆ ಇದನ್ನು NTV ತೆಲುಗು ಮತ್ತು ವೇ 2 ನ್ಯೂಸ್‌ ವರದಿ ಮಾಡಿರುವ ರೀತಿಯಲ್ಲೇ ಕಾಣ ಸಿಗುತ್ತವೆ. ಹಾಗಾಗಿ ಇದೇ ನಿಜವಾದ ಸುದ್ದಿ…

Read More

Fact Check | ಗೋ ಹತ್ಯೆ ಮಾಡುವವರನ್ನು ಜೈಲಿಗೆ ಹಾಕುತ್ತೇನೆ ಎಂದು ತೆಲಂಗಾಣ ಸಿಎಂ ರೇವಂತ್ ರೆಡ್ಡಿ ಹೇಳಿದ್ದು 2016ರಲ್ಲಿ

“ಗೋಮಾತೆಯನ್ನು ಹತ್ಯೆ ಮಾಡುವವರನ್ನು ಮುಲಾಜ್‌ ಇಲ್ಲದೆ ಜೈಲಿಗೆ ಹಾಕಿಸುತ್ತೇನೆ – ತೆಲಂಗಾಣದ ಮುಖ್ಯಮಂತ್ರಿ ಅಭ್ಯರ್ಥಿ ರೇವಂತ್‌ ರೆಡ್ಡಿ ಈ ಮಾತನ್ನು ಹೇಳುವ ತಾಕತ್ತು ಕರ್ನಾಟಕದ ಕಾಂಗ್ರೆಸ್ಸಿಗರಿಗೆ ಇಲ್ಲವೇ..?” ಎಂಬ ಬರಹದೊಂದಿಗೆ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗುತ್ತಿದೆ. ಅದರಲ್ಲೂ ಇತ್ತೀಚೆಗೆ ತೆಲಂಗಾಣದಲ್ಲಿ ರೇವಂತ್‌ ರೆಡ್ಡಿ ನೇತೃತ್ವದಲ್ಲಿ ಕಾಂಗ್ರೆಸ್‌ ಸರ್ಕಾರ ರಚನೆಯಾದ ನಂತರ ತೆಲಂಗಾಣದ ನೂತನ ಮುಖ್ಯಮಂತ್ರಿ ರೇವಂತ್‌ ರೆಡ್ಡಿಯವರು ಈ ಹೇಳಿಕೆಯನ್ನು ನೀಡಿದ್ದಾರೆ. ಆದರೆ ಕರ್ನಾಟಕದ ಕಾಂಗ್ರೆಸ್ಸಿಗರು ಮುಸಲ್ಮಾನರ ಓಲೈಕೆಯಲ್ಲಿ ನಿರತರಾಗಿದ್ದಾರೆ ಎಂಬ ರೀತಿಯಲ್ಲೇ ಬಿಂಬಿಸಲಾಗುತ್ತಿದೆ. ಫ್ಯಾಕ್ಟ್‌ಚೆಕ್‌…

Read More